• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ಬೃಹತ್ ಆರೋಗ್ಯ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅಸ್ತು, ಇನ್ನಿಲ್ಲ ಆಪತ್ತು!

TNN Correspondent Posted On March 21, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಹಾಗೆ. ಅದು ಯಾವುದೇ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಲಿ, ಕೂಡಲೇ ಅದನ್ನು ಜಾರಿಗೆ ತರುತ್ತದೆ. 2017ರಲ್ಲಿ ಬಜೆಟ್ಟಿನಲ್ಲಿ ಘೋಷಿಸಿದ ರೈಲು ನಿಲ್ದಾಣಗಳ ಆಧುನೀಕರಣ ಯೋಜನೆಯೇ ಸಾಕ್ಷಿ. ಬಜೆಟ್ಟಿನಲ್ಲಿ ಘೊಷಿಸಿದ ಬಳಿಕ ಕೂಡಲೇ ಯೋಜನೆ ಜಾರಿಗೊಳಿಸಿ, ರೈಲು ನಿಲ್ದಾಣಗಳ ಆಧುನೀಕರಣಗೊಳಿಸಲು ಮುಂದಾಯಿತು ಕೇಂದ್ರ ಸರ್ಕಾರ.

ಈಗ ಮೋದಿ ಸರ್ಕಾರ ಅಂತಹದ್ದೇ ಮತ್ತೊಂದು ನಿರ್ಧಾರ ಕೈಗೊಂಡಿದ್ದು, ಕಳೆದ ಬಜೆಟ್ಟಿನಲ್ಲಿ ಘೋಷಿಸಿದ್ದ, ವಿಶ್ವದ ಬೃಹತ್ ಆರೋಗ್ಯ ಯೋಜನೆಯೆಂದೇ ಖ್ಯಾತಿಯಾಗಿರುವ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲೇ ಯೋಜನೆ ಜಾರಿಗೆ ಬರಲಿದೆ.

ಯೋಜನೆಯಿಂದ ದೇಶದ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಈ ಯೋಜನೆ ಅನುಕೂಲವಾಗಲಿದ್ದು, ಬಡತನ ರೇಖೆಗಿಂತ ಕೆಳಗಿರುವವರು ಕೆಳ ಹಾಗೂ ಮಧ್ಯಮ ಹಂತದ ಆಸ್ಪತ್ರೆಯಲ್ಲಿ ಪಡೆಯುವ ಚಿಕಿತ್ಸೆಗೆ ಕೇಂದ್ರ ಸರ್ಕಾರ 5 ಲಕ್ಷ ರೂ. ಆರೋಗ್ಯ ವಿಮೆ ನೀಡಲಿದೆ. ಇದರಿಂದ ಕೋಟ್ಯಂತರ ಜನ ಆರೋಗ್ಯ ಭದ್ರತೆ ಪಡೆಯಲಿದ್ದಾರೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಪ್ರತಿಕ್ರಿಯಿಸಿದ್ದು, ಆಯುಷ್ಮಾನ್ ಭಾರತ್ ಯೋಜನೆಗೆ ಒಪ್ಪಿಗೆ ಸೂಚಿಸಿರುವುದಕ್ಕೆ ಸಂಸತ್ತು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಸಾರ್ವಜನಿಕರ ಆರೋಗ್ಯ ಭದ್ರತೆಗೆ ಈ ಯೋಜನೆ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.

ಯೋಜನೆ ಅನ್ವಯ ದೇಶದ ಜಿಲ್ಲಾ ಕೇಂದ್ರಗಳಲ್ಲಿ ಮೆಡಿಕಲ್ ಕಾಲೇಜು ಸಹ ಸ್ಥಾಪಿಸಿ, ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವುದು ಸಹ ಯೋಜನೆಯ ಭಾಗವಾಗಿದೆ. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ಮಹತ್ತರ ಯೋಜನೆ ಕೋಟ್ಯಂತರ ಜನರಿಗೆ ಉಪಯೋಗವಾಗಲಿದೆ ಎಂಬುದರಲ್ಲಿ ಎರಡು ಮಾತಿಲ್ಲ.

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search