• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರುಣ್ ಜೇಟ್ಲಿ ಅವರಿಗಷ್ಟೇ ಅಲ್ಲ, ಕೇಜ್ರಿವಾಲ್ ನಾಲಗೆ ಹರಿಬಿಟ್ಟು ಯಾರ್ಯಾರ ಕ್ಷಮೆ ಕೇಳಿದ್ದಾರೆ ಗೊತ್ತಾ?

TNN Correspondent Posted On March 21, 2018
0


0
Shares
  • Share On Facebook
  • Tweet It

ದೆಹಲಿ: ಅರವಿಂದ್ ಕೇಜ್ರಿವಾಲ್ ಎಂದಾಕ್ಷಣ ಅವರೊಬ್ಬ ದೆಹಲಿ ಮುಖ್ಯಮಂತ್ರಿ ಎನ್ನುವುದಕ್ಕಿಂತ ನರೇಂದ್ರ ಮೋದಿ ಸೇರಿ ಬೇರೆ ನಾಯಕರನ್ನು ತೆಗಳುವುದು, ಆಧಾರವಿಲ್ಲದೆ ಆರೋಪ ಮಾಡುವುದರಿಂದಲೇ ಸುದ್ದಿಯಾಗುತ್ತಾರೆ. ಇನ್ನೊಬ್ಬರನ್ನು ಸುಖಾಸುಮ್ಮನೆ ಟೀಕೆ ಮಾಡಲೆಂದೇ ಹುಟ್ಟಿದವರಂತೆ ಆಡುತ್ತಾರೆ.

ಆದರೆ ಅನ್ನಿಸಿಕೊಂಡವರೇನು ಸುಮ್ಮನೆ ಬಿಡುತ್ತಾರೆಯೇ? ಕೇಸು ಜಡಿದು ಇಕ್ಕಟ್ಟಿಗೆ ಸಿಲುಕಿಸುತ್ತಾರೆ. ಅದೇ ರೀತಿ, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿರುದ್ಧವೂ ಸುಖಾಸುಮ್ಮನೆ ಆರೋಪ, ಟೀಕೆ ಮಾಡಿದ್ದ ಕೇಜ್ರಿವಾಲ್ ಅವರಿಗೆ ಜೇಟ್ಲಿ ಇತ್ತೀಚೆಗೆ ಸರಿಯಾದ ಪಾಠ ಕಲಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಆರೋಪ ಮಾಡಿದ್ದರ ವಿರುದ್ಧ ಕಾನೂನು ಸಮರ ಸಾರಿದ್ದ ಅರುಣ್ ಜೇಟ್ಲಿ, ಬರೋಬ್ಬರಿ ಹತ್ತು ಕೋಟಿ ರೂ. ಪರಿಹಾರ ನೀಡಬೇಕು ಎಂದು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಆದರೆ ಇದರಿಂದ ಬಸವಳಿದು ಹೋದ ಅರವಿಂದ್ ಕೇಜ್ರಿವಾಲ್ ಜೇಟ್ಲಿ ಕ್ಷಮೆ ಕೇಳಿದ್ದರು.

ಇದೇ ರೀತಿ ಕಳೆದ ಮಾರ್ಚ್ 16ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕ್ಷಮೆಯನ್ನೂ ಅರವಿಂದ್ ಕೇಜ್ರಿವಾಲ್ ಕೇಳಿದ್ದಾರೆ. ಇಲ್ಲೂ ಮಾನನಷ್ಟ ಮೊಕದ್ದಮೆ ಎದುರಿಸಲಾಗದೆ, ಮಾಡಿದ ಆರೋಪ ಸಾಬೀತುಪಡಿಸಲಾಗದೆ ಕ್ಷಮೆ ಕೇಳಿದ್ದರು ಕೇಜ್ರಿವಾಲ್.

ಅಷ್ಟೇ ಅಲ್ಲ, ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್, ಪಂಜಾಬ್ ಮಾಜಿ ಸಚಿವ ಮಿಜಿಥಿಯಾ ಅವರ ವಿರುದ್ಧವೂ ಹುರುಳಿಲ್ಲದ ಆರೋಪ ಮಾಡುವ ಮೂಲಕ ಮಾನನಷ್ಟ ಮೊಕದ್ದಮೆ ಎದುರಿಸಲಾಗದೆ ಕ್ಷಮೆ ಕೇಳಿದ್ದಾರೆ.  ಇದೇ ಕಾರಣಕ್ಕೆ ಪ್ರಸ್ತುತ ಅರವಿಂದ್ ಕೇಜ್ರಿವಾಲ್ ಅವರು 33 ಮಾನನಷ್ಟ ಮೊಕದ್ದಮೆ ಎದುರಿಸುತ್ತಿದ್ದಾರೆ.

ಇದರ ಜತೆಗೆ ಪಕ್ಷದ ಆಂತರಿಕ ಜಗಳವನ್ನೂ ಕೇಜ್ರಿವಾಲ್ ಅವರಿಂದ ಸರಿ ಮಾಡಲು ಆಗುತ್ತಿಲ್ಲ. 20 ಶಾಸಕರ ಅನರ್ಹತೆ, ಬಂಡಾಯದ ನಡುವೆ ಈಗ ಕ್ಷಮೆಯಾಚನೆ ಸರಣಿಯೂ ಕೇಜ್ರಿವಾಲ್ ಅವರನ್ನು ಬಸವಳಿಯುವಂತೆ ಮಾಡುತ್ತಿದೆ. ಅವರ ಪರ ವಕೀಲ ರಾಮ್ ಜೇಠ್ಮಲಾನಿ ಅವರೂ ಸಹ ಕೇಜ್ರಿವಾಲ್ ವಿರುದ್ಧ ಸಂಭಾವನೆ ಕೊಟ್ಟಿಲ್ಲ ಎಂದು ಪ್ರಕರಣ ದಾಖಲಿಸಿದ್ದಾರೆ. ಒಬ್ಬ ನಾಯಕ ಅಭಿವೃದ್ಧಿ ಹೊರತಾಗಿ ಹೀಗೆ ಸುದ್ದಿಯಾದರೆ ಅಭಿವೃದ್ಧಿ ಹೇಗೆ ಆಗಬೇಕು?

 

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search