• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಲ್ಲದ ಕಾಂಗ್ರೆಸ್ ಮುಖಂಡರ ಗೂಂಡಾಗಿರಿ, ಶಾಸಕ ಭೈರತಿ ಬಸವರಾಜು ಬೆಂಬಲಿಗನಿಂದ ವ್ಯಕ್ತಿಗೆ ಇರಿತ!

TNN Correspondent Posted On March 21, 2018
0


0
Shares
  • Share On Facebook
  • Tweet It

ಬೆಂಗಳೂರು: ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೂಂಡಾಗಿರಿ ಮಾಡಿ ಜೈಲು ಸೇರಿರುವ ಬೆನ್ನಲ್ಲೇ, ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಹಾಕಿ ಸುಡುವೆ ಎಂದು ಗೂಂಡಾಗಿರಿ ನಡೆಸಿದ ಬೆನ್ನಲ್ಲೇ, ಕಾಂಗ್ರೆಸ್ಸಿನ ಮತ್ತೊಬ್ಬ ಮುಖಂಡ ಗೂಂಡಾಗಿರಿ ಮಾಡಿದ್ದಾರೆ.

ಹೌದು, ಶಾಸಕ ಭೈರತಿ ಬಸವರಾಜು ಬೆಂಬಲಿಗ ಎಂದೇ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಸುರೇಶ್ ಎಂಬಾತ ಬೆಂಗಳೂರಿನ ಕಾಡುಗೋಡಿ ಬಳಿ ವ್ಯಕ್ತಿಗೆ ಚಾಕುವಿನಿಂದ ಇರಿದು, ಗೂಂಡಾಗಿರಿ ಪ್ರದರ್ಶಿಸಿದ್ದಾರೆ.

ಮಾರ್ಚ್ 17ರಂದು ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಮುಖಂಡ ಸುರೇಶ್ ಕಾಡುಗೋಡಿ ಬಳಿ ನಿಂತಿದ್ದು, ಹಿಂದಿನಿಂದ ವಾಹನದಲ್ಲಿ ಬಂದ ಸಾಮಾಜಿಕ ಹೋರಾಟಗಾರ ಪರಮೇಶ್ವರ್ ದಾರಿ ಬಿಡಲು ಹಾರ್ನ್ ಮಾಡಿದ್ದಾರೆ. ಇಷ್ಟಕ್ಕೇ ಕುಪಿತಗೊಂಡ ಸುರೇಶ್ ಪರಮೇಶ್ವರ್ ಅವರಿಗೆ ಚಾಕುವಿನಿಂದ ಇರಿದಿದ್ದಾರೆ.

ಸಾಮಾಜಿಕ ಹೋರಾಟಗಾರ ಪರಮೇಶ್ವರ್ ಈ ಹಿಂದೆ ಹಲವು ಬಾರಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಕೇಸ್ ಹಾಕಿದ್ದಲ್ಲದೆ, ಮಾಹಿತಿ ಹಕ್ಕು ಕಾಯಿದೆ ಬಳಸಿ ಅವರ ವಿವಿಧ ಹಗರಣ ಬಯಲಿಗೆ ಎಳೆದಿದ್ದರು. ಇದೇ ಸಿಟ್ಟಿನಲ್ಲಿ ಸುರೇಶ್ ಬೇಕು ಅಂತಲೇ ಜಗಳ ತೆಗೆದು ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಪರಮೇಶ್ವರ್ ಅವರು ಕಾಂಗ್ರೆಸ್ ಮುಖಂಡ ಸುರೇಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. ಕೆಲ ದಿನಗಳ ಹಿಂದೆ ಪೆಟ್ರೋಲ್ ಸುರಿದು ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚುತ್ತೇನೆ ಎಂದು ರೌಡಿಸಂ ಮಾಡಿದ್ದ ನಾರಾಯಣ ಸ್ವಾಮಿ ಸಹ ಭೈರತಿ ಬಸವರಾಜ್ ಬೆಂಬಲಿಗ ಎಂದೇ ಹೇಳಲಾಗಿತ್ತು.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search