• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಸರ್ಕಾರದಿಂದ ಮತ್ತೊಂದು ದಿಟ್ಟ ನಿರ್ಧಾರ, ಜನರ ಆರೋಗ್ಯಕ್ಕಾಗಿ ಗೋಮೂತ್ರ ಸರಬರಾಜಿಗೆ ಚಿಂತನೆ

TNN Correspondent Posted On March 22, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಅಧಿಕಾರಕ್ಕೆ ಬಂದ ಮೇಲೆ ಹಲವು ದಿಟ್ಟ ನಿರ್ಧಾರಗಳನ್ನು ಕೈಗೊಂಡು ದೇಶವೇ ಉತ್ತರ ಪ್ರದೇಶದತ್ತ ನೋಡುವಹಾಗೆ ಮಾಡಿದ್ದಾರೆ. ಅದರಲ್ಲೂ ಅಪರಾಧ ನಿಗ್ರಹ ವಿಷಯದಲ್ಲಿ ಅವರು ದೇಶಕ್ಕೇ ಮಾದರಿಯಾಗಿದ್ದಾರೆ ಎಂದರೆ ತಪ್ಪಾಗಲಾರದು.

ಇಂತಹ ಯೋಗಿ ಆದಿತ್ಯನಾಥರು ಈಗ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದು, ಜನರ ಆರೋಗ್ಯದ ದೃಷ್ಟಿಯಿಂದ ಕಡಿಮೆ ಬೆಲೆಗೆ ಬಾಟಲ್ ಗಳಲ್ಲಿ ಸಂಗ್ರಹಿಸಿ ಗೋಮೂತ್ರ ಸರಬರಾಜು ಮಾಡಲು ಚಿಂತನೆ ನಡೆಸಿದ್ದಾರೆ.

ಸರ್ಕಾರಿ ಆಯುರ್ವೇದಿಕ್ ಫಾರ್ಮಸಿ ಈ ಜವಾಬ್ದಾರಿ ಹೊತ್ತಿದ್ದು, ಗೋಮೂತ್ರ ಸಂಗ್ರಹಿಸಿ, ಪರಿಷ್ಕರಿಸಿ, ಮಾರಾಟ ಮಾಡುವ ಕುರಿತು ಸರ್ಕಾರದ ಎದುರು ಪ್ರಸ್ತಾಪವಿಟ್ಟಿದ್ದು, ಕೂಡಲೇ ಅನುಮೋದನೆ ಸಿಕ್ಕು, ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಈ ಕುರಿತು ಪಿಲಿಬಿಟ್ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಧಾನ ಮೇಲ್ವಿಚಾರಕರಾಗಿರುವ ಡಾ.ಪ್ರಕಾಶ್ ಚಂದ್ರ ಸಕ್ಸೇನಾ ಮಾತನಾಡಿದ್ದು, ಇದು ಕೇವಲ ವೈದ್ಯಕೀಯ ದೃಷ್ಟಿಯಿಂದ ಅಲ್ಲ, ಜನರ ಆರೋಗ್ಯದ ದೃಷ್ಟಿಯಿಂದ ಜಾರಿಗೊಳಿಸುತ್ತಿರುವ ಯೋಜನೆಯಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿದಿನ 10ರಿಂದ 20 ಮಿಲಿ ಲೀಟರ್ ಗೋಮೂತ್ರ ಸೇವನೆ ಮಾಡುವುದರಿಂದ ಆಯಾ ಕಾಲಮಾನಕ್ಕೆ ಬರುವ ನೆಗಡಿ, ಕೆಮ್ಮು, ಜ್ವರ ಹಾಗೂ ಹೊಟ್ಟೆಗೆ ಸಂಬಂಧಿಸಿದಂತಹ ರೋಗ ತಡೆಯಬಹುದಾಗಿದೆ. ಹಾಗಾಗಿಯೇ ಸರ್ಕಾರ ಗೋಮೂತ್ರ ಸರಬರಾಜಿಗೆ ಮುಂದಾಗಿದೆ ಎಂದು ವಿವರಿಸಿದ್ದಾರೆ.

ಆದಾಗ್ಯೂ ಪ್ರಸ್ತುತ ಯೋಗಿ ಆದಿತ್ಯನಾಥರ ಸರ್ಕಾರ 7 ಜಿಲ್ಲೆಗಳು ಹಾಗೂ 16 ನಗರಗಳಲ್ಲಿ 1000 ಗೋವುಗಳನ್ನು ಸಾಕಬಹುದಾದಂತ ಗೋಶಾಲೆ ತೆರೆಯಲು ಒಪ್ಪಿಗೆ ಸೂಚಿಸಿದೆ. ಇವುಗಳಿಂದ ರಾಜ್ಯದ ಜನರಿಗೆ ಅಗತ್ಯವಾಗುವ ಗೋಮೂತ್ರ ಸಂಗ್ರಹಿಸಲಾಗುತ್ತದೆ. ಅಲ್ಲದೆ, ಸರ್ಕಾರೇತರ ಸಂಸ್ಥೆಗಳು ನಡೆಸುತ್ತಿರುವ ಗೋಶಾಲೆಗಳಿಂದಲೂ ಗೋಮೂತ್ರ ಸಂಗ್ರಹಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search