• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಸರ್ಕಾರದಿಂದ ಮತ್ತೊಂದು ದಿಟ್ಟ ನಿರ್ಧಾರ, ಜನರ ಆರೋಗ್ಯಕ್ಕಾಗಿ ಗೋಮೂತ್ರ ಸರಬರಾಜಿಗೆ ಚಿಂತನೆ

TNN Correspondent Posted On March 22, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಅಧಿಕಾರಕ್ಕೆ ಬಂದ ಮೇಲೆ ಹಲವು ದಿಟ್ಟ ನಿರ್ಧಾರಗಳನ್ನು ಕೈಗೊಂಡು ದೇಶವೇ ಉತ್ತರ ಪ್ರದೇಶದತ್ತ ನೋಡುವಹಾಗೆ ಮಾಡಿದ್ದಾರೆ. ಅದರಲ್ಲೂ ಅಪರಾಧ ನಿಗ್ರಹ ವಿಷಯದಲ್ಲಿ ಅವರು ದೇಶಕ್ಕೇ ಮಾದರಿಯಾಗಿದ್ದಾರೆ ಎಂದರೆ ತಪ್ಪಾಗಲಾರದು.

ಇಂತಹ ಯೋಗಿ ಆದಿತ್ಯನಾಥರು ಈಗ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದು, ಜನರ ಆರೋಗ್ಯದ ದೃಷ್ಟಿಯಿಂದ ಕಡಿಮೆ ಬೆಲೆಗೆ ಬಾಟಲ್ ಗಳಲ್ಲಿ ಸಂಗ್ರಹಿಸಿ ಗೋಮೂತ್ರ ಸರಬರಾಜು ಮಾಡಲು ಚಿಂತನೆ ನಡೆಸಿದ್ದಾರೆ.

ಸರ್ಕಾರಿ ಆಯುರ್ವೇದಿಕ್ ಫಾರ್ಮಸಿ ಈ ಜವಾಬ್ದಾರಿ ಹೊತ್ತಿದ್ದು, ಗೋಮೂತ್ರ ಸಂಗ್ರಹಿಸಿ, ಪರಿಷ್ಕರಿಸಿ, ಮಾರಾಟ ಮಾಡುವ ಕುರಿತು ಸರ್ಕಾರದ ಎದುರು ಪ್ರಸ್ತಾಪವಿಟ್ಟಿದ್ದು, ಕೂಡಲೇ ಅನುಮೋದನೆ ಸಿಕ್ಕು, ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಈ ಕುರಿತು ಪಿಲಿಬಿಟ್ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಧಾನ ಮೇಲ್ವಿಚಾರಕರಾಗಿರುವ ಡಾ.ಪ್ರಕಾಶ್ ಚಂದ್ರ ಸಕ್ಸೇನಾ ಮಾತನಾಡಿದ್ದು, ಇದು ಕೇವಲ ವೈದ್ಯಕೀಯ ದೃಷ್ಟಿಯಿಂದ ಅಲ್ಲ, ಜನರ ಆರೋಗ್ಯದ ದೃಷ್ಟಿಯಿಂದ ಜಾರಿಗೊಳಿಸುತ್ತಿರುವ ಯೋಜನೆಯಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿದಿನ 10ರಿಂದ 20 ಮಿಲಿ ಲೀಟರ್ ಗೋಮೂತ್ರ ಸೇವನೆ ಮಾಡುವುದರಿಂದ ಆಯಾ ಕಾಲಮಾನಕ್ಕೆ ಬರುವ ನೆಗಡಿ, ಕೆಮ್ಮು, ಜ್ವರ ಹಾಗೂ ಹೊಟ್ಟೆಗೆ ಸಂಬಂಧಿಸಿದಂತಹ ರೋಗ ತಡೆಯಬಹುದಾಗಿದೆ. ಹಾಗಾಗಿಯೇ ಸರ್ಕಾರ ಗೋಮೂತ್ರ ಸರಬರಾಜಿಗೆ ಮುಂದಾಗಿದೆ ಎಂದು ವಿವರಿಸಿದ್ದಾರೆ.

ಆದಾಗ್ಯೂ ಪ್ರಸ್ತುತ ಯೋಗಿ ಆದಿತ್ಯನಾಥರ ಸರ್ಕಾರ 7 ಜಿಲ್ಲೆಗಳು ಹಾಗೂ 16 ನಗರಗಳಲ್ಲಿ 1000 ಗೋವುಗಳನ್ನು ಸಾಕಬಹುದಾದಂತ ಗೋಶಾಲೆ ತೆರೆಯಲು ಒಪ್ಪಿಗೆ ಸೂಚಿಸಿದೆ. ಇವುಗಳಿಂದ ರಾಜ್ಯದ ಜನರಿಗೆ ಅಗತ್ಯವಾಗುವ ಗೋಮೂತ್ರ ಸಂಗ್ರಹಿಸಲಾಗುತ್ತದೆ. ಅಲ್ಲದೆ, ಸರ್ಕಾರೇತರ ಸಂಸ್ಥೆಗಳು ನಡೆಸುತ್ತಿರುವ ಗೋಶಾಲೆಗಳಿಂದಲೂ ಗೋಮೂತ್ರ ಸಂಗ್ರಹಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search