• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೀರಿನ ಸಮಸ್ಯೆ ಎದುರಿಸುತ್ತಿರುವ ಜಗತ್ತಿನ ನಗರಗಳಲ್ಲಿ ಬೆಂಗಳೂರು ಸಹ ಒಂದು, ಏನು ಮಾಡುತ್ತಿದ್ದೀರಿ ಸಿದ್ದರಾಮಯ್ಯ?

TNN Correspondent Posted On March 23, 2018
0


0
Shares
  • Share On Facebook
  • Tweet It

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಇನ್ನೂ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿ ಮರ್ಯಾದೆ ಕಳೆಯಬೇಕು ಎಂದಿದ್ದಾರೋ? ಮೊದಲು ಕಸ ವಿಲೇವಾರಿಗಾಗಿ ಬೆಂಗಳೂರು ಸುದ್ದಿಯಾಯಿತು. ಬಳಿಕ ಬೆಂಗಳೂರಿನ ಗುಂಡಿಗಳು, ಮ್ಯಾನ್ ಹೋಲ್ ಗಳು ಬೆಂಗಳೂರಿನ ಮಾನ ಹರಾಜು ಹಾಕಿದವು.

ಈಗ ಪರಿಸರ ಮತ್ತು ವಿಜ್ಞಾನ ಕೇಂದ್ರ ಎಂಬ ಸಂಸ್ಥೆಯ ಡೌನ್ ಟು ಅರ್ಥ್ ಎಂಬ ನಿಯತಕಾಲಿಕೆ ಸಮೀಕ್ಷೆ ನಡೆಸಿದ್ದು, ಜಗತ್ತಿನಲ್ಲಿ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿರುವ 200 ನಗರಗಳಲ್ಲಿ ಬೆಂಗಳೂರು ಸಹ ಒಂದು ಎಂದು ಗುರುತಿಸಲ್ಪಟ್ಟಿದೆ. ಅಷ್ಟೇ ಅಲ್ಲ, ಶೂನ್ಯ ದಿನ ಅಂದರೇ ಬೆಂಗಳೂರು ನೀರು ರಹಿತ ನಗರವಾಗುವತ್ತ ದಾಪುಗಾಲು ಇಡುತ್ತಿದೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.

ಬೆಂಗಳೂರು ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಸಾಗುತ್ತಿರುವ ನೀರಿನ ಸಮಸ್ಯೆಯ ಹಾದಿಯಲ್ಲಿ ಸಾಗುತ್ತಿದೆ. ಪ್ರಸ್ತುತ ಕೇಪ್ ಟೌನ್, ಒಂದು ವರ್ಷದಲ್ಲಿ, ತಿಂಗಳಲ್ಲಿ ಬರಿದಾಗುವ ಸಾಧ್ಯತೆ ಇದೆ. ಇದೇ ರೀತಿ ಬೆಂಗಳೂರು ಸಹ ಬರಿದಾಗುವ ದಿನ ಬಹುದೂರವಿಲ್ಲ ಎಂದು ಸಮೀಕ್ಷೆಯಲ್ಲಿ ಎಚ್ಚರಿಸಲಾಗಿದೆ.

ಬೆಂಗಳೂರಿನಲ್ಲಿ ದಿನೇದಿನೆ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಕಳೆದ 30 ವರ್ಷಗಳಲ್ಲಿ ಬೆಂಗಳೂರಿನಲ್ಲಿ 4.5 ಲಕ್ಷ ಇದ್ದ ಕೆರೆ, ಬಾವಿಗಳ ಸಂಖ್ಯೆ ಪ್ರಸ್ತುತ 5 ಸಾವಿರಕ್ಕೆ ಇಳಿದಿದೆ. ಇದು ಹೀಗೆಯೇ ಮುಂದುವರಿದರೆ ಬೆಂಗಳೂರು ಗಂಭೀರವಾಗಿ ನೀರಿನ ಸಮಸ್ಯೆ ಎದುರಿಸುತ್ತದೆ ಎಂದು ತಿಳಿದುಬಂದಿದೆ.

ಅದರಲ್ಲೂ ಗಂಭೀರ ಸಮಸ್ಯೆ ಎದುರಿಸುತ್ತಿರುವ ಜಗತ್ತಿನ ಹತ್ತು ಮಹಾನಗರಗಳನ್ನು ಪಟ್ಟಿ ಮಾಡಿದ್ದು, ಇದರಲ್ಲಿ ಬೆಂಗಳೂರು ಸಹ ಸೇರಿದೆ. ಚೀನಾದ ಬೀಜಿಂಗ್, ಮೆಕ್ಸಿಕೋದ ಮೆಕ್ಸಿಕೋ ಸಿಟಿ, ಯೆಮೆನ್ ನ ಸನಾ, ಕೀನ್ಯಾದ ನೈರೋಬಿ, ಟರ್ಕಿಯ ಇಸ್ತಾನ್ ಬುಲ್, ಬ್ರೆಜಿಲ್ ನ ಸಾವೋ ಪೌಲೋ, ಪಾಕಿಸ್ತಾನದ ಕರಾಚಿ ಸೇರಿ ಹಲವು ರಾಷ್ಟ್ರಗಳು ಸೇರಿವೆ.

ಕಳೆದ ನಾಲ್ಕೈದು ವರ್ಷದಿಂದ ಬೆಳ್ಳಂದೂರು ಕೆರೆ ನೊರೆ, ಬೆಂಕಿ ಸೇರಿ ಹಲವು ಕಾರಣಗಳಿಂದಾಗಿ ಸುದ್ದಿಯಾಗುತ್ತಿದೆ. ಹಲವು ಕೆರೆಗಳನ್ನು ಒತ್ತುವರಿ ಮಾಡಿಕೊಳ್ಳಲಾಗುತ್ತಿದೆ. ಇಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಮಸ್ಯೆಯೇ ಪರಿವೇ ಇಲ್ಲದೆ ಸುಮ್ಮನಾಗಿದ್ದಾರೆ. ಪರಿಣಾಮ ಬೆಂಗಳೂರು ಶೂನ್ಯದಿನದತ್ತ ಸಾಗುತ್ತಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search