• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಕ್ಕಳನ್ನು ದಾರಿ ತಪ್ಪಿಸಲು ಅಖಿಲೇಶ್ ಯಾದವರಿಗಿಂತ ಬೇರೆ ಉದಾಹರಣೆ ಬೇಕಿಲ್ಲ!

TNN Correspondent Posted On March 23, 2018
0


0
Shares
  • Share On Facebook
  • Tweet It

ಲಖನೌ: ಒಬ್ಬ ನಾಯಕನಾದವನು ಹೇಗಿರಬೇಕು. ತಾನು ಸರಿದಾರಿಯಲ್ಲಿ ನಡೆದು, ಸಮಾಜವನ್ನೂ ಸರಿದಾರಿಯಲ್ಲಿ ನಡೆಯುವ ಹಾಗೆ ಮಾಡಬೇಕು. ಮಾದರಿಯಾಗಿ ಜೀವನ ಸಾಗಿಸಬೇಕು. ಎಲ್ಲರೂ ಅವನಿಂದ ಬೊಗಸೆಯಷ್ಟಾದರೂ ಸ್ಫೂರ್ತಿ ಪಡೆಯುವಂತಿರಬೇಕು.

ಇದೇ ಕಾರಣಕ್ಕಾಗಿ ತಾವೂ ಸರಿಯಾಗಿರುವ, ಸಮಾಜವನ್ನೂ ಸರಿಯಾಗಿ ಮುನ್ನಡೆಸುವ ರೀತಿಯಲ್ಲಿ ಉತ್ತರ ಪ್ರದೇಶಲ್ಲಿ ಯೋಗಿ ಆದಿತ್ಯನಾಥರು ರೌಡಿಗಳನ್ನು ಮಟ್ಟಹಾಕುವ ಜತೆಗೆ, ಮುಂದಿನ ಸಮಾಜ ಉತ್ತಮ ನಾಗರಿಕರನ್ನು ಕಾಣುವ ದೃಷ್ಟಿಯಿಂದ ರಾಜ್ಯದಲ್ಲಿ ನಡೆಯುವ ಎಲ್ಲ ಪರೀಕ್ಷೆಗಳನ್ನು ಸುಭದ್ರವಾಗಿ, ನಕಲು ಮಾಡದಂತೆ ನೋಡಿಕೊಳ್ಳುತ್ತಿದ್ದಾರೆ. ಸಿಸಿಟಿವಿ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತಾಗಿದೆ.

ಆದರೆ ಯೋಗಿ ಆದಿತ್ಯನಾಥರಂತಹ ನಾಯಕರಿರುವ ಈ ರಾಜ್ಯದಲ್ಲಿ ಅಖಿಲೇಶ್ ಯಾದವ್ ಅವರಂತಹವರೂ ಇದ್ದಾರಲ್ಲ ಎಂಬ ಬೇಸರ ಕಾಡುವಂತಾಗಿದೆ. ಹೌದು, ಸುಖಾಸುಮ್ಮನೆ ಹೇಳುತ್ತಿಲ್ಲ, ರಾಜ್ಯದಲ್ಲಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸರ್ಕಾರ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಮಾತನಾಡಿರುವ ಅಖಿಲೇಶ್ ಯಾದವ್, “ವಿದ್ಯಾರ್ಥಿಗಳು ಸಣ್ಣ ಪುಟ್ಟ ಅಂಶಗಳನ್ನು ನಕಲು ಮಾಡಿದರೆ, ಅದು ನಕಲು ಎನಿಸುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಬಹುತೇಕ ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯಲ್ಲಿ ಸ್ವಲ್ಪವಾದರೂ ನಕಲು ಮಾಡುತ್ತಾರೆ. ಎಲ್ಲೋ ಸುಮಾರು ಶೇ.10ರಷ್ಟು ವಿದ್ಯಾರ್ಥಿಗಳು ಚೀಟಿ ಮಾಡದಿರಬಹುದು. ಆದರೆ ಉಳಿದವರ ಬಗ್ಗೆ ಏನು ಹೇಳುತ್ತೀರಿ? ಆದರೆ ಅದನ್ನು ನಕಲು ಎಂದು ಪರಿಗಣಸಲಾಗಲ್ಲ ಎಂದಿದ್ದಾರೆ.

ಅಲ್ಲ, ಯಾವುದೋ 10 ಜನರಿರುವ ಗುಂಪಿನಲ್ಲಿ 8 ಜನ ಮದ್ಯ ಸೇವನೆ ಮಾಡುತ್ತಾರೆ ಎಂದು, ಉಳಿದವರೂ ಮಾಡಲಿ ಎನ್ನುವಂತೆ ಅಖಿಲೇಶ್ ಯಾದವ್ ಹೇಳಿದ್ದಾರೆ. ವಿದ್ಯಾರ್ಥಿಗಳು ನಕಲು ಮಾಡದೆ ಉತ್ತೀರ್ಣರಾಗಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಯೋಗಿ ಆದಿತ್ಯನಾಥರು ಶಕ್ತಿ ತುಂಬುತ್ತಿದ್ದರೆ, ಮಾಜಿ ಸಿಎಂ ಅಖಿಲೇಶ್ ಯಾದವ್ ಮಕ್ಕಳ ದಾರಿತಪ್ಪಿಸುವ ಹೇಳಿಕೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search