• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಸರ್ಕಾರದಿಂದ ಮತ್ತೊಂದು ದಿಟ್ಟ ನಿರ್ಧಾರ, ಜನರ ಆರೋಗ್ಯಕ್ಕಾಗಿ ಗೋಮೂತ್ರ ಸರಬರಾಜಿಗೆ ಚಿಂತನೆ

TNN Correspondent Posted On March 22, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಅಧಿಕಾರಕ್ಕೆ ಬಂದ ಮೇಲೆ ಹಲವು ದಿಟ್ಟ ನಿರ್ಧಾರಗಳನ್ನು ಕೈಗೊಂಡು ದೇಶವೇ ಉತ್ತರ ಪ್ರದೇಶದತ್ತ ನೋಡುವಹಾಗೆ ಮಾಡಿದ್ದಾರೆ. ಅದರಲ್ಲೂ ಅಪರಾಧ ನಿಗ್ರಹ ವಿಷಯದಲ್ಲಿ ಅವರು ದೇಶಕ್ಕೇ ಮಾದರಿಯಾಗಿದ್ದಾರೆ ಎಂದರೆ ತಪ್ಪಾಗಲಾರದು.

ಇಂತಹ ಯೋಗಿ ಆದಿತ್ಯನಾಥರು ಈಗ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದು, ಜನರ ಆರೋಗ್ಯದ ದೃಷ್ಟಿಯಿಂದ ಕಡಿಮೆ ಬೆಲೆಗೆ ಬಾಟಲ್ ಗಳಲ್ಲಿ ಸಂಗ್ರಹಿಸಿ ಗೋಮೂತ್ರ ಸರಬರಾಜು ಮಾಡಲು ಚಿಂತನೆ ನಡೆಸಿದ್ದಾರೆ.

ಸರ್ಕಾರಿ ಆಯುರ್ವೇದಿಕ್ ಫಾರ್ಮಸಿ ಈ ಜವಾಬ್ದಾರಿ ಹೊತ್ತಿದ್ದು, ಗೋಮೂತ್ರ ಸಂಗ್ರಹಿಸಿ, ಪರಿಷ್ಕರಿಸಿ, ಮಾರಾಟ ಮಾಡುವ ಕುರಿತು ಸರ್ಕಾರದ ಎದುರು ಪ್ರಸ್ತಾಪವಿಟ್ಟಿದ್ದು, ಕೂಡಲೇ ಅನುಮೋದನೆ ಸಿಕ್ಕು, ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಈ ಕುರಿತು ಪಿಲಿಬಿಟ್ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಧಾನ ಮೇಲ್ವಿಚಾರಕರಾಗಿರುವ ಡಾ.ಪ್ರಕಾಶ್ ಚಂದ್ರ ಸಕ್ಸೇನಾ ಮಾತನಾಡಿದ್ದು, ಇದು ಕೇವಲ ವೈದ್ಯಕೀಯ ದೃಷ್ಟಿಯಿಂದ ಅಲ್ಲ, ಜನರ ಆರೋಗ್ಯದ ದೃಷ್ಟಿಯಿಂದ ಜಾರಿಗೊಳಿಸುತ್ತಿರುವ ಯೋಜನೆಯಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿದಿನ 10ರಿಂದ 20 ಮಿಲಿ ಲೀಟರ್ ಗೋಮೂತ್ರ ಸೇವನೆ ಮಾಡುವುದರಿಂದ ಆಯಾ ಕಾಲಮಾನಕ್ಕೆ ಬರುವ ನೆಗಡಿ, ಕೆಮ್ಮು, ಜ್ವರ ಹಾಗೂ ಹೊಟ್ಟೆಗೆ ಸಂಬಂಧಿಸಿದಂತಹ ರೋಗ ತಡೆಯಬಹುದಾಗಿದೆ. ಹಾಗಾಗಿಯೇ ಸರ್ಕಾರ ಗೋಮೂತ್ರ ಸರಬರಾಜಿಗೆ ಮುಂದಾಗಿದೆ ಎಂದು ವಿವರಿಸಿದ್ದಾರೆ.

ಆದಾಗ್ಯೂ ಪ್ರಸ್ತುತ ಯೋಗಿ ಆದಿತ್ಯನಾಥರ ಸರ್ಕಾರ 7 ಜಿಲ್ಲೆಗಳು ಹಾಗೂ 16 ನಗರಗಳಲ್ಲಿ 1000 ಗೋವುಗಳನ್ನು ಸಾಕಬಹುದಾದಂತ ಗೋಶಾಲೆ ತೆರೆಯಲು ಒಪ್ಪಿಗೆ ಸೂಚಿಸಿದೆ. ಇವುಗಳಿಂದ ರಾಜ್ಯದ ಜನರಿಗೆ ಅಗತ್ಯವಾಗುವ ಗೋಮೂತ್ರ ಸಂಗ್ರಹಿಸಲಾಗುತ್ತದೆ. ಅಲ್ಲದೆ, ಸರ್ಕಾರೇತರ ಸಂಸ್ಥೆಗಳು ನಡೆಸುತ್ತಿರುವ ಗೋಶಾಲೆಗಳಿಂದಲೂ ಗೋಮೂತ್ರ ಸಂಗ್ರಹಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 3
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search