• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರದಲ್ಲಿ ಕಂಗೆಟ್ಟ ಉಗ್ರರು, ಬಿಜೆಪಿ ಮುಖಂಡನ ಮೇಲೆ ದಾಳಿ, ಸೈನ್ಯದಿಂದ ಪ್ರತಿದಾಳಿ

TNN Correspondent Posted On March 16, 2018


  • Share On Facebook
  • Tweet It

ಪುಲ್ವಾಮ: ಕರ್ನಾಟಕ, ಕೇರಳ ಸೇರಿ ನಾನಾ ಕಡೆ ರಾಷ್ಟ್ರಭಕ್ತ ಸಂಘಟನೆಗಳು, ಬಿಜೆಪಿ ಮುಖಂಡರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಯುತ್ತಿರುವುದು ಸಾಮಾನ್ಯ. ಆದರೆ ಪಾಕಿಸ್ತಾನದ ಗಡಿಯಲ್ಲಿ ಭಯೋತ್ಪಾದಕರು ಬಿಜೆಪಿ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ದಿಟ್ಟ ನಿರ್ಧಾರಗಳಿಂದ ಕಂಗಾಲಾಗಿರುವ ಭಯೋತ್ಪಾದಕರು ಮತ್ತು ಕೆಲವು ದೇಶ ದ್ರೋಹಿಗಳು ಬಿಜೆಪಿ ಮುಖಂಡರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಿರುವ ಅನುಮಾನ ಮೂಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮುಖಂಡನ ಮೇಲೆ ದಾಳಿ ನಡೆಸಿ, ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಜಮ್ಮು ಕಾಶ್ಮೀರದ ಬಿಜೆಪಿ ಮುಖಂಡ ಅನ್ವರ್ ಖಾನ್ ಮೇಲೆ ಏಕಾಏಕಿ ಪಾಕ್ ಪ್ರಚೋಧಿತ, ದೇಶವಿರೋಧಿ ಕೃತ್ಯಗಳ ಬೆಂಬಲಿತ ಕೆಲ ಸ್ಥಳೀಯರ ಬೆಂಬಲದೊಂದಿಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ದಿಟ್ಟ ಕ್ರಮಗಳಿಂದ ಜಮ್ಮು ಕಾಶ್ಮೀರ ಸೇರಿ ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಭಯೋತ್ಪಾದಕರು ಇದೀಗ ಬಿಜೆಪಿ ಮುಖಂಡರನ್ನೆ ಮುಗಿಸುವ ಹುನ್ನಾರ ನಡೆಸಿದ್ದಾರೆ. ದಾಳಿಯಲ್ಲಿ ಬಿಜೆಪಿ ಮುಖಂಡ ಅನ್ವರ್ ಖಾನ್ ಗೆ ಯಾವುದೇ ಪ್ರಾಣಾಪಾಯವಾಗಲಿಲ್ಲ. ದಾಳಿಯಲ್ಲಿ ಅನ್ವರ್ ಖಾನ್ ಜೊತೆಗಿದ್ದ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ.

ಅನ್ವರ್ ಖಾನ್ ಮೇಲೆ ಉಗ್ರರು ದಾಳಿ ನಡೆಸುತ್ತಿದ್ದಂತೆ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಭಯೋತ್ಪಾದಕರ ಮೇಲೆ ಪ್ರತಿ ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯಿಂದ ಬಿಜೆಪಿ ಅನ್ವರ್ ಖಾನ್ ರನ್ನು ರಕ್ಷಿಸಿದ್ದಾರೆ. ಇನ್ನು ಉಗ್ರರೊಂದಿಗಿನ ಹೋರಾಟದಲ್ಲಿ ಸೈನ್ಯದ ಓರ್ವ ಸಿಬ್ಬಂದಿಗೆ ಗಾಯಗಳಾಗಿವೆ.

  • Share On Facebook
  • Tweet It


- Advertisement -


Trending Now
ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
Tulunadu News May 27, 2023
ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
Tulunadu News May 25, 2023
Leave A Reply

  • Recent Posts

    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
    • ಕಾಂಗ್ರೆಸ್ ಬಾಯಿಗೆ ಬಂದ ತುತ್ತನ್ನು ಮೈಮೇಲೆ ಚೆಲ್ಲಿಕೊಂಡಿದೆ!!
    • ಕಾಂಗ್ರೆಸ್ಸಿಗರೇ ಕ್ಯಾಲ್ಕುಲೇಟರ್ ನಲ್ಲಿ ಲೆಕ್ಕ ಹಾಕಿ ಘೋಷಣೆ ಕೂಗಿ!!
  • Popular Posts

    • 1
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 2
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search