• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಲ್ಲದ ಕಾಂಗ್ರೆಸ್ ಮುಖಂಡರ ಗೂಂಡಾಗಿರಿ, ಶಾಸಕ ಭೈರತಿ ಬಸವರಾಜು ಬೆಂಬಲಿಗನಿಂದ ವ್ಯಕ್ತಿಗೆ ಇರಿತ!

TNN Correspondent Posted On March 21, 2018
0


0
Shares
  • Share On Facebook
  • Tweet It

ಬೆಂಗಳೂರು: ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೂಂಡಾಗಿರಿ ಮಾಡಿ ಜೈಲು ಸೇರಿರುವ ಬೆನ್ನಲ್ಲೇ, ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಹಾಕಿ ಸುಡುವೆ ಎಂದು ಗೂಂಡಾಗಿರಿ ನಡೆಸಿದ ಬೆನ್ನಲ್ಲೇ, ಕಾಂಗ್ರೆಸ್ಸಿನ ಮತ್ತೊಬ್ಬ ಮುಖಂಡ ಗೂಂಡಾಗಿರಿ ಮಾಡಿದ್ದಾರೆ.

ಹೌದು, ಶಾಸಕ ಭೈರತಿ ಬಸವರಾಜು ಬೆಂಬಲಿಗ ಎಂದೇ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಸುರೇಶ್ ಎಂಬಾತ ಬೆಂಗಳೂರಿನ ಕಾಡುಗೋಡಿ ಬಳಿ ವ್ಯಕ್ತಿಗೆ ಚಾಕುವಿನಿಂದ ಇರಿದು, ಗೂಂಡಾಗಿರಿ ಪ್ರದರ್ಶಿಸಿದ್ದಾರೆ.

ಮಾರ್ಚ್ 17ರಂದು ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಮುಖಂಡ ಸುರೇಶ್ ಕಾಡುಗೋಡಿ ಬಳಿ ನಿಂತಿದ್ದು, ಹಿಂದಿನಿಂದ ವಾಹನದಲ್ಲಿ ಬಂದ ಸಾಮಾಜಿಕ ಹೋರಾಟಗಾರ ಪರಮೇಶ್ವರ್ ದಾರಿ ಬಿಡಲು ಹಾರ್ನ್ ಮಾಡಿದ್ದಾರೆ. ಇಷ್ಟಕ್ಕೇ ಕುಪಿತಗೊಂಡ ಸುರೇಶ್ ಪರಮೇಶ್ವರ್ ಅವರಿಗೆ ಚಾಕುವಿನಿಂದ ಇರಿದಿದ್ದಾರೆ.

ಸಾಮಾಜಿಕ ಹೋರಾಟಗಾರ ಪರಮೇಶ್ವರ್ ಈ ಹಿಂದೆ ಹಲವು ಬಾರಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಕೇಸ್ ಹಾಕಿದ್ದಲ್ಲದೆ, ಮಾಹಿತಿ ಹಕ್ಕು ಕಾಯಿದೆ ಬಳಸಿ ಅವರ ವಿವಿಧ ಹಗರಣ ಬಯಲಿಗೆ ಎಳೆದಿದ್ದರು. ಇದೇ ಸಿಟ್ಟಿನಲ್ಲಿ ಸುರೇಶ್ ಬೇಕು ಅಂತಲೇ ಜಗಳ ತೆಗೆದು ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಪರಮೇಶ್ವರ್ ಅವರು ಕಾಂಗ್ರೆಸ್ ಮುಖಂಡ ಸುರೇಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. ಕೆಲ ದಿನಗಳ ಹಿಂದೆ ಪೆಟ್ರೋಲ್ ಸುರಿದು ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚುತ್ತೇನೆ ಎಂದು ರೌಡಿಸಂ ಮಾಡಿದ್ದ ನಾರಾಯಣ ಸ್ವಾಮಿ ಸಹ ಭೈರತಿ ಬಸವರಾಜ್ ಬೆಂಬಲಿಗ ಎಂದೇ ಹೇಳಲಾಗಿತ್ತು.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search