• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ಬೃಹತ್ ಆರೋಗ್ಯ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅಸ್ತು, ಇನ್ನಿಲ್ಲ ಆಪತ್ತು!

TNN Correspondent Posted On March 21, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಹಾಗೆ. ಅದು ಯಾವುದೇ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಲಿ, ಕೂಡಲೇ ಅದನ್ನು ಜಾರಿಗೆ ತರುತ್ತದೆ. 2017ರಲ್ಲಿ ಬಜೆಟ್ಟಿನಲ್ಲಿ ಘೋಷಿಸಿದ ರೈಲು ನಿಲ್ದಾಣಗಳ ಆಧುನೀಕರಣ ಯೋಜನೆಯೇ ಸಾಕ್ಷಿ. ಬಜೆಟ್ಟಿನಲ್ಲಿ ಘೊಷಿಸಿದ ಬಳಿಕ ಕೂಡಲೇ ಯೋಜನೆ ಜಾರಿಗೊಳಿಸಿ, ರೈಲು ನಿಲ್ದಾಣಗಳ ಆಧುನೀಕರಣಗೊಳಿಸಲು ಮುಂದಾಯಿತು ಕೇಂದ್ರ ಸರ್ಕಾರ.

ಈಗ ಮೋದಿ ಸರ್ಕಾರ ಅಂತಹದ್ದೇ ಮತ್ತೊಂದು ನಿರ್ಧಾರ ಕೈಗೊಂಡಿದ್ದು, ಕಳೆದ ಬಜೆಟ್ಟಿನಲ್ಲಿ ಘೋಷಿಸಿದ್ದ, ವಿಶ್ವದ ಬೃಹತ್ ಆರೋಗ್ಯ ಯೋಜನೆಯೆಂದೇ ಖ್ಯಾತಿಯಾಗಿರುವ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲೇ ಯೋಜನೆ ಜಾರಿಗೆ ಬರಲಿದೆ.

ಯೋಜನೆಯಿಂದ ದೇಶದ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಈ ಯೋಜನೆ ಅನುಕೂಲವಾಗಲಿದ್ದು, ಬಡತನ ರೇಖೆಗಿಂತ ಕೆಳಗಿರುವವರು ಕೆಳ ಹಾಗೂ ಮಧ್ಯಮ ಹಂತದ ಆಸ್ಪತ್ರೆಯಲ್ಲಿ ಪಡೆಯುವ ಚಿಕಿತ್ಸೆಗೆ ಕೇಂದ್ರ ಸರ್ಕಾರ 5 ಲಕ್ಷ ರೂ. ಆರೋಗ್ಯ ವಿಮೆ ನೀಡಲಿದೆ. ಇದರಿಂದ ಕೋಟ್ಯಂತರ ಜನ ಆರೋಗ್ಯ ಭದ್ರತೆ ಪಡೆಯಲಿದ್ದಾರೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಪ್ರತಿಕ್ರಿಯಿಸಿದ್ದು, ಆಯುಷ್ಮಾನ್ ಭಾರತ್ ಯೋಜನೆಗೆ ಒಪ್ಪಿಗೆ ಸೂಚಿಸಿರುವುದಕ್ಕೆ ಸಂಸತ್ತು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಸಾರ್ವಜನಿಕರ ಆರೋಗ್ಯ ಭದ್ರತೆಗೆ ಈ ಯೋಜನೆ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.

ಯೋಜನೆ ಅನ್ವಯ ದೇಶದ ಜಿಲ್ಲಾ ಕೇಂದ್ರಗಳಲ್ಲಿ ಮೆಡಿಕಲ್ ಕಾಲೇಜು ಸಹ ಸ್ಥಾಪಿಸಿ, ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವುದು ಸಹ ಯೋಜನೆಯ ಭಾಗವಾಗಿದೆ. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ಮಹತ್ತರ ಯೋಜನೆ ಕೋಟ್ಯಂತರ ಜನರಿಗೆ ಉಪಯೋಗವಾಗಲಿದೆ ಎಂಬುದರಲ್ಲಿ ಎರಡು ಮಾತಿಲ್ಲ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search