• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಗೆದ್ದರೆ ಭಾರತ ಮಾತಾಕಿ ಜೈ, ಆರ್ ಜೆಡಿ ಸರ್ಫಾಜ್ ಅಲಂ ಗೆದ್ದರೆ ಪಾಕ್ ಗೆ ಜೈ. ಇದಲ್ಲವೇ ದುರಂತ

TNN Correspondent Posted On March 16, 2018
0


0
Shares
  • Share On Facebook
  • Tweet It

ಅರಾರಿಯಾ: ಭಾರತದ ರಾಜಕಾರಣದಲ್ಲಿ ಬಿಜೆಪಿ ವಿಭಿನ್ನವಾಗಿ ನಿಲ್ಲುವುದು ತನ್ನ ಎಲ್ಲ ಕಾರ್ಯಕ್ರಮಗಳಲ್ಲಿ, ವಿಜಯೋತ್ಸವದಲ್ಲಿ ಕಾರ್ಯಕರ್ತರು ಭಾರತ್ ಮಾತಾಕಿ ಜೈ ಎನ್ನುವ ಕಾರಣಕ್ಕೆ. ಆದರೆ ಬಿಜೆಪಿಯೇತರ ಪಕ್ಷಗಳವರು ಅದೇ ಮುಖಂಡರ, ಪಕ್ಷದ ಹೆಸರಿಗೆ ಜೈ ಅಂತಾರೆ. ಇನ್ನು ಕೆಲವು ದೇಶವಿರೋಧಿ ರಾಜಕೀಯ ಪಕ್ಷಗಳ ಬೆಂಬಲಿತರು ಪಾಕಿಸ್ತಾನಕ್ಕೆ ಜೈ ಅಂತಾರೆ. ಅಂತದ್ದೊಂದು ಘಟನೆ  ಬಿಹಾರದ ಅರಾರಿಯಾದಲ್ಲಿ ನಡೆದಿದೆ.

ದೇಶವಿರೋಧಿ ಘೋಷಣೆ ಕೂಗಿದವರನ್ನು ಬಂಧಿಸಲು ಆಗ್ರಹಿಸಿ ಪ್ರತಿಭಟನೆ

ಇತ್ತೀಚೆಗೆ ಬಿಹಾರದಲ್ಲಿ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಸರ್ಫಾಜ್ ಅಲಂ ಬೆಂಬಲಿಗರು ಪಾಕಿಸ್ತಾನದ ಪರ ಜೈಘೋಷಣೆಗಳನ್ನು ಕೂಗುವ ಮೂಲಕ ದೇಶ ವಿರೋಧಿ ಎಂಬುದನ್ನು ಆರಂಭದಲ್ಲೇ ಸಾಬೀತು ಪಡಿಸಿದ್ದಾರೆ. ಸರ್ಫಾಜ್ ಅಲಂ ನ ಮೂವರು ಬೆಂಬಲಿಗರು ಈ ದೇಶ ವಿರೋಧಿ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ರಾಷ್ಟ್ರಭಕ್ತರ ತೀವ್ರ ವಿರೋಧಕ್ಕೆ ಕಾರಣವಾಗಿದೆ.

ವಿಡಿಯೋದಲ್ಲಿ ದೇಶ ವಿರೋಧಿ ಘೋಷಣೆ ಕೂಗಿರುವುದು ಸ್ಪಷ್ಟವಾಗಿದ್ದು, ಆರೋಪಿಗಳನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ರಾಷ್ಟ್ರಭಕ್ತ ಸಂಘಟನೆಗಳು ಬೀದಿಗಿಳದು ಹೋರಾಟ ಆರಂಭಿಸಿವೆ. ಇನ್ನು ವಿಡಿಯೋದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಮೂವರನ್ನು ಬಂಧಿಸುವ ಕುರಿತು ಪೊಲೀಸರು ಜಾಲ ಬೀಸಿದ್ದು, ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಜನತಾದಳದ (ಆರ್ ಜೆಡಿ) ಸಂಸದ ಮಹಮ್ಮದ್ ತಸ್ಲಿಮುದ್ದೀನ್ ಕಳೆದ ವರ್ಷ ನಿಧನರಾಗಿದ್ದರಿಂದ ಅರಾರಿಯಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಆ ಕ್ಷೇತ್ರದಲ್ಲಿ ತಸ್ಲಿಮುದ್ದೀನ್ ಮಗ ಸರ್ಫಾಜ್ ಅಲಂ ಸ್ಫರ್ಧಿಸಿ ಗೆಲುವು ಸಾಧಿಸಿದ್ದರು. ವರದಿಗಳ ಪ್ರಕಾರ ಪಾಕ ಪರ ಘೋಷಣೆ ಕೂಗಿದವರು ಸರ್ಫಾಜ್ ಅಲಂ ಬೆಂಬಲಿಗರು ಎಂದು ತಿಳಿದು ಬಂದಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search