• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇರುವ ಶಸ್ತ್ರಾಸ್ತ್ರದಲ್ಲೇ ನಮ್ಮ ಸೈನಿಕರು ಸಮರ್ಥವಾಗಿ ಹೋರಾಟಬಲ್ಲರು ಎಂದ ರಾವತ್, ಕೇಂದ್ರ ವಿರೋಧಿಗಳಿಗೆ ಉರಿ

TNN Correspondent Posted On March 19, 2018


  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಬಿಪಿನ್ ರಾವತ್ ಕೇಂದ್ರ ಸರ್ಕಾರ ಶಸ್ತ್ರಾಸ್ತ್ರ ಖರೀದಿಗೆ ನೀಡುತ್ತಿರುವ ಹಣ ಸಮರ್ಪಕ ಎನಿಸುತ್ತಿಲ್ಲ ಎಂದು ತುಸು ಅಸಮಾಧಾನ ಹೊರಹಾಕುತ್ತಲೇ, ಕೆಲ ಮೋದಿ ವಿರೋಧಿಗಳು, ಎಡಬಿಡಂಗಿಗಳು, ಸ್ವಯಂಘೋಷಿತ ಬುದ್ಧಿಜೀವಿಗಳು ಕೇಂದ್ರ ಸರ್ಕಾರವನ್ನು ತೆಗಳಿದ್ದರು. ಕೇಂದ್ರ ಸರ್ಕಾರ ಸುಮ್ಮನೆ ದೇಶಪ್ರೇಮ, ಸೈನಿಕರ ಗುಣಗಾನ ಮಾಡುತ್ತದೆ. ಆದರೆ ಅವರಿಗೆ ಸರಿಯಾದ ಶಸ್ತ್ರಾಸ್ತ್ರ ನೀಡಿಲ್ಲ ಎಂದು ಬೊಬ್ಬೆ ಹಾಕಿದರು.

ಇದಾದ ಬಳಿಕ ಎಚ್ಚೆತ್ತುಕೊಂಡ ಸಂಸದೀಯ ಸಮಿತಿ, ಶಸ್ತ್ರಾಸ್ತ್ರ ಖರೀದಿಗಾಗಿ ವರದಿಯೊಂದನ್ನು ಸಂಸತ್ತಿಗೆ ನೀಡಿದೆ. ಆದಾಗಲೇ ಶಸ್ತ್ರಾಸ್ತ್ರ ಸಂಗ್ರಹಣೆಗೆ ಏನೇನು ತಯಾರಿ ಬೇಕೋ, ಅದೆಲ್ಲವನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ.

ಇದರಿಂದ ಸಮಾಧಾನಗೊಂಡ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಭಾರತೀಯ ಸೈನ್ಯದಲ್ಲಿರುವ ಶಸ್ತ್ರಾಸ್ತ್ರಗಳು ಹಳೆಯದಾಗಿವೆ ನಿಜ. ಈಗ ಅವುಗಳ ಸಂಗ್ರಹಣೆ ಪ್ರಕ್ರಿಯೆಯೂ ಚಾಲ್ತಿಯಲ್ಲಿದೆ. ಆದರೂ, ಪರಿಸ್ಥಿತಿ ಹೇಗೆಯೇ ಇದ್ದರು. ಎಂತಹ ವಿಷಮ ಪರಿಸ್ಥಿತಿಯೇ ಎದುರಾದರೂ, ಇರುವ ಶಸ್ತ್ರಾಸ್ತ್ರಗಳನ್ನೇ ಬಳಸಿಕೊಂಡು ಹೇಗೆ ಹೋರಾಡಬೇಕು ಎಂಬುದು ಭಾರತೀಯ ಸೈನಿಕರಿಗೆ ಗೊತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಭಾರತೀಯ ಸೈನ್ಯಕ್ಕೆ ಕೇಂದ್ರ ಸರ್ಕಾರ ನೀಡುವ ಎಲ್ಲ ಹಣವೂ ಸೈನಿಕರ ನಿರ್ಹವಣೆಗೆ ಮಾತ್ರ ಖರ್ಚಾಗುತ್ತದೆ ಎಂಬ ಮಾತು ಸುಳ್ಳು. ಸೈನ್ಯಕ್ಕೆ ವಿನಿಯೋಗಿಸುವ ಹಣದಲ್ಲಿ ಶೇ.35ರಷ್ಟನ್ನು ಶಸ್ತ್ರಾಸ್ತ್ರ ಖರೀದಿಗೆ ನೀಡಲಾಗುತ್ತದೆ. ನಮ್ಮ ಸೈನ್ಯ ಎಂದಿಗೂ ಸಮರ್ಥವಾಗಿದ್ದು, ಯಾವುದೇ ವಿಷಮ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ.

ಬಿಪಿನ್ ರಾವತ್ ಅವರ ಈ ಹೇಳಿಕೆಯಿಂದ, ಸಣ್ಣ ಲೋಪವನ್ನೇ ದೊಡ್ಡದು ಮಾಡಿ, ಕೇಂದ್ರ ಸರ್ಕಾರವನ್ನು ತೆಗಳಿದ್ದ ಕೆಲ ಅತೃಪ್ತ ಮನಸ್ಸುಗಳಿಗೆ ಉರಿ ಆರಂಭವಾಗಿದ್ದು ಮಾತ್ರ ಸುಳ್ಳಲ್ಲ.

  • Share On Facebook
  • Tweet It


- Advertisement -


Trending Now
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
Tulunadu News January 30, 2023
Leave A Reply

  • Recent Posts

    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
  • Popular Posts

    • 1
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 2
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 3
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 4
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 5
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search