• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಕ್ಕಳನ್ನು ದಾರಿ ತಪ್ಪಿಸಲು ಅಖಿಲೇಶ್ ಯಾದವರಿಗಿಂತ ಬೇರೆ ಉದಾಹರಣೆ ಬೇಕಿಲ್ಲ!

TNN Correspondent Posted On March 23, 2018


  • Share On Facebook
  • Tweet It

ಲಖನೌ: ಒಬ್ಬ ನಾಯಕನಾದವನು ಹೇಗಿರಬೇಕು. ತಾನು ಸರಿದಾರಿಯಲ್ಲಿ ನಡೆದು, ಸಮಾಜವನ್ನೂ ಸರಿದಾರಿಯಲ್ಲಿ ನಡೆಯುವ ಹಾಗೆ ಮಾಡಬೇಕು. ಮಾದರಿಯಾಗಿ ಜೀವನ ಸಾಗಿಸಬೇಕು. ಎಲ್ಲರೂ ಅವನಿಂದ ಬೊಗಸೆಯಷ್ಟಾದರೂ ಸ್ಫೂರ್ತಿ ಪಡೆಯುವಂತಿರಬೇಕು.

ಇದೇ ಕಾರಣಕ್ಕಾಗಿ ತಾವೂ ಸರಿಯಾಗಿರುವ, ಸಮಾಜವನ್ನೂ ಸರಿಯಾಗಿ ಮುನ್ನಡೆಸುವ ರೀತಿಯಲ್ಲಿ ಉತ್ತರ ಪ್ರದೇಶಲ್ಲಿ ಯೋಗಿ ಆದಿತ್ಯನಾಥರು ರೌಡಿಗಳನ್ನು ಮಟ್ಟಹಾಕುವ ಜತೆಗೆ, ಮುಂದಿನ ಸಮಾಜ ಉತ್ತಮ ನಾಗರಿಕರನ್ನು ಕಾಣುವ ದೃಷ್ಟಿಯಿಂದ ರಾಜ್ಯದಲ್ಲಿ ನಡೆಯುವ ಎಲ್ಲ ಪರೀಕ್ಷೆಗಳನ್ನು ಸುಭದ್ರವಾಗಿ, ನಕಲು ಮಾಡದಂತೆ ನೋಡಿಕೊಳ್ಳುತ್ತಿದ್ದಾರೆ. ಸಿಸಿಟಿವಿ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತಾಗಿದೆ.

ಆದರೆ ಯೋಗಿ ಆದಿತ್ಯನಾಥರಂತಹ ನಾಯಕರಿರುವ ಈ ರಾಜ್ಯದಲ್ಲಿ ಅಖಿಲೇಶ್ ಯಾದವ್ ಅವರಂತಹವರೂ ಇದ್ದಾರಲ್ಲ ಎಂಬ ಬೇಸರ ಕಾಡುವಂತಾಗಿದೆ. ಹೌದು, ಸುಖಾಸುಮ್ಮನೆ ಹೇಳುತ್ತಿಲ್ಲ, ರಾಜ್ಯದಲ್ಲಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸರ್ಕಾರ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಮಾತನಾಡಿರುವ ಅಖಿಲೇಶ್ ಯಾದವ್, “ವಿದ್ಯಾರ್ಥಿಗಳು ಸಣ್ಣ ಪುಟ್ಟ ಅಂಶಗಳನ್ನು ನಕಲು ಮಾಡಿದರೆ, ಅದು ನಕಲು ಎನಿಸುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಬಹುತೇಕ ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯಲ್ಲಿ ಸ್ವಲ್ಪವಾದರೂ ನಕಲು ಮಾಡುತ್ತಾರೆ. ಎಲ್ಲೋ ಸುಮಾರು ಶೇ.10ರಷ್ಟು ವಿದ್ಯಾರ್ಥಿಗಳು ಚೀಟಿ ಮಾಡದಿರಬಹುದು. ಆದರೆ ಉಳಿದವರ ಬಗ್ಗೆ ಏನು ಹೇಳುತ್ತೀರಿ? ಆದರೆ ಅದನ್ನು ನಕಲು ಎಂದು ಪರಿಗಣಸಲಾಗಲ್ಲ ಎಂದಿದ್ದಾರೆ.

ಅಲ್ಲ, ಯಾವುದೋ 10 ಜನರಿರುವ ಗುಂಪಿನಲ್ಲಿ 8 ಜನ ಮದ್ಯ ಸೇವನೆ ಮಾಡುತ್ತಾರೆ ಎಂದು, ಉಳಿದವರೂ ಮಾಡಲಿ ಎನ್ನುವಂತೆ ಅಖಿಲೇಶ್ ಯಾದವ್ ಹೇಳಿದ್ದಾರೆ. ವಿದ್ಯಾರ್ಥಿಗಳು ನಕಲು ಮಾಡದೆ ಉತ್ತೀರ್ಣರಾಗಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಯೋಗಿ ಆದಿತ್ಯನಾಥರು ಶಕ್ತಿ ತುಂಬುತ್ತಿದ್ದರೆ, ಮಾಜಿ ಸಿಎಂ ಅಖಿಲೇಶ್ ಯಾದವ್ ಮಕ್ಕಳ ದಾರಿತಪ್ಪಿಸುವ ಹೇಳಿಕೆ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 4
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 5
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search