• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಜ್ಯೋತಿ ಸರ್ಕಲ್ ನಲ್ಲಿ ಒಂದೆರಡು ದಿನ ಸಿಗ್ನಲ್ ಫ್ರೀ? ಇದು ರಾಹುಲ್ “ಭಾಗ್ಯ”ವೇ?

Shrikanth Posted On March 19, 2018
0


0
Shares
  • Share On Facebook
  • Tweet It

ಮಂಗಳೂರಿನ ಜ್ಯೋತಿ ವೃತ್ತದ ಅಂಬೇಡ್ಕರ್ ಸರ್ಕಲ್ ಬಳಿ ಇರುವ ಸಿಗ್ನಲ್ ಒಂದೆರಡು ದಿನಗಳ ಕಾಲ ಕಾಂಗ್ರೆಸ್ ಬಂಟಿಂಗ್ಸ್ ನಿಂದ ಮುಚ್ಚಿ ಹೋಗಿದೆ. ಹಾಗಾಗಿ ವಾಹನ ಸವಾರರು ತಮ್ಮ ವಾಹನಗಳನ್ನು ಯರ್ರಾಬಿರ್ರಿಯಾಗಿ ಚಲಾಯಿಸಿದರೂ ಹೇಳೋರಿಲ್ಲ-ಕೇಳೋರಿಲ್ಲ. ಅಕಸ್ಮಾತ್ ಟ್ರಾಫಿಕ್ ಪೊಲೀಸ್ ಕೇಳಿದರೆ ಸಿಗ್ನಲ್ ಕಾಣಿಸ್ತಾ ಇಲ್ವಲಾ ನಾನೇನ್ ಮಾಡ್ಲಿ ಅಂತ ಹೇಳಿದರೆ ಪೊಲೀಸರತ್ರನೂ ಉತ್ತರ ಇರ್ಲಿಕ್ಕಿಲ್ಲ.

ಅಲ್ಲ ಮಾರಾಯ್ರೆ, ರಾಹುಲ್ ಗಾಂಧಿ ಬರುವುದಾದ್ರೆ ಊರಿಡೀ ಸಿಂಗಾರ ಮಾಡಿಕೊಳ್ಳಲಿ. ಯಾರೂ ಏನೂ ಕೇಳುವುದಿಲ್ಲ. ಆದರೆ ಹೋಗಿ ಹೋಗಿ ಪ್ರಮುಖ ರಸ್ತೆಗಳಲ್ಲಿರುವ ಸಿಗ್ನಲ್ ವ್ಯವಸ್ಥೆಗೆ ಅಡ್ಡವಾಗಿ ಸಿಂಗಾರ ಮಾಡೋದಾ?

ಅಷ್ಟಕ್ಕೂ ಅಂಬೇಡ್ಕರ್ ಸರ್ಕಲ್ ಸಿಗ್ನಲ್ ಎಷ್ಟು ಮುಖ್ಯವಾಗಿದೆ ಗೊತ್ತಾ?

ವಾಹನಗಳು, ಬಂಟ್ಸ್ ಹಾಸ್ಟೆಲ್ ಕಡೆಯಿಂದ ಬಂದು ಹಂಪನಕಟ್ಟೆ ಅಥವಾ ಕಂಕನಾಡಿ ಕಡೆ ಹೋಗುತ್ತವೆ. ವಾಹನಗಳು ಕಂಕನಾಡಿ ಕಡೆಯಿಂದ ಬಂದು ಸ್ಟೇಟ್ ಬ್ಯಾಂಕ್ ಅಥವಾ ಬಂಟ್ಸ್ ಹಾಸ್ಟೆಲ್ ಕಡೆ ಹೋಗುತ್ತವೆ. ವಾಹನಗಳು ಬಾವುಟ ಗುಡ್ಡೆಯಿಂದ ಬಂದು ಬಂಟ್ಸ್ ಹಾಸ್ಟೆಲ್ ಅಥವಾ ಕಂಕನಾಡಿ ಕಡೆ ಹೋಗುತ್ತವೆ.ಇಂತಹ ವಾಹನ ದಟ್ಟಣೆ ಇರುವ ವೃತ್ತ ಅಂಬೇಡ್ಕರ್ ಸರ್ಕಲ್, ಇದೇ ಸರ್ಕಲ್ ಪಕ್ಕದಲ್ಲಿ ಕೆ.ಎಂ.ಸಿ ಆಸ್ಪತ್ರೆಯೂ ಇದೆ. ಹೆಣ್ಣು ಮಕ್ಕಳ ಕಾಲೇಜೂ ಇದೆ. ಹಾಗಾಗಿ ವಾಹನಗಳ ಹೊರತಾಗಿ ಪಾದಚಾರಿಗಳ ಸಂಖ್ಯೆಯೂ ಹೆಚ್ಚಿದೆ.

ಇಂತಹ ಪ್ರಮುಖ ರಸ್ತೆಯಲ್ಲಿ ಅಪಘಾತಗಳು ಸರ್ವೇ ಸಾಮಾನ್ಯವಾಗಿರುವುದರಿಂದ ಅದನ್ನು ತಡೆಗಟ್ಟಲು ಸಿಗ್ನಲ್ ವ್ಯವಸ್ಥೆ ಮಾಡಲಾಗಿದೆ. ಸಿಗ್ನಲ್ ಬ್ರೇಕ್ ಮಾಡುವವರನ್ನು ಪತ್ತೆ ಹಚ್ಚಲು ಸಿ.ಸಿ. ಕ್ಯಾಮರಾ ಹಾಗೂ ಒಬ್ಬ ಪೊಲೀಸ್ ಪೇದೆಯನ್ನು ನೇಮಿಸಲಾಗಿದೆ. ಇಷ್ಟೆಲ್ಲಾ ಇದ್ದು ಸರಿಯಾಗಿ ಸಿಗ್ನಲ್ ಕಾಣಿಸದಂತೆ ಅದರ ಮುಂದೆ-ಹಿಂದೆ ಮೇಲೆ-ಕೆಳಗೆ ಕಾಂಗ್ರೆಸ್ ಪಕ್ಷ ತನ್ನ ಬಂಟಿಂಗ್ಸ್ ಹಾಕಿಕೊಂಡು ಸಾರ್ವಜನಿಕರನ್ನು ಅಣಕಿಸುತ್ತಿದೆ.

ನಾಳೆ ಈ ಸರ್ಕಲ್ ನಲ್ಲಿ ಅನಿವಾರ್ಯವಾಗಿ ಸಿಗ್ನಲ್ ರೂಲ್ಸ್ ಬ್ರೇಕ್ ಆಗಿ ಯಾವುದಾದರೂ ಅವಘಡ ಸಂಭವಿಸಿದರೆ ಅದರ ಜವಾಬ್ದಾರಿಯನ್ನು ರಾಹುಲ್ ಗಾಂಧಿ ಹೊರುತ್ತಾರಾ? ಜಿಲ್ಲಾ ಸಚಿವರು ಹೊರುತ್ತಾರಾ? ಅಥವಾ ಶಾಸಕರು ಹೊರುತ್ತಾರಾ?ಯಾರೂ ಹೊರುವುದಿಲ್ಲ. ಅವರು ಹೊರುವುದು ನಮ್ಮ ಶವ ಮಾತ್ರ. ಅದೂ ಕೂಡಾ ಧರ್ಮ ಆಧಾರಿತವಾಗಿ!

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Shrikanth February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Shrikanth January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search