• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಪರ್ಸಾನಿಕ್ ಬ್ರಹ್ಮೋಸ್ ಮಿಸೈಲ್ ಪರೀಕ್ಷಾರ್ಥ ಯಶಸ್ವಿ ಉಡಾವಣೆ

TNN Correspondent Posted On March 22, 2018
0


0
Shares
  • Share On Facebook
  • Tweet It

ದೆಹಲಿ: ಭಾರತದ ಪ್ರಥಮ ಬಾರಿಗೆ ಯಶಸ್ವಿಯಾಗಿ ಸುಪರ್ಸೋನಿಕ್ ಬ್ರಹ್ಮೋಸ್ ಪರೀಕ್ಷಾರ್ಥ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಪ್ರೋಖ್ರಾನ್ ಪ್ರದೇಶದಲ್ಲಿ ಈ ಪ್ರಯೋಗಾರ್ಥ ಉಡಾವಣೆ ನಡೆದಿದ್ದು, ಯಶಸ್ವಿಯಾಗಿದೆ. ಭಾರತದ ರಕ್ಷಣಾ ಬಲಗಳಿಗೆ ತಾಕತ್ತು ನೀಡುವ ಬ್ರಹ್ಮೋಸ್ ಯಶಸ್ವಿ ಪರೀಕ್ಷಾರ್ಥ ಉಡಾವಣೆ ವಿಶ್ವದ ಗಮನ ಸೆಳೆದಿದೆ.

ಗುರುವಾರ ಬೆಳಗ್ಗೆ 8.42 ಗಂಟೆಗೆ ಈ ಪ್ರಯೋಗ ನಡೆದಿದೆ. ಶತ್ರುಗಳನ್ನು ಸದೆಬಡೆಯುವಲ್ಲಿ ವಿಶೇಷ ತಾಕತ್ತು ಹೊಂದಿರುವ ಬ್ರಹ್ಮೋಸ್ ಮಿಸೈಲ್ ಸೈನ್ಯಕ್ಕೆ ಹೊಸ ಬಲ ನೀಡಲಿದೆ. ಭಾರತ ಮತ್ತು ರಷ್ಯಾದ ಸಹಯೋಗದಲ್ಲಿ ಈ ಮಿಸೈಲ್ ಉಡಾವಣೆ ಕಾರ್ಯ ನಡೆದಿದ್ದು, ಎರಡು ರಾಷ್ಟ್ರಗಳ ನದಿಗಳಾದ ಬ್ರಹ್ಮಪುತ್ರ ಮತ್ತು ರಷ್ಯಾದ ಮಾಸ್ಕೋವಾ ನದಿಯ ಹೆಸರುಗಳನ್ನು ಜೋಡಿಸಿ ಬ್ರಹ್ಮೋಸ್ ಎಂದು ನಾಮಕರಣ ಮಾಡಲಾಗಿದೆ. ಪ್ರಸ್ತುತ ಭಾರತದಲ್ಲಿರುವ ಎಲ್ಲ ಮಿಸೈಲ್ ಗಳಿಂದ ಬ್ರಹ್ಮೋಸ್ ಸುಪರ್ಸಾನಿಕ್ ಮಿಸೈಲ್ ತೀವ್ರ ವೇಗವನ್ನು ಹೊಂದಿದ್ದು, 400 ಕಿ.ಮೀ. ವ್ಯಾಪ್ತಿಯಲ್ಲಿ ದಾಳಿ ನಡೆಸುವ ತಾಕತ್ತು ಹೊಂದಿದೆ.

ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ದೇಶದ ತಂತ್ರಜ್ಞಾನ, ವಿಶೇಷವಾಗಿ ಸೈನ್ಯಕ್ಕೆ ಬಳಕೆಯಾಗುತ್ತಿರುವ ತಂತ್ರಜ್ಞಾನಕ್ಕೆ ಒತ್ತು ನೀಡುತ್ತಿರುವುದರ ಫಲ ಈ ಬ್ರಹ್ಮೋಸ್ ಮಿಸೈಲ್ ಎನ್ನಬಹುದು. ಈ ಮಿಸೈಲ್ ಸ್ವಮಾರ್ಗದರ್ಶಕ ನಿಯಂತ್ರಣ ವ್ಯವಸ್ಥೆ ಹೊಂದಿರುವುದು ವಿಶೇಷ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search