• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೀರಿನ ಸಮಸ್ಯೆ ಎದುರಿಸುತ್ತಿರುವ ಜಗತ್ತಿನ ನಗರಗಳಲ್ಲಿ ಬೆಂಗಳೂರು ಸಹ ಒಂದು, ಏನು ಮಾಡುತ್ತಿದ್ದೀರಿ ಸಿದ್ದರಾಮಯ್ಯ?

TNN Correspondent Posted On March 23, 2018
0


0
Shares
  • Share On Facebook
  • Tweet It

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಇನ್ನೂ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿ ಮರ್ಯಾದೆ ಕಳೆಯಬೇಕು ಎಂದಿದ್ದಾರೋ? ಮೊದಲು ಕಸ ವಿಲೇವಾರಿಗಾಗಿ ಬೆಂಗಳೂರು ಸುದ್ದಿಯಾಯಿತು. ಬಳಿಕ ಬೆಂಗಳೂರಿನ ಗುಂಡಿಗಳು, ಮ್ಯಾನ್ ಹೋಲ್ ಗಳು ಬೆಂಗಳೂರಿನ ಮಾನ ಹರಾಜು ಹಾಕಿದವು.

ಈಗ ಪರಿಸರ ಮತ್ತು ವಿಜ್ಞಾನ ಕೇಂದ್ರ ಎಂಬ ಸಂಸ್ಥೆಯ ಡೌನ್ ಟು ಅರ್ಥ್ ಎಂಬ ನಿಯತಕಾಲಿಕೆ ಸಮೀಕ್ಷೆ ನಡೆಸಿದ್ದು, ಜಗತ್ತಿನಲ್ಲಿ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿರುವ 200 ನಗರಗಳಲ್ಲಿ ಬೆಂಗಳೂರು ಸಹ ಒಂದು ಎಂದು ಗುರುತಿಸಲ್ಪಟ್ಟಿದೆ. ಅಷ್ಟೇ ಅಲ್ಲ, ಶೂನ್ಯ ದಿನ ಅಂದರೇ ಬೆಂಗಳೂರು ನೀರು ರಹಿತ ನಗರವಾಗುವತ್ತ ದಾಪುಗಾಲು ಇಡುತ್ತಿದೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.

ಬೆಂಗಳೂರು ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಸಾಗುತ್ತಿರುವ ನೀರಿನ ಸಮಸ್ಯೆಯ ಹಾದಿಯಲ್ಲಿ ಸಾಗುತ್ತಿದೆ. ಪ್ರಸ್ತುತ ಕೇಪ್ ಟೌನ್, ಒಂದು ವರ್ಷದಲ್ಲಿ, ತಿಂಗಳಲ್ಲಿ ಬರಿದಾಗುವ ಸಾಧ್ಯತೆ ಇದೆ. ಇದೇ ರೀತಿ ಬೆಂಗಳೂರು ಸಹ ಬರಿದಾಗುವ ದಿನ ಬಹುದೂರವಿಲ್ಲ ಎಂದು ಸಮೀಕ್ಷೆಯಲ್ಲಿ ಎಚ್ಚರಿಸಲಾಗಿದೆ.

ಬೆಂಗಳೂರಿನಲ್ಲಿ ದಿನೇದಿನೆ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಕಳೆದ 30 ವರ್ಷಗಳಲ್ಲಿ ಬೆಂಗಳೂರಿನಲ್ಲಿ 4.5 ಲಕ್ಷ ಇದ್ದ ಕೆರೆ, ಬಾವಿಗಳ ಸಂಖ್ಯೆ ಪ್ರಸ್ತುತ 5 ಸಾವಿರಕ್ಕೆ ಇಳಿದಿದೆ. ಇದು ಹೀಗೆಯೇ ಮುಂದುವರಿದರೆ ಬೆಂಗಳೂರು ಗಂಭೀರವಾಗಿ ನೀರಿನ ಸಮಸ್ಯೆ ಎದುರಿಸುತ್ತದೆ ಎಂದು ತಿಳಿದುಬಂದಿದೆ.

ಅದರಲ್ಲೂ ಗಂಭೀರ ಸಮಸ್ಯೆ ಎದುರಿಸುತ್ತಿರುವ ಜಗತ್ತಿನ ಹತ್ತು ಮಹಾನಗರಗಳನ್ನು ಪಟ್ಟಿ ಮಾಡಿದ್ದು, ಇದರಲ್ಲಿ ಬೆಂಗಳೂರು ಸಹ ಸೇರಿದೆ. ಚೀನಾದ ಬೀಜಿಂಗ್, ಮೆಕ್ಸಿಕೋದ ಮೆಕ್ಸಿಕೋ ಸಿಟಿ, ಯೆಮೆನ್ ನ ಸನಾ, ಕೀನ್ಯಾದ ನೈರೋಬಿ, ಟರ್ಕಿಯ ಇಸ್ತಾನ್ ಬುಲ್, ಬ್ರೆಜಿಲ್ ನ ಸಾವೋ ಪೌಲೋ, ಪಾಕಿಸ್ತಾನದ ಕರಾಚಿ ಸೇರಿ ಹಲವು ರಾಷ್ಟ್ರಗಳು ಸೇರಿವೆ.

ಕಳೆದ ನಾಲ್ಕೈದು ವರ್ಷದಿಂದ ಬೆಳ್ಳಂದೂರು ಕೆರೆ ನೊರೆ, ಬೆಂಕಿ ಸೇರಿ ಹಲವು ಕಾರಣಗಳಿಂದಾಗಿ ಸುದ್ದಿಯಾಗುತ್ತಿದೆ. ಹಲವು ಕೆರೆಗಳನ್ನು ಒತ್ತುವರಿ ಮಾಡಿಕೊಳ್ಳಲಾಗುತ್ತಿದೆ. ಇಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಮಸ್ಯೆಯೇ ಪರಿವೇ ಇಲ್ಲದೆ ಸುಮ್ಮನಾಗಿದ್ದಾರೆ. ಪರಿಣಾಮ ಬೆಂಗಳೂರು ಶೂನ್ಯದಿನದತ್ತ ಸಾಗುತ್ತಿದೆ.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search