• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅತ್ಯಚಾರ ಆರೋಪಿಗಳಿಗೆ ಮರಣದಂಡನೆ, ಹರ್ಯಾಣ ಬಿಜೆಪಿ ಸರ್ಕಾರದಿಂದ ನೂತನ ಕಾಯ್ದೆ

TNN Correspondent Posted On March 16, 2018
0


0
Shares
  • Share On Facebook
  • Tweet It

ಚಂಡಿಗಡ್: ಯುವತಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಹರ್ಯಾಣದ ಬಿಜೆಪಿಯ ಖಟರ್ ಲಾಲ್ ಸರ್ಕಾರ ಕೈಗೊಂಡಿದೆ. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿದವರಿಗೆ ಮರಣದಂಡನೆ ವಿಧಿಸುವ ಕಾಯಿದೆಗೆ ಅನುಮತಿ ನೀಡುವ ಮೂಲಕ ಗಮನ ಸೆಳೆದಿದೆ.

ಮಹಿಳಾ ರಕ್ಷಣೆಯಲ್ಲಿ ಈ ಕಾಯ್ದೆ ವಿಶೇಷ ಪಾತ್ರ ವಹಿಸಲಿದೆ. ಈ ನಿರ್ಧಾರ ಐತಿಹಾಸಿಕವಾದದ್ದು ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟರ್ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆ ಫೆಬ್ರವರಿ 27ರಂದು ಅತ್ಯಾಚಾರ ನಿಯಂತ್ರಣ ಕಾಯಿದೆ ಬಗ್ಗೆ ಚರ್ಚೆ ನಡೆಸಿತ್ತು, ಗುರುವಾರ ನಡೆದ ಚಳಿಗಾಲದ ಅಧೀವೇಶನದಲ್ಲಿ ಸರ್ವ ಸದಸ್ಯರ ಅನುಮೋದನೆಯೊಂದಿಗೆ ಮಸೂದೆಗೆ ಅಸ್ತು ಎನ್ನಲಾಯಿತು.

ಜನವರಿಯಲ್ಲಿ ಹರ್ಯಾಣದಲ್ಲಿ ನಡೆದ ಐದು ಅತ್ಯಾಚಾರ ಸರಣಿಗಳಿಂದ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿತ್ತು. ಅಲ್ಲದೇ ಸರ್ಕಾರ ವಿರೋಧ ಪಕ್ಷಗಳ ಪ್ರಶ್ನೆಗೆ ಉತ್ತರಿಸುವಲ್ಲಿ ವಿಫಲವಾಗಿತ್ತು. ಆದ್ದರಿಂದ ಇದೀಗ ಅತ್ಯಾಚಾರ ತಡೆಯುವ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಂಡಿರುವ ಹರ್ಯಾಣ ಸರ್ಕಾರ. ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ಧರಿಸಿದೆ. ಮಸೂದೆಗೆ ಸರ್ವಸಮ್ಮತ ನೀಡಿದ ಎಲ್ಲ ಪಕ್ಷದವರಿಗೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟರ್ ಧನ್ಯವಾದ ಅರ್ಪಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search