• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಸರ್ಕಾರದಿಂದ ಮತ್ತೊಂದು ದಿಟ್ಟ ನಿರ್ಧಾರ, ಜನರ ಆರೋಗ್ಯಕ್ಕಾಗಿ ಗೋಮೂತ್ರ ಸರಬರಾಜಿಗೆ ಚಿಂತನೆ

TNN Correspondent Posted On March 22, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಅಧಿಕಾರಕ್ಕೆ ಬಂದ ಮೇಲೆ ಹಲವು ದಿಟ್ಟ ನಿರ್ಧಾರಗಳನ್ನು ಕೈಗೊಂಡು ದೇಶವೇ ಉತ್ತರ ಪ್ರದೇಶದತ್ತ ನೋಡುವಹಾಗೆ ಮಾಡಿದ್ದಾರೆ. ಅದರಲ್ಲೂ ಅಪರಾಧ ನಿಗ್ರಹ ವಿಷಯದಲ್ಲಿ ಅವರು ದೇಶಕ್ಕೇ ಮಾದರಿಯಾಗಿದ್ದಾರೆ ಎಂದರೆ ತಪ್ಪಾಗಲಾರದು.

ಇಂತಹ ಯೋಗಿ ಆದಿತ್ಯನಾಥರು ಈಗ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದು, ಜನರ ಆರೋಗ್ಯದ ದೃಷ್ಟಿಯಿಂದ ಕಡಿಮೆ ಬೆಲೆಗೆ ಬಾಟಲ್ ಗಳಲ್ಲಿ ಸಂಗ್ರಹಿಸಿ ಗೋಮೂತ್ರ ಸರಬರಾಜು ಮಾಡಲು ಚಿಂತನೆ ನಡೆಸಿದ್ದಾರೆ.

ಸರ್ಕಾರಿ ಆಯುರ್ವೇದಿಕ್ ಫಾರ್ಮಸಿ ಈ ಜವಾಬ್ದಾರಿ ಹೊತ್ತಿದ್ದು, ಗೋಮೂತ್ರ ಸಂಗ್ರಹಿಸಿ, ಪರಿಷ್ಕರಿಸಿ, ಮಾರಾಟ ಮಾಡುವ ಕುರಿತು ಸರ್ಕಾರದ ಎದುರು ಪ್ರಸ್ತಾಪವಿಟ್ಟಿದ್ದು, ಕೂಡಲೇ ಅನುಮೋದನೆ ಸಿಕ್ಕು, ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಈ ಕುರಿತು ಪಿಲಿಬಿಟ್ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಧಾನ ಮೇಲ್ವಿಚಾರಕರಾಗಿರುವ ಡಾ.ಪ್ರಕಾಶ್ ಚಂದ್ರ ಸಕ್ಸೇನಾ ಮಾತನಾಡಿದ್ದು, ಇದು ಕೇವಲ ವೈದ್ಯಕೀಯ ದೃಷ್ಟಿಯಿಂದ ಅಲ್ಲ, ಜನರ ಆರೋಗ್ಯದ ದೃಷ್ಟಿಯಿಂದ ಜಾರಿಗೊಳಿಸುತ್ತಿರುವ ಯೋಜನೆಯಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿದಿನ 10ರಿಂದ 20 ಮಿಲಿ ಲೀಟರ್ ಗೋಮೂತ್ರ ಸೇವನೆ ಮಾಡುವುದರಿಂದ ಆಯಾ ಕಾಲಮಾನಕ್ಕೆ ಬರುವ ನೆಗಡಿ, ಕೆಮ್ಮು, ಜ್ವರ ಹಾಗೂ ಹೊಟ್ಟೆಗೆ ಸಂಬಂಧಿಸಿದಂತಹ ರೋಗ ತಡೆಯಬಹುದಾಗಿದೆ. ಹಾಗಾಗಿಯೇ ಸರ್ಕಾರ ಗೋಮೂತ್ರ ಸರಬರಾಜಿಗೆ ಮುಂದಾಗಿದೆ ಎಂದು ವಿವರಿಸಿದ್ದಾರೆ.

ಆದಾಗ್ಯೂ ಪ್ರಸ್ತುತ ಯೋಗಿ ಆದಿತ್ಯನಾಥರ ಸರ್ಕಾರ 7 ಜಿಲ್ಲೆಗಳು ಹಾಗೂ 16 ನಗರಗಳಲ್ಲಿ 1000 ಗೋವುಗಳನ್ನು ಸಾಕಬಹುದಾದಂತ ಗೋಶಾಲೆ ತೆರೆಯಲು ಒಪ್ಪಿಗೆ ಸೂಚಿಸಿದೆ. ಇವುಗಳಿಂದ ರಾಜ್ಯದ ಜನರಿಗೆ ಅಗತ್ಯವಾಗುವ ಗೋಮೂತ್ರ ಸಂಗ್ರಹಿಸಲಾಗುತ್ತದೆ. ಅಲ್ಲದೆ, ಸರ್ಕಾರೇತರ ಸಂಸ್ಥೆಗಳು ನಡೆಸುತ್ತಿರುವ ಗೋಶಾಲೆಗಳಿಂದಲೂ ಗೋಮೂತ್ರ ಸಂಗ್ರಹಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search