• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೀರಿನ ಸಮಸ್ಯೆ ಎದುರಿಸುತ್ತಿರುವ ಜಗತ್ತಿನ ನಗರಗಳಲ್ಲಿ ಬೆಂಗಳೂರು ಸಹ ಒಂದು, ಏನು ಮಾಡುತ್ತಿದ್ದೀರಿ ಸಿದ್ದರಾಮಯ್ಯ?

TNN Correspondent Posted On March 23, 2018
0


0
Shares
  • Share On Facebook
  • Tweet It

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಇನ್ನೂ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿ ಮರ್ಯಾದೆ ಕಳೆಯಬೇಕು ಎಂದಿದ್ದಾರೋ? ಮೊದಲು ಕಸ ವಿಲೇವಾರಿಗಾಗಿ ಬೆಂಗಳೂರು ಸುದ್ದಿಯಾಯಿತು. ಬಳಿಕ ಬೆಂಗಳೂರಿನ ಗುಂಡಿಗಳು, ಮ್ಯಾನ್ ಹೋಲ್ ಗಳು ಬೆಂಗಳೂರಿನ ಮಾನ ಹರಾಜು ಹಾಕಿದವು.

ಈಗ ಪರಿಸರ ಮತ್ತು ವಿಜ್ಞಾನ ಕೇಂದ್ರ ಎಂಬ ಸಂಸ್ಥೆಯ ಡೌನ್ ಟು ಅರ್ಥ್ ಎಂಬ ನಿಯತಕಾಲಿಕೆ ಸಮೀಕ್ಷೆ ನಡೆಸಿದ್ದು, ಜಗತ್ತಿನಲ್ಲಿ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿರುವ 200 ನಗರಗಳಲ್ಲಿ ಬೆಂಗಳೂರು ಸಹ ಒಂದು ಎಂದು ಗುರುತಿಸಲ್ಪಟ್ಟಿದೆ. ಅಷ್ಟೇ ಅಲ್ಲ, ಶೂನ್ಯ ದಿನ ಅಂದರೇ ಬೆಂಗಳೂರು ನೀರು ರಹಿತ ನಗರವಾಗುವತ್ತ ದಾಪುಗಾಲು ಇಡುತ್ತಿದೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.

ಬೆಂಗಳೂರು ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಸಾಗುತ್ತಿರುವ ನೀರಿನ ಸಮಸ್ಯೆಯ ಹಾದಿಯಲ್ಲಿ ಸಾಗುತ್ತಿದೆ. ಪ್ರಸ್ತುತ ಕೇಪ್ ಟೌನ್, ಒಂದು ವರ್ಷದಲ್ಲಿ, ತಿಂಗಳಲ್ಲಿ ಬರಿದಾಗುವ ಸಾಧ್ಯತೆ ಇದೆ. ಇದೇ ರೀತಿ ಬೆಂಗಳೂರು ಸಹ ಬರಿದಾಗುವ ದಿನ ಬಹುದೂರವಿಲ್ಲ ಎಂದು ಸಮೀಕ್ಷೆಯಲ್ಲಿ ಎಚ್ಚರಿಸಲಾಗಿದೆ.

ಬೆಂಗಳೂರಿನಲ್ಲಿ ದಿನೇದಿನೆ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಕಳೆದ 30 ವರ್ಷಗಳಲ್ಲಿ ಬೆಂಗಳೂರಿನಲ್ಲಿ 4.5 ಲಕ್ಷ ಇದ್ದ ಕೆರೆ, ಬಾವಿಗಳ ಸಂಖ್ಯೆ ಪ್ರಸ್ತುತ 5 ಸಾವಿರಕ್ಕೆ ಇಳಿದಿದೆ. ಇದು ಹೀಗೆಯೇ ಮುಂದುವರಿದರೆ ಬೆಂಗಳೂರು ಗಂಭೀರವಾಗಿ ನೀರಿನ ಸಮಸ್ಯೆ ಎದುರಿಸುತ್ತದೆ ಎಂದು ತಿಳಿದುಬಂದಿದೆ.

ಅದರಲ್ಲೂ ಗಂಭೀರ ಸಮಸ್ಯೆ ಎದುರಿಸುತ್ತಿರುವ ಜಗತ್ತಿನ ಹತ್ತು ಮಹಾನಗರಗಳನ್ನು ಪಟ್ಟಿ ಮಾಡಿದ್ದು, ಇದರಲ್ಲಿ ಬೆಂಗಳೂರು ಸಹ ಸೇರಿದೆ. ಚೀನಾದ ಬೀಜಿಂಗ್, ಮೆಕ್ಸಿಕೋದ ಮೆಕ್ಸಿಕೋ ಸಿಟಿ, ಯೆಮೆನ್ ನ ಸನಾ, ಕೀನ್ಯಾದ ನೈರೋಬಿ, ಟರ್ಕಿಯ ಇಸ್ತಾನ್ ಬುಲ್, ಬ್ರೆಜಿಲ್ ನ ಸಾವೋ ಪೌಲೋ, ಪಾಕಿಸ್ತಾನದ ಕರಾಚಿ ಸೇರಿ ಹಲವು ರಾಷ್ಟ್ರಗಳು ಸೇರಿವೆ.

ಕಳೆದ ನಾಲ್ಕೈದು ವರ್ಷದಿಂದ ಬೆಳ್ಳಂದೂರು ಕೆರೆ ನೊರೆ, ಬೆಂಕಿ ಸೇರಿ ಹಲವು ಕಾರಣಗಳಿಂದಾಗಿ ಸುದ್ದಿಯಾಗುತ್ತಿದೆ. ಹಲವು ಕೆರೆಗಳನ್ನು ಒತ್ತುವರಿ ಮಾಡಿಕೊಳ್ಳಲಾಗುತ್ತಿದೆ. ಇಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಮಸ್ಯೆಯೇ ಪರಿವೇ ಇಲ್ಲದೆ ಸುಮ್ಮನಾಗಿದ್ದಾರೆ. ಪರಿಣಾಮ ಬೆಂಗಳೂರು ಶೂನ್ಯದಿನದತ್ತ ಸಾಗುತ್ತಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search