• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮ ಭಕ್ತರಿಗೆ ಹರ್ಷದ ಸುದ್ದಿ: ಶ್ರೀರಾಮಸೇತುವೆಗೆ ಧಕ್ಕೆ ತರಲ್ಲ, ಕೇಂದ್ರ ಸರ್ಕಾರ ಸ್ಪಷ್ಟನೆ

TNN Correspondent Posted On March 17, 2018
0


0
Shares
  • Share On Facebook
  • Tweet It

ದೆಹಲಿ: ಕೋಟ್ಯಂತರ ಹಿಂದೂಗಳ ದೈವಕೇಂದ್ರ, ಶ್ರೀರಾಮ ಲಂಕೆಗೆ ಪ್ರಯಾಣ ಬೆಳೆಸಲು ಕಟ್ಟಿದ ಭಾರತ ಶ್ರೀಲಂಕಾ ಮಧ್ಯೆ ಇರುವ ಪೌರಾಣಿಕ ಇತಿಹಾಸ ಹೊಂದಿರುವ ಶ್ರೀರಾಮಸೇತುಯನ್ನು ಧ್ವಂಸ ಗೊಳಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಕೋಟ್ಯಂತರ ಹಿಂದೂಗಳ ಶ್ರದ್ಧಾ ಕೇಂದ್ರಕ್ಕೆ ಧಕ್ಕೆ ತರುವುದಿಲ್ಲ ಎಂಬ ಭರವಸೆಯನ್ನು ನೀಡಿದೆ.

ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ, ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಪಿಐಎಲ್ ವಿಚಾರವಣೆ ವೇಳೆ ಈ ಕೇಂದ್ರ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ. ಕೇಂದ್ರ ನೌಕಾ ಸಾರಿಗೆ ಸಚಿವಾಲಯವು ಮುಖ್ಯ ನ್ಯಾಯಮೂರ್ತಿ ಜಸ್ಟಿಸ್‌ ದೀಪಕ್‌ ಮಿಶ್ರಾ ಅವರ ನೇತೃತ್ವದ ಪೀಠಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಶ್ರೀರಾಮಸೇತುವೆಯನ್ನು ಧ್ವಂಸಗೊಳಿಸುವುದಿಲ್ಲ ಎಂದು ಸ್ಟಷ್ಟನೆ ನೀಡಿದೆ.

ಕೇಂದ್ರ ಸರ್ಕಾರದ ಪರ  ಕೋರ್ಟ್ ನಲ್ಲಿ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪಿಂಕಿ ಆನಂದ್ ಕೇಂದ್ರ ಸರ್ಕಾರದ ನಿಲುವುದನ್ನು ನ್ಯಾಯಪೀಠದ ಮುಂದೆ ತಿಳಿಸಿದರು. ರಾಮಸೇತುವನ್ನು ಧ್ವಂಸಗೊಳಿಸದಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಡಾ. ಸುಬ್ರಮಣಿಯನ್ ಸ್ವಾಮಿ ಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ದೇಶದ ಕೋಟ್ಯಂತರ ಜನರ ಭಾವನೆಗಳಿಗೆ ಬೆಲೆ ನೀಡಿ, ದೇಶದ ಹಿತ ಕಾಪಾಡುವ ದೃಷ್ಟಿಯಿಂದ ಶ್ರೀರಾಮಸೇತುವನ್ನು ಧ್ವಂಸಗೊಳಿಸುವುದಿಲ್ಲ. ಸೇತು ಸಮುದ್ರಂ ಯೋಜನೆಗೆ ಬೇರೆ ಮಾರ್ಗ ಕಂಡುಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಫಿಡವಿಟ್ ನಲ್ಲಿ ತಿಳಿಸಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search