• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂಟಾರ್ಟಿಕಾದಲ್ಲಿ 400 ದಿನ ವಾಸವಿದ್ದು, ದಾಖಲೆ ಬರೆದ ಇಸ್ರೋದ ಮೊದಲ ಮಹಿಳಾ ವಿಜ್ಞಾನಿ

TNN Correspondent Posted On March 19, 2018
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ಮಹಿಳೆಯರು ಯಾವುದೇ ಕ್ಷೇತ್ರದಲ್ಲೂ ಕಡಿಮೆ ಇಲ್ಲ ಎಂಬುದನ್ನು ಪದೇ ಪದೆ ಸಾಬೀತುಪಡಿಸುತ್ತಿದ್ದಾರೆ. ಇತ್ತೀಚೆಗೆ ಮಿಗ್ -21 ವಿಮಾನವನ್ನು ಯಶಸ್ವಿಯಾಗಿ ಚಲಾಯಿಸುವ ಮೂಲಕ ಮಹಿಳಾ ಪೈಲಟ್ ಅವನಿ ಚತುರ್ವೇದಿ ಗಮನ ಸೆಳೆದಿದ್ದರು. ಇದೀಗ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹಿಳಾ ವಿಜ್ಞಾನಿ ಅಂಟಾರ್ಟಿಕಾದಲ್ಲಿ 400 ದಿನ ವಾಸ ಮಾಡುವ  ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಇಸ್ರೋದಲ್ಲಿ ವಿಜ್ಞಾನಿಯಾಗಿರುವ  56 ವಯಸ್ಸಿನ ಮಂಗಲಾ ಮಣಿ 90 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಅಂಟಾರ್ಟಿಕಾದಲ್ಲಿ ವಾಸವಿರುವ ಮೂಲಕ ಗಮನ ಸೆಳೆದಿದ್ದಾರೆ. ಭಾರತ ‘ಇಂಡಿಯಾ ಭಾರತಿ’ ಸಂಘಟನೆಯಿಂದ 2016ರಲ್ಲಿ ಅಂಟಾರ್ಟಿಕಾಕ್ಕೆ ಸಂಶೋಧನೆಗೆ ಹೋಗಿದ್ದ 23 ಜನರ ತಂಡದಲ್ಲಿ ಮಂಗಲಾ ಮಣಿಯೊಬ್ಬರೇ ಮಹಿಳೆಯಾಗಿದ್ದು ವಿಶೇಷ.

ಅಂಟಾರ್ಟಿಕಾ ವಾಸ್ತವ್ಯ ಮಾಡುವುದು ಸವಾಲಿನ ಕೆಲವಾಗಿತ್ತು. ಅತ್ಯಂತ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕಿತ್ತು. ನಮ್ಮ ನಿಯಂತ್ರಣ ಕಚೇರಿಯೊಂದಿಗೆ ನಿರಂತರವಾಗಿ ಸಂಪರ್ಕವಿಟ್ಟುಕೊಂಡು ದಿನ ದೂಡುತ್ತಿದ್ದೇವು. ಪ್ರತಿ ಕ್ಷಣವೂ ಸವಾಲು ಎದುರಿಸುತ್ತಿದೆ. 2 ರಿಂದ 3 ಗಂಟೆಗಿಂತ ಹೆಚ್ಚು ಅವಧಿಯಲ್ಲಿ ನಾವು ಸಾಮಾನ್ಯ ಧಿರಿಸಿನಲ್ಲಿ ಇರಲು ಆಗುತ್ತಿರಲಿಲ್ಲ ಎಂದು ಮಣಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

2016 ರಿಂದ 2017 ರವರೆಗೆ ಸುಮಾರು 400 ದಿನ ನಾವು ಅಂಟಾರ್ಟಿಕಾದಲ್ಲಿ ವಾಸ ಮಾಡಿದ್ದೇವು. ನಮ್ಮ ಇಡೀ ತಂಡ ಪರಸ್ಪರ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿತ್ತು. ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವು. ನನ್ನ ಜನ್ಮದಿನವನ್ನು ನಮ್ಮ ತಂಡ ಆಚರಿಸಿದ್ದು, ಅವಿಸ್ಮರಣೀಯ ಎನ್ನುತ್ತಾರೆ ಮಣಿ.

ಈ ಮಹತ್ವದ ಸಂಶೋಧನೆಗೆ ತೆರಳುವ ಮುಂಚೆ ಮಂಗಲಾ ಮಣಿ ಅವರಿಗೆ ಭಾರತದ ಬದ್ರಿನಾಥ, ಚಮೋಲಿಗಳಲ್ಲಿ ತರಬೇತಿ ನೀಡಲಾಗಿತ್ತು. ಅಲ್ಲದೇ ಮಾನಸಿಕ, ದೈಹಿಕ ಸಾಮರ್ಥ್ಯವನ್ನು ಪರೀಕ್ಷಿಸಲಾಗಿತ್ತು. ಮಹಿಳೆಯರಲ್ಲು ಸಾಮರ್ಥ್ಯವಿದ್ದು, ಆತ್ಮಬಲದೊಂದಿಗೆ ಮುನ್ನುಗಿದ್ದರೇ ಯಾವುದೇ ಸಾಧನೆ ಮಾಡಬಹುದು ಎಂಬುದು ಮಂಗಲಾ ಮಣಿ ಅವರ ಸಲಹೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search