• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಾಯ್ ವಾಲಾ ಒಬ್ಬ ಪ್ರಧಾನಿಯೂ ಆಗಬಹುದೆಂದು ತೋರಿಸಿಕೊಟ್ಟ ಮೋದಿಯವರೇ ನನಗೆ ಆದರ್ಶ ಎಂದಿದ್ದು ಯಾರು ಗೊತ್ತೇ?

TNN Correspondent Posted On March 19, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೆಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಚಹ ಮಾರುತ್ತಿದ್ದ ವ್ಯಕ್ತಿಯೊಬ್ಬ ದೇಶದ ಜನರ ಮನಗೆದ್ದು ಪ್ರಧಾನಿ ಹುದ್ದೆ ಅಲಂಕರಿಸುತ್ತಾರೆ ಎಂಬ ಒಂದೇ ಸಾಲಿನಲ್ಲಿ ಮೋದಿ ಸ್ಫೂರ್ತಿಯ ಚಿಲುಮೆ ಎನಿಸುತ್ತಾರೆ.

ಅಷ್ಟೇ ಅಲ್ಲ, ಮುಖ್ಯಮಂತ್ರಿಯಾದ ಮೂರು ಅವಧಿ ಹಾಗೂ ಪ್ರಧಾನಿಯಾದ ಈ ನಾಲ್ಕು ವರ್ಷದಲ್ಲೇ ಒಂದೇ ಒಂದು ರಜೆ ತೆಗೆದುಕೊಳ್ಳದೆ, ಒಂದು ದಿನವೂ ವಿರಮಿಸದೆ ಇಡೀ ಜೀವನವನ್ನೇ ದೇಶದ ಸೇವೆಗೆ ಮುಡಿಪಿಟ್ಟ ಅವರು ಸಾರ್ವಕಾಲಿಕ ಸ್ಫೂರ್ತಿ ಎಂದರೆ ಪ್ರಾಯಶಃ ಅದು ಅತಿಶಯೋಕ್ತಿಯಾಗಲಾರದು.

ಇಂತಿಪ್ಪ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಆದರ್ಶ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ ಬಾಲಿವುಡ್ ನಟಿಯೊಬ್ಬರು. ಹೌದು, ಚಾಯ್ ವಾಲಾ ಆಗಿದ್ದ ನರೇಂದ್ರ ಮೋದಿ ಪ್ರಧಾನಿ ಹುದ್ದೆ ತಲುಪುವ ಎತ್ತರಕ್ಕೆ ಬೆಳೆಯುತ್ತಾರೆ ಎಂಬುದೇ ನನಗೆ ಸ್ಫೂರ್ತಿ ಹಾಗೂ ಅವರೇ ನನಗೆ ಆದರ್ಶ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ತಿಳಿಸಿದ್ದಾರೆ.

ನ್ಯೂಸ್ 18 ಸುದ್ದಿಸಂಸ್ಥೆ ಆಯೋಜಿಸಿದ್ದ ರೈಸಿಂಗ್ ಇಂಡಿಯಾ ಕಾರ್ಯಕ್ರಮದಲ್ಲಿ ಮಾತನಾಡಿದ ಕಂಗನಾ, ನನಗೆ ನಿತ್ಯವೂ ಪತ್ರಿಕೆ ಓದುವ ಹವ್ಯಾಸವಿಲ್ಲ. ಹಾಗಾಗಿ ನನಗೆ ಜಗತ್ತಿನ ಆಗು-ಹೋಗುಗಳ ಬಗ್ಗೆ ಅಷ್ಟೊಂದು ಗೊತ್ತಿಲ್ಲ. ಆದರೆ ಮೋದಿ ಅವರ ಕುರಿತು ಬರಹ ಓದಿದ್ದೇನೆ, ತಿಳಿದುಕೊಂಡಿದ್ದಾರೆ. ಹಾಗಾಗಿ ಚಾಯ್ ವಾಲಾ ಟು ಪ್ರಧಾನಿ ಕತೆ ಇಷ್ಟ. ಅವರೇ ನನಗೆ ಆದರ್ಶ, ನಾನು ಮೋದಿ ಅವರ ದೊಡ್ಡ ಅಭಿಯಾನಿ ಎಂದು ಹೇಳಿದ್ದಾರೆ.

ಹೀಗೆ ಕಂಗನಾ ರಣಾವತ್ ಅವರು ನಾನು ಮೋದಿ ಅಭಿಮಾನಿ ಎನ್ನುತ್ತಲೇ ಕಿಕ್ಕಿರಿದು ತುಂಬಿದ್ದ ಜನ ಚಪ್ಪಾಳೆ ತಟ್ಟಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಂಗನಾ, ನೋಡಿ ನನ್ನ ಹಾಗೆಯೇ ಇಲ್ಲೂ ಸಾಕಷ್ಟು ಜನ ನರೇಂದ್ರ ಮೋದಿ ಅವರ ಅಭಿಮಾನಿಗಳಿದ್ದಾರೆ ಎಂದು ತಿಳಿಸಿದ್ದಾರೆ.

ಅಲ್ಲದೆ, ನರೇಂದ್ರ ಮೋದಿ ಅವರನ್ನು ತೆಗಳಲೆಂದೇ ದೇಶದ ಬಗ್ಗೆ ಕೆಟ್ಟದಾಗಿ ಮಾತನಾಡುವವರ ಕುರಿತು ಸಹ ಬಾಲಿವುಡ್ ಬೆಡಗಿ ಪ್ರತಿಕ್ರಿಯಿಸಿದ್ದು, ಇತ್ತೀಚೆಗೆ ದೇಶದ ಕುರಿತು ಕೆಟ್ಟದಾಗಿ ಮಾತನಾಡುವುದೇ ಒಂದು ಟ್ರೆಂಡ್ ಆಗಿದೆ. ಇದು ಯಾಕೆ ಹೀಗೆ ಎಂದು ನನಗೆ ತಿಳಿಯುತ್ತಿಲ್ಲ. ದೇಶದ ಬಗ್ಗೆ ಹೀಗೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ ಎಂದು ಕಂಗನಾ ಪರೋಕ್ಷವಾಗಿ ಮೋದಿ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ.

 

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search