• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕಿಸ್ತಾನ ಗಡಿಯಲ್ಲಿ ವಾಯುನೆಲೆ ಸ್ಥಾಪನೆಗೆ ಕೇಂದ್ರದ ಗ್ರೀನ್ ಸಿಗ್ನಲ್

TNN Correspondent Posted On March 23, 2018


  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಭಾರತೀಯ ಸೈನ್ಯಕ್ಕೆ ಹೊಸ ಚೈತನ್ಯ ತುಂಬುವ ಕಾರ್ಯ ಮಾಡುತ್ತಿದ್ದು, ಇದೀಗ ಪಾಕಿಸ್ತಾನದ ಗಡಿಯಲ್ಲಿ ವಾಯುನೆಲೆ ಸ್ಥಾಪಿಸುವ ಮಹತ್ವದ ತೀರ್ಮಾವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಈ ಮೂಲಕ ಪಾಕಿಸ್ತಾನದ ಗಡಿಯಲ್ಲಿ ಸೈನ್ಯಕ್ಕೆ ಮತ್ತಷ್ಟು ಬಲ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಗುಜರಾತ್​ನ ಪಾಕ್​ ಗಡಿಯಲ್ಲಿ ಭಾರತೀಯ ವಾಯುಪಡೆಯ ವಾಯುನೆಲೆ ಸ್ಥಾಪಿಸಲು ಕ್ಯಾಬಿನೆಟ್​ ಕಮಿಟಿ ಆನ್​ ಸೆಕ್ಯುರಿಟಿ (ಸಿಸಿಎಸ್​) ಒಪ್ಪಿಗೆ ಸೂಚಿಸಿದೆ.

ಪ್ರಸ್ತುತ 1000 ಮೀಟರ್​ ರನ್​ ವೇ ಇರುವ ವಿಮಾನ ನಿಲ್ದಾಣವನ್ನು ಹೆಲಿಕ್ಯಾಪ್ಟರ್​ ಇಳಿಸಲು ಮತ್ತು ವಿವಿಐಪಿಗಳ ಓಡಾಡಕ್ಕೆ ಮಾತ್ರ ಬಳಸಲಾಗುತ್ತಿತ್ತು. ಆದ್ದರಿಂದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ ಈ ವಿಮಾನ ನಿಲ್ದಾಣವನ್ನು ವಾಯುನೆಲೆಯಾಗಿ ಅಭಿವೃದ್ಧಿಪಡಿಸುವ ಪ್ರಸ್ತಾವನೆ ಸಲ್ಲಿಸಿದ್ದರು ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ಧಾರೆ.

ಗುಜರಾತ್​ನ ಬನಸ್ಕಾಂತಾ ಜಿಲ್ಲೆಯ ದೀಸಾದಲ್ಲಿರುವ ಚಿಕ್ಕ ವಿಮಾನ ನಿಲ್ದಾಣವನ್ನು ಸುಮಾರು 1000 ಕೋಟಿ ರೂ. ವೆಚ್ಚದಲ್ಲಿ ವಾಯುನೆಲೆಯಾಗಿ ಮಾರ್ಪಡಿಸಲು ಒಪ್ಪಿಗೆ ಸೂಚಿಸಲಾಗಿದೆ. ಬರ್ಮೀರ್​ ಮತ್ತು ಭುಜ್​ ವಾಯು ನೆಲೆಗಳಗಳ ನಡುವೆ ಇರುವ ದೀಸಾ ವಿಮಾನ ನಿಲ್ದಾಣ ಗಡಿ ರಕ್ಷಣೆಯ ದೃಷ್ಟಿಯಿಂದ ಪ್ರಮುಖ ಸ್ಥಾನ ಹೊಂದಿದೆ. ಭಾರತೀಯ ವಾಯುಪಡೆ ಹಲವು ವರ್ಷದಿಂದ ದೀಸಾ ವಾಯುನೆಲೆಗಾಗಿ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ನಿವೃತ್ತ ಏರ್​ ಮಾರ್ಷಲ್​ ವಿನೋದ್ ಪಟ್ನಿ ಸ್ವಾಗತಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search