• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರುಣ್ ಜೇಟ್ಲಿ ಅವರಿಗಷ್ಟೇ ಅಲ್ಲ, ಕೇಜ್ರಿವಾಲ್ ನಾಲಗೆ ಹರಿಬಿಟ್ಟು ಯಾರ್ಯಾರ ಕ್ಷಮೆ ಕೇಳಿದ್ದಾರೆ ಗೊತ್ತಾ?

TNN Correspondent Posted On March 21, 2018
0


0
Shares
  • Share On Facebook
  • Tweet It

ದೆಹಲಿ: ಅರವಿಂದ್ ಕೇಜ್ರಿವಾಲ್ ಎಂದಾಕ್ಷಣ ಅವರೊಬ್ಬ ದೆಹಲಿ ಮುಖ್ಯಮಂತ್ರಿ ಎನ್ನುವುದಕ್ಕಿಂತ ನರೇಂದ್ರ ಮೋದಿ ಸೇರಿ ಬೇರೆ ನಾಯಕರನ್ನು ತೆಗಳುವುದು, ಆಧಾರವಿಲ್ಲದೆ ಆರೋಪ ಮಾಡುವುದರಿಂದಲೇ ಸುದ್ದಿಯಾಗುತ್ತಾರೆ. ಇನ್ನೊಬ್ಬರನ್ನು ಸುಖಾಸುಮ್ಮನೆ ಟೀಕೆ ಮಾಡಲೆಂದೇ ಹುಟ್ಟಿದವರಂತೆ ಆಡುತ್ತಾರೆ.

ಆದರೆ ಅನ್ನಿಸಿಕೊಂಡವರೇನು ಸುಮ್ಮನೆ ಬಿಡುತ್ತಾರೆಯೇ? ಕೇಸು ಜಡಿದು ಇಕ್ಕಟ್ಟಿಗೆ ಸಿಲುಕಿಸುತ್ತಾರೆ. ಅದೇ ರೀತಿ, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿರುದ್ಧವೂ ಸುಖಾಸುಮ್ಮನೆ ಆರೋಪ, ಟೀಕೆ ಮಾಡಿದ್ದ ಕೇಜ್ರಿವಾಲ್ ಅವರಿಗೆ ಜೇಟ್ಲಿ ಇತ್ತೀಚೆಗೆ ಸರಿಯಾದ ಪಾಠ ಕಲಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಆರೋಪ ಮಾಡಿದ್ದರ ವಿರುದ್ಧ ಕಾನೂನು ಸಮರ ಸಾರಿದ್ದ ಅರುಣ್ ಜೇಟ್ಲಿ, ಬರೋಬ್ಬರಿ ಹತ್ತು ಕೋಟಿ ರೂ. ಪರಿಹಾರ ನೀಡಬೇಕು ಎಂದು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಆದರೆ ಇದರಿಂದ ಬಸವಳಿದು ಹೋದ ಅರವಿಂದ್ ಕೇಜ್ರಿವಾಲ್ ಜೇಟ್ಲಿ ಕ್ಷಮೆ ಕೇಳಿದ್ದರು.

ಇದೇ ರೀತಿ ಕಳೆದ ಮಾರ್ಚ್ 16ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕ್ಷಮೆಯನ್ನೂ ಅರವಿಂದ್ ಕೇಜ್ರಿವಾಲ್ ಕೇಳಿದ್ದಾರೆ. ಇಲ್ಲೂ ಮಾನನಷ್ಟ ಮೊಕದ್ದಮೆ ಎದುರಿಸಲಾಗದೆ, ಮಾಡಿದ ಆರೋಪ ಸಾಬೀತುಪಡಿಸಲಾಗದೆ ಕ್ಷಮೆ ಕೇಳಿದ್ದರು ಕೇಜ್ರಿವಾಲ್.

ಅಷ್ಟೇ ಅಲ್ಲ, ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್, ಪಂಜಾಬ್ ಮಾಜಿ ಸಚಿವ ಮಿಜಿಥಿಯಾ ಅವರ ವಿರುದ್ಧವೂ ಹುರುಳಿಲ್ಲದ ಆರೋಪ ಮಾಡುವ ಮೂಲಕ ಮಾನನಷ್ಟ ಮೊಕದ್ದಮೆ ಎದುರಿಸಲಾಗದೆ ಕ್ಷಮೆ ಕೇಳಿದ್ದಾರೆ.  ಇದೇ ಕಾರಣಕ್ಕೆ ಪ್ರಸ್ತುತ ಅರವಿಂದ್ ಕೇಜ್ರಿವಾಲ್ ಅವರು 33 ಮಾನನಷ್ಟ ಮೊಕದ್ದಮೆ ಎದುರಿಸುತ್ತಿದ್ದಾರೆ.

ಇದರ ಜತೆಗೆ ಪಕ್ಷದ ಆಂತರಿಕ ಜಗಳವನ್ನೂ ಕೇಜ್ರಿವಾಲ್ ಅವರಿಂದ ಸರಿ ಮಾಡಲು ಆಗುತ್ತಿಲ್ಲ. 20 ಶಾಸಕರ ಅನರ್ಹತೆ, ಬಂಡಾಯದ ನಡುವೆ ಈಗ ಕ್ಷಮೆಯಾಚನೆ ಸರಣಿಯೂ ಕೇಜ್ರಿವಾಲ್ ಅವರನ್ನು ಬಸವಳಿಯುವಂತೆ ಮಾಡುತ್ತಿದೆ. ಅವರ ಪರ ವಕೀಲ ರಾಮ್ ಜೇಠ್ಮಲಾನಿ ಅವರೂ ಸಹ ಕೇಜ್ರಿವಾಲ್ ವಿರುದ್ಧ ಸಂಭಾವನೆ ಕೊಟ್ಟಿಲ್ಲ ಎಂದು ಪ್ರಕರಣ ದಾಖಲಿಸಿದ್ದಾರೆ. ಒಬ್ಬ ನಾಯಕ ಅಭಿವೃದ್ಧಿ ಹೊರತಾಗಿ ಹೀಗೆ ಸುದ್ದಿಯಾದರೆ ಅಭಿವೃದ್ಧಿ ಹೇಗೆ ಆಗಬೇಕು?

 

0
Shares
  • Share On Facebook
  • Tweet It




Trending Now
ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
Tulunadu News September 19, 2025
ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
Tulunadu News September 19, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
    • ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
  • Popular Posts

    • 1
      ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
    • 2
      ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • 3
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 4
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 5
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ

  • Privacy Policy
  • Contact
© Tulunadu Infomedia.

Press enter/return to begin your search