• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಸರ್ಕಾರದಿಂದ ಮತ್ತೊಂದು ದಿಟ್ಟ ನಿರ್ಧಾರ, ಜನರ ಆರೋಗ್ಯಕ್ಕಾಗಿ ಗೋಮೂತ್ರ ಸರಬರಾಜಿಗೆ ಚಿಂತನೆ

TNN Correspondent Posted On March 22, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಅಧಿಕಾರಕ್ಕೆ ಬಂದ ಮೇಲೆ ಹಲವು ದಿಟ್ಟ ನಿರ್ಧಾರಗಳನ್ನು ಕೈಗೊಂಡು ದೇಶವೇ ಉತ್ತರ ಪ್ರದೇಶದತ್ತ ನೋಡುವಹಾಗೆ ಮಾಡಿದ್ದಾರೆ. ಅದರಲ್ಲೂ ಅಪರಾಧ ನಿಗ್ರಹ ವಿಷಯದಲ್ಲಿ ಅವರು ದೇಶಕ್ಕೇ ಮಾದರಿಯಾಗಿದ್ದಾರೆ ಎಂದರೆ ತಪ್ಪಾಗಲಾರದು.

ಇಂತಹ ಯೋಗಿ ಆದಿತ್ಯನಾಥರು ಈಗ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದು, ಜನರ ಆರೋಗ್ಯದ ದೃಷ್ಟಿಯಿಂದ ಕಡಿಮೆ ಬೆಲೆಗೆ ಬಾಟಲ್ ಗಳಲ್ಲಿ ಸಂಗ್ರಹಿಸಿ ಗೋಮೂತ್ರ ಸರಬರಾಜು ಮಾಡಲು ಚಿಂತನೆ ನಡೆಸಿದ್ದಾರೆ.

ಸರ್ಕಾರಿ ಆಯುರ್ವೇದಿಕ್ ಫಾರ್ಮಸಿ ಈ ಜವಾಬ್ದಾರಿ ಹೊತ್ತಿದ್ದು, ಗೋಮೂತ್ರ ಸಂಗ್ರಹಿಸಿ, ಪರಿಷ್ಕರಿಸಿ, ಮಾರಾಟ ಮಾಡುವ ಕುರಿತು ಸರ್ಕಾರದ ಎದುರು ಪ್ರಸ್ತಾಪವಿಟ್ಟಿದ್ದು, ಕೂಡಲೇ ಅನುಮೋದನೆ ಸಿಕ್ಕು, ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಈ ಕುರಿತು ಪಿಲಿಬಿಟ್ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಧಾನ ಮೇಲ್ವಿಚಾರಕರಾಗಿರುವ ಡಾ.ಪ್ರಕಾಶ್ ಚಂದ್ರ ಸಕ್ಸೇನಾ ಮಾತನಾಡಿದ್ದು, ಇದು ಕೇವಲ ವೈದ್ಯಕೀಯ ದೃಷ್ಟಿಯಿಂದ ಅಲ್ಲ, ಜನರ ಆರೋಗ್ಯದ ದೃಷ್ಟಿಯಿಂದ ಜಾರಿಗೊಳಿಸುತ್ತಿರುವ ಯೋಜನೆಯಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿದಿನ 10ರಿಂದ 20 ಮಿಲಿ ಲೀಟರ್ ಗೋಮೂತ್ರ ಸೇವನೆ ಮಾಡುವುದರಿಂದ ಆಯಾ ಕಾಲಮಾನಕ್ಕೆ ಬರುವ ನೆಗಡಿ, ಕೆಮ್ಮು, ಜ್ವರ ಹಾಗೂ ಹೊಟ್ಟೆಗೆ ಸಂಬಂಧಿಸಿದಂತಹ ರೋಗ ತಡೆಯಬಹುದಾಗಿದೆ. ಹಾಗಾಗಿಯೇ ಸರ್ಕಾರ ಗೋಮೂತ್ರ ಸರಬರಾಜಿಗೆ ಮುಂದಾಗಿದೆ ಎಂದು ವಿವರಿಸಿದ್ದಾರೆ.

ಆದಾಗ್ಯೂ ಪ್ರಸ್ತುತ ಯೋಗಿ ಆದಿತ್ಯನಾಥರ ಸರ್ಕಾರ 7 ಜಿಲ್ಲೆಗಳು ಹಾಗೂ 16 ನಗರಗಳಲ್ಲಿ 1000 ಗೋವುಗಳನ್ನು ಸಾಕಬಹುದಾದಂತ ಗೋಶಾಲೆ ತೆರೆಯಲು ಒಪ್ಪಿಗೆ ಸೂಚಿಸಿದೆ. ಇವುಗಳಿಂದ ರಾಜ್ಯದ ಜನರಿಗೆ ಅಗತ್ಯವಾಗುವ ಗೋಮೂತ್ರ ಸಂಗ್ರಹಿಸಲಾಗುತ್ತದೆ. ಅಲ್ಲದೆ, ಸರ್ಕಾರೇತರ ಸಂಸ್ಥೆಗಳು ನಡೆಸುತ್ತಿರುವ ಗೋಶಾಲೆಗಳಿಂದಲೂ ಗೋಮೂತ್ರ ಸಂಗ್ರಹಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search