• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೈನ್ಯಕ್ಕೆ ಕೇಂದ್ರದ ಭರ್ಜರಿ ಕೊಡುಗೆ: ಸಿಆರ್ ಫಿಎಫ್ ಗೆ 100 ಬುಲೆಟ್ ಫ್ರೂಫ್ ವಾಹನ

TNN Correspondent Posted On March 21, 2018


  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಮ್ಮು ಕಾಶ್ಮೀರ ಸೇರಿ ದೇಶಾದ್ಯಂತ ಉಗ್ರ ಕೃತ್ಯಗಳನ್ನು ಸದೆ ಬಡೆಯಲು ಹಲವು ಮಹತ್ತರ ನಿರ್ಧಾರಗಳನ್ನು ಕೈಗೊಳ್ಳುತ್ತಾ ಬಂದಿದೆ. ಅಲ್ಲದೇ ಸೈನಿಕರಿಗೆ ಬೇಕಾದ ಪೂಕರ ಸೌಲಭ್ಯಗಳನ್ನು ಅತಿ ಹೆಚ್ಚಿನ ಕಾಳಜಿ ವಹಿಸಿ, ಪೂರೈಸುತ್ತಿದೆ. ಇದೀಗ ಕೇಂದ್ರ ಸರ್ಕಾರ ಮತ್ತೊಂದು ಮಹತ್ತರ ನಿರ್ಧಾರ ಕೈಗೊಂಡಿದ್ದು ಸಿಆರ್ ಫಿಎಫ್ ಸೈನ್ಯಕ್ಕೆ 100 ನೂತನ ಬುಲೆಟ್ ಫ್ರೂಫ್ ವಾಹನಗಳನ್ನು ನೀಡಲು ನಿರ್ಧರಿಸಿದೆ.

ಕೇಂದ್ರ ಸರ್ಕಾರ ಭಯೋತ್ಪಾದಕರು ಸೈನಿಕರ ಮೇಲೆ ದಾಳಿ ನಡೆಸಿದಾಗ ಸೈನಿಕರ ರಕ್ಷಣೆಗಾಗಿ ಈ ನಿರ್ಧಾರ ಕೈಗೊಂಡಿದ್ದು, ವಿಶೇಷವಾಗಿ ಕಾಶ್ಮೀರದಲ್ಲಿ ಉಗ್ರರ ಉಪಟಳದಿಂದ ಸೈನಿಕರಿಗೆ ರಕ್ಷಣೆ ನೀಡಲಿದೆ. ಕೇಂದ್ರ ಸರ್ಕಾರ 141 ಬುಲೆಟ್ ಫ್ರೂಫ್ ವಾಹನಗಳನ್ನು ನೀಡುವ ಪ್ರಸ್ತಾವನೆ ನೀಡಿದ್ದು, ಇನ್ನು ಎರಡು ತಿಂಗಳಲ್ಲಿ ಮೊದಲ ಹಂತದಲ್ಲಿ 20 ವಾಹನಗಳು ಸೈನ್ಯದ ಕೈಸೇರಲಿವೆ.

ಛತ್ತಿಸಗಡ್ದ  ಭಾರತ-ಟಿಬೆಟ್ ಗಡಿಯಲ್ಲಿ 20, ಜಮ್ಮು ಕಾಶ್ಮೀರದ ಸಶಸ್ತ್ರ ಸೀಮಾ ದಳಕ್ಕೆ 15 ಆರಂಭಿಕ ಹಂತದಲ್ಲಿ ವಿತರಿಸಲು ನಿರ್ಧರಿಸಲಾಗಿದೆ. ನೂತನ ಬುಲೆಟ್ ಫ್ರೂಫ್ ವಾಹನಗಳು ಎಕೆ ಸಿರೀಸ್ ಸಂಖ್ಯೆಯ ಗನ್ ಗಳ ಬುಲೆಟ್ ಗಳಿಂದ ರಕ್ಷಣೆ ನೀಡುತ್ತವೆ. ವಿಶೇಷವಾಗಿ ಭಯೋತ್ಪಾದಕ ಸಂಘಟನೆಗಳಾದ ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್ ಈ ತಯ್ಯಬಾ, ಜೈಷ್ ಎ ಮಹಮ್ಮದ್ ಸಂಘಟನೆಗಳು ಬಳಸುವ ಗನ್ ಗಳನ್ನು ಗಮನದಲ್ಲಿಟ್ಟುಕೊಂಡು ಈ ವಾಹನಗಳನ್ನು ಖರೀದಿಸಲಾಗಿದೆ. ಪ್ರತಿ ವಾಹನ 10 ರಿಂದ 12 ಯೋಧರನ್ನು ಸಾಗಿಸುವ ಸಾಮರ್ಥ್ಯವನ್ನು ಹೊಂದಿವೆ.

  • Share On Facebook
  • Tweet It


- Advertisement -


Trending Now
ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
Tulunadu News June 5, 2023
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
Leave A Reply

  • Recent Posts

    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
  • Popular Posts

    • 1
      ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • 2
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 3
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 4
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 5
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search