• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರುಣ್ ಜೇಟ್ಲಿ ಅವರಿಗಷ್ಟೇ ಅಲ್ಲ, ಕೇಜ್ರಿವಾಲ್ ನಾಲಗೆ ಹರಿಬಿಟ್ಟು ಯಾರ್ಯಾರ ಕ್ಷಮೆ ಕೇಳಿದ್ದಾರೆ ಗೊತ್ತಾ?

TNN Correspondent Posted On March 21, 2018
0


0
Shares
  • Share On Facebook
  • Tweet It

ದೆಹಲಿ: ಅರವಿಂದ್ ಕೇಜ್ರಿವಾಲ್ ಎಂದಾಕ್ಷಣ ಅವರೊಬ್ಬ ದೆಹಲಿ ಮುಖ್ಯಮಂತ್ರಿ ಎನ್ನುವುದಕ್ಕಿಂತ ನರೇಂದ್ರ ಮೋದಿ ಸೇರಿ ಬೇರೆ ನಾಯಕರನ್ನು ತೆಗಳುವುದು, ಆಧಾರವಿಲ್ಲದೆ ಆರೋಪ ಮಾಡುವುದರಿಂದಲೇ ಸುದ್ದಿಯಾಗುತ್ತಾರೆ. ಇನ್ನೊಬ್ಬರನ್ನು ಸುಖಾಸುಮ್ಮನೆ ಟೀಕೆ ಮಾಡಲೆಂದೇ ಹುಟ್ಟಿದವರಂತೆ ಆಡುತ್ತಾರೆ.

ಆದರೆ ಅನ್ನಿಸಿಕೊಂಡವರೇನು ಸುಮ್ಮನೆ ಬಿಡುತ್ತಾರೆಯೇ? ಕೇಸು ಜಡಿದು ಇಕ್ಕಟ್ಟಿಗೆ ಸಿಲುಕಿಸುತ್ತಾರೆ. ಅದೇ ರೀತಿ, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿರುದ್ಧವೂ ಸುಖಾಸುಮ್ಮನೆ ಆರೋಪ, ಟೀಕೆ ಮಾಡಿದ್ದ ಕೇಜ್ರಿವಾಲ್ ಅವರಿಗೆ ಜೇಟ್ಲಿ ಇತ್ತೀಚೆಗೆ ಸರಿಯಾದ ಪಾಠ ಕಲಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಆರೋಪ ಮಾಡಿದ್ದರ ವಿರುದ್ಧ ಕಾನೂನು ಸಮರ ಸಾರಿದ್ದ ಅರುಣ್ ಜೇಟ್ಲಿ, ಬರೋಬ್ಬರಿ ಹತ್ತು ಕೋಟಿ ರೂ. ಪರಿಹಾರ ನೀಡಬೇಕು ಎಂದು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಆದರೆ ಇದರಿಂದ ಬಸವಳಿದು ಹೋದ ಅರವಿಂದ್ ಕೇಜ್ರಿವಾಲ್ ಜೇಟ್ಲಿ ಕ್ಷಮೆ ಕೇಳಿದ್ದರು.

ಇದೇ ರೀತಿ ಕಳೆದ ಮಾರ್ಚ್ 16ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕ್ಷಮೆಯನ್ನೂ ಅರವಿಂದ್ ಕೇಜ್ರಿವಾಲ್ ಕೇಳಿದ್ದಾರೆ. ಇಲ್ಲೂ ಮಾನನಷ್ಟ ಮೊಕದ್ದಮೆ ಎದುರಿಸಲಾಗದೆ, ಮಾಡಿದ ಆರೋಪ ಸಾಬೀತುಪಡಿಸಲಾಗದೆ ಕ್ಷಮೆ ಕೇಳಿದ್ದರು ಕೇಜ್ರಿವಾಲ್.

ಅಷ್ಟೇ ಅಲ್ಲ, ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್, ಪಂಜಾಬ್ ಮಾಜಿ ಸಚಿವ ಮಿಜಿಥಿಯಾ ಅವರ ವಿರುದ್ಧವೂ ಹುರುಳಿಲ್ಲದ ಆರೋಪ ಮಾಡುವ ಮೂಲಕ ಮಾನನಷ್ಟ ಮೊಕದ್ದಮೆ ಎದುರಿಸಲಾಗದೆ ಕ್ಷಮೆ ಕೇಳಿದ್ದಾರೆ.  ಇದೇ ಕಾರಣಕ್ಕೆ ಪ್ರಸ್ತುತ ಅರವಿಂದ್ ಕೇಜ್ರಿವಾಲ್ ಅವರು 33 ಮಾನನಷ್ಟ ಮೊಕದ್ದಮೆ ಎದುರಿಸುತ್ತಿದ್ದಾರೆ.

ಇದರ ಜತೆಗೆ ಪಕ್ಷದ ಆಂತರಿಕ ಜಗಳವನ್ನೂ ಕೇಜ್ರಿವಾಲ್ ಅವರಿಂದ ಸರಿ ಮಾಡಲು ಆಗುತ್ತಿಲ್ಲ. 20 ಶಾಸಕರ ಅನರ್ಹತೆ, ಬಂಡಾಯದ ನಡುವೆ ಈಗ ಕ್ಷಮೆಯಾಚನೆ ಸರಣಿಯೂ ಕೇಜ್ರಿವಾಲ್ ಅವರನ್ನು ಬಸವಳಿಯುವಂತೆ ಮಾಡುತ್ತಿದೆ. ಅವರ ಪರ ವಕೀಲ ರಾಮ್ ಜೇಠ್ಮಲಾನಿ ಅವರೂ ಸಹ ಕೇಜ್ರಿವಾಲ್ ವಿರುದ್ಧ ಸಂಭಾವನೆ ಕೊಟ್ಟಿಲ್ಲ ಎಂದು ಪ್ರಕರಣ ದಾಖಲಿಸಿದ್ದಾರೆ. ಒಬ್ಬ ನಾಯಕ ಅಭಿವೃದ್ಧಿ ಹೊರತಾಗಿ ಹೀಗೆ ಸುದ್ದಿಯಾದರೆ ಅಭಿವೃದ್ಧಿ ಹೇಗೆ ಆಗಬೇಕು?

 

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search