• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಗೆದ್ದರೆ ಭಾರತ ಮಾತಾಕಿ ಜೈ, ಆರ್ ಜೆಡಿ ಸರ್ಫಾಜ್ ಅಲಂ ಗೆದ್ದರೆ ಪಾಕ್ ಗೆ ಜೈ. ಇದಲ್ಲವೇ ದುರಂತ

TNN Correspondent Posted On March 16, 2018
0


0
Shares
  • Share On Facebook
  • Tweet It

ಅರಾರಿಯಾ: ಭಾರತದ ರಾಜಕಾರಣದಲ್ಲಿ ಬಿಜೆಪಿ ವಿಭಿನ್ನವಾಗಿ ನಿಲ್ಲುವುದು ತನ್ನ ಎಲ್ಲ ಕಾರ್ಯಕ್ರಮಗಳಲ್ಲಿ, ವಿಜಯೋತ್ಸವದಲ್ಲಿ ಕಾರ್ಯಕರ್ತರು ಭಾರತ್ ಮಾತಾಕಿ ಜೈ ಎನ್ನುವ ಕಾರಣಕ್ಕೆ. ಆದರೆ ಬಿಜೆಪಿಯೇತರ ಪಕ್ಷಗಳವರು ಅದೇ ಮುಖಂಡರ, ಪಕ್ಷದ ಹೆಸರಿಗೆ ಜೈ ಅಂತಾರೆ. ಇನ್ನು ಕೆಲವು ದೇಶವಿರೋಧಿ ರಾಜಕೀಯ ಪಕ್ಷಗಳ ಬೆಂಬಲಿತರು ಪಾಕಿಸ್ತಾನಕ್ಕೆ ಜೈ ಅಂತಾರೆ. ಅಂತದ್ದೊಂದು ಘಟನೆ  ಬಿಹಾರದ ಅರಾರಿಯಾದಲ್ಲಿ ನಡೆದಿದೆ.

ದೇಶವಿರೋಧಿ ಘೋಷಣೆ ಕೂಗಿದವರನ್ನು ಬಂಧಿಸಲು ಆಗ್ರಹಿಸಿ ಪ್ರತಿಭಟನೆ

ಇತ್ತೀಚೆಗೆ ಬಿಹಾರದಲ್ಲಿ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಸರ್ಫಾಜ್ ಅಲಂ ಬೆಂಬಲಿಗರು ಪಾಕಿಸ್ತಾನದ ಪರ ಜೈಘೋಷಣೆಗಳನ್ನು ಕೂಗುವ ಮೂಲಕ ದೇಶ ವಿರೋಧಿ ಎಂಬುದನ್ನು ಆರಂಭದಲ್ಲೇ ಸಾಬೀತು ಪಡಿಸಿದ್ದಾರೆ. ಸರ್ಫಾಜ್ ಅಲಂ ನ ಮೂವರು ಬೆಂಬಲಿಗರು ಈ ದೇಶ ವಿರೋಧಿ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ರಾಷ್ಟ್ರಭಕ್ತರ ತೀವ್ರ ವಿರೋಧಕ್ಕೆ ಕಾರಣವಾಗಿದೆ.

ವಿಡಿಯೋದಲ್ಲಿ ದೇಶ ವಿರೋಧಿ ಘೋಷಣೆ ಕೂಗಿರುವುದು ಸ್ಪಷ್ಟವಾಗಿದ್ದು, ಆರೋಪಿಗಳನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ರಾಷ್ಟ್ರಭಕ್ತ ಸಂಘಟನೆಗಳು ಬೀದಿಗಿಳದು ಹೋರಾಟ ಆರಂಭಿಸಿವೆ. ಇನ್ನು ವಿಡಿಯೋದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಮೂವರನ್ನು ಬಂಧಿಸುವ ಕುರಿತು ಪೊಲೀಸರು ಜಾಲ ಬೀಸಿದ್ದು, ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಜನತಾದಳದ (ಆರ್ ಜೆಡಿ) ಸಂಸದ ಮಹಮ್ಮದ್ ತಸ್ಲಿಮುದ್ದೀನ್ ಕಳೆದ ವರ್ಷ ನಿಧನರಾಗಿದ್ದರಿಂದ ಅರಾರಿಯಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಆ ಕ್ಷೇತ್ರದಲ್ಲಿ ತಸ್ಲಿಮುದ್ದೀನ್ ಮಗ ಸರ್ಫಾಜ್ ಅಲಂ ಸ್ಫರ್ಧಿಸಿ ಗೆಲುವು ಸಾಧಿಸಿದ್ದರು. ವರದಿಗಳ ಪ್ರಕಾರ ಪಾಕ ಪರ ಘೋಷಣೆ ಕೂಗಿದವರು ಸರ್ಫಾಜ್ ಅಲಂ ಬೆಂಬಲಿಗರು ಎಂದು ತಿಳಿದು ಬಂದಿದೆ.

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search