• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನ ಗಡಿಯಲ್ಲಿ ವಾಯುನೆಲೆ ಸ್ಥಾಪನೆಗೆ ಕೇಂದ್ರದ ಗ್ರೀನ್ ಸಿಗ್ನಲ್

TNN Correspondent Posted On March 23, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಭಾರತೀಯ ಸೈನ್ಯಕ್ಕೆ ಹೊಸ ಚೈತನ್ಯ ತುಂಬುವ ಕಾರ್ಯ ಮಾಡುತ್ತಿದ್ದು, ಇದೀಗ ಪಾಕಿಸ್ತಾನದ ಗಡಿಯಲ್ಲಿ ವಾಯುನೆಲೆ ಸ್ಥಾಪಿಸುವ ಮಹತ್ವದ ತೀರ್ಮಾವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಈ ಮೂಲಕ ಪಾಕಿಸ್ತಾನದ ಗಡಿಯಲ್ಲಿ ಸೈನ್ಯಕ್ಕೆ ಮತ್ತಷ್ಟು ಬಲ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಗುಜರಾತ್​ನ ಪಾಕ್​ ಗಡಿಯಲ್ಲಿ ಭಾರತೀಯ ವಾಯುಪಡೆಯ ವಾಯುನೆಲೆ ಸ್ಥಾಪಿಸಲು ಕ್ಯಾಬಿನೆಟ್​ ಕಮಿಟಿ ಆನ್​ ಸೆಕ್ಯುರಿಟಿ (ಸಿಸಿಎಸ್​) ಒಪ್ಪಿಗೆ ಸೂಚಿಸಿದೆ.

ಪ್ರಸ್ತುತ 1000 ಮೀಟರ್​ ರನ್​ ವೇ ಇರುವ ವಿಮಾನ ನಿಲ್ದಾಣವನ್ನು ಹೆಲಿಕ್ಯಾಪ್ಟರ್​ ಇಳಿಸಲು ಮತ್ತು ವಿವಿಐಪಿಗಳ ಓಡಾಡಕ್ಕೆ ಮಾತ್ರ ಬಳಸಲಾಗುತ್ತಿತ್ತು. ಆದ್ದರಿಂದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ ಈ ವಿಮಾನ ನಿಲ್ದಾಣವನ್ನು ವಾಯುನೆಲೆಯಾಗಿ ಅಭಿವೃದ್ಧಿಪಡಿಸುವ ಪ್ರಸ್ತಾವನೆ ಸಲ್ಲಿಸಿದ್ದರು ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ಧಾರೆ.

ಗುಜರಾತ್​ನ ಬನಸ್ಕಾಂತಾ ಜಿಲ್ಲೆಯ ದೀಸಾದಲ್ಲಿರುವ ಚಿಕ್ಕ ವಿಮಾನ ನಿಲ್ದಾಣವನ್ನು ಸುಮಾರು 1000 ಕೋಟಿ ರೂ. ವೆಚ್ಚದಲ್ಲಿ ವಾಯುನೆಲೆಯಾಗಿ ಮಾರ್ಪಡಿಸಲು ಒಪ್ಪಿಗೆ ಸೂಚಿಸಲಾಗಿದೆ. ಬರ್ಮೀರ್​ ಮತ್ತು ಭುಜ್​ ವಾಯು ನೆಲೆಗಳಗಳ ನಡುವೆ ಇರುವ ದೀಸಾ ವಿಮಾನ ನಿಲ್ದಾಣ ಗಡಿ ರಕ್ಷಣೆಯ ದೃಷ್ಟಿಯಿಂದ ಪ್ರಮುಖ ಸ್ಥಾನ ಹೊಂದಿದೆ. ಭಾರತೀಯ ವಾಯುಪಡೆ ಹಲವು ವರ್ಷದಿಂದ ದೀಸಾ ವಾಯುನೆಲೆಗಾಗಿ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ನಿವೃತ್ತ ಏರ್​ ಮಾರ್ಷಲ್​ ವಿನೋದ್ ಪಟ್ನಿ ಸ್ವಾಗತಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search