• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರತಿಭಟನೆ ಮಾಡುತ್ತಿದ್ದ ರೈತರ ಗುಡಿಸಲಿಗೇ ಬೆಂಕಿ, ರೈತರ ಗೋಳು ಕೇಳಲ್ಲವೇ ಅರವಿಂದ್ ಕೇಜ್ರಿವಾಲ್?

TNN Correspondent Posted On March 19, 2018


  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಮಧ್ಯಪ್ರದೇಶದಲ್ಲಿ ಸಾವಿರಾರು ರೈತರು ಪ್ರತಿಭಟನೆ ಮಾಡಿದ್ದು ದೇಶಾದ್ಯಂತ ಸುದ್ದಿಯಾಯಿತು. ಅಲ್ಲಿನ ಸರ್ಕಾರದ ವಿರುದ್ಧ ಎಲ್ಲರೂ ಬಾಯಿಗೆ ಬಂದಹಾಗೆ ಮಾತನಾಡಿದರು. ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಆರು ತಿಂಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಬಗೆಹರಿಸಿತು.

ಆದರೆ, ಇದೇ ಬೇರೆ ರಾಜ್ಯಗಳಲ್ಲಿ, ಅದರಲ್ಲೂ ಬಿಜೆಪಿಯೇತರ ಸರ್ಕಾರಗಳಲ್ಲಿ ರೈತರನ್ನು ಕೆಟ್ಟದಾಗಿ ನಡೆಸಿಕೊಂಡರೂ ಯಾರೂ ಸುದ್ದಿ ಮಾಡುತ್ತಿಲ್ಲ. ಕೆಲವು ದಿನಗಳ ಹಿಂದೆ ಕೇರಳದಲ್ಲಿ ಗುಡಿಸಲು ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ರೈತರ ಗುಡಿಸಲು ಸುಟ್ಟು ಹಾಕಿದ್ದು ಸಹ ಸುದ್ದಿಯಾಗಲಿಲ್ಲ. ಯಾವ ಮಾಧ್ಯಮಗಳು, ಬುದ್ಧಿಜೀವಿಗಳು, ಪ್ರಗತಿಪರರು ಇದರ ಕುರಿತು ಮಾತನಾಡಲಿಲ್ಲ.

ಈಗ ಇಂಥಾದ್ದೇ ಘಟನೆ ದೆಹಲಿಯಲ್ಲಿ ನಡೆದಿದೆ. ಹೌದು, ದೆಹಲಿಯ ಯಮುನಾ ಖಾದರ್ ನಲ್ಲಿ ಗುಡಿಸಲು ಹಾಕಿಕೊಂಡು ಜೀವನ ಸಾಗಿಸುತ್ತಿದ್ದ ರೈತರ ಭೂಮಿ ವಶಪಡಿಸಿಕೊಳ್ಳಲು ದೆಹಲಿ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಇದರ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ.

ಆದರೆ, ಈಗ ರೈತರ ನೂರಕ್ಕೂ ಅಧಿಕ ಗುಡಿಸಲುಗಳನ್ನು ಸುಟ್ಟುಹಾಕಿದ್ದು, ದೆಹಲಿ ಅಭಿವೃದ್ಧಿ ಪ್ರಾಧಿಕಾರದವರೇ ಗುಡಿಸಲು ಸುಟ್ಟುಹಾಕಿದ್ದಾರೆ ಎಂದು ರೈತರು ಆರೋಪ ಮಾಡಿದ್ದಾರೆ. ದಶಕದಿಂದ ನಾವು ಇದೇ ಗುಡಿಸಲಿನಲ್ಲಿ ಬದುಕುತ್ತಿದ್ದು, ಈಗ ಲಾಭಕ್ಕೋಸ್ಕರ ದೆಹಲಿ ಅಭಿವೃದ್ಧಿ ಪ್ರಾಧಿಕಾರ ವಶಪಡಿಸಿಕೊಳ್ಳಲು ಮುಂದಾಗಿದೆ. ಇದರ ವಿರುದ್ಧ ನಾವು ಪ್ರತಿಭಟನೆ ನಡೆಸಿದ್ದು, ಕೆರಳಿ ಗುಡಿಸಲು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಹೀಗೆ ರೈತರ ಗುಡಿಸಲು ಸುಟ್ಟು ಹಾಕಿದ್ದರೂ, ರೈತರ ಪರವಾಗಿ ಭಾರಿ ಭಾಷಣ ಬಿಗಿಯುವ ಅರವಿಂದ ಕೇಜ್ರಿವಾಲ್, ರೈತರಪರ ಎನ್ನುವ ಸಿದ್ದರಾಮಯ್ಯನವರು, ಬುದ್ಧಿಜೀವಿಗಳು, ಪ್ರಕಾಶ್ ರೈಗಳು ಯಾಕೆ ಇದರ ಕುರಿತು ಮಾತನಾಡುವುದಿಲ್ಲ? ಏಕೆ ಪ್ರಶ್ನಿಸುವುದಿಲ್ಲ?

  • Share On Facebook
  • Tweet It


- Advertisement -


Trending Now
ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
Tulunadu News March 31, 2023
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
Leave A Reply

  • Recent Posts

    • ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
  • Popular Posts

    • 1
      ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • 2
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 3
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 4
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 5
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search