• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನ ಗಡಿಯಲ್ಲಿ ವಾಯುನೆಲೆ ಸ್ಥಾಪನೆಗೆ ಕೇಂದ್ರದ ಗ್ರೀನ್ ಸಿಗ್ನಲ್

TNN Correspondent Posted On March 23, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಭಾರತೀಯ ಸೈನ್ಯಕ್ಕೆ ಹೊಸ ಚೈತನ್ಯ ತುಂಬುವ ಕಾರ್ಯ ಮಾಡುತ್ತಿದ್ದು, ಇದೀಗ ಪಾಕಿಸ್ತಾನದ ಗಡಿಯಲ್ಲಿ ವಾಯುನೆಲೆ ಸ್ಥಾಪಿಸುವ ಮಹತ್ವದ ತೀರ್ಮಾವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಈ ಮೂಲಕ ಪಾಕಿಸ್ತಾನದ ಗಡಿಯಲ್ಲಿ ಸೈನ್ಯಕ್ಕೆ ಮತ್ತಷ್ಟು ಬಲ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಗುಜರಾತ್​ನ ಪಾಕ್​ ಗಡಿಯಲ್ಲಿ ಭಾರತೀಯ ವಾಯುಪಡೆಯ ವಾಯುನೆಲೆ ಸ್ಥಾಪಿಸಲು ಕ್ಯಾಬಿನೆಟ್​ ಕಮಿಟಿ ಆನ್​ ಸೆಕ್ಯುರಿಟಿ (ಸಿಸಿಎಸ್​) ಒಪ್ಪಿಗೆ ಸೂಚಿಸಿದೆ.

ಪ್ರಸ್ತುತ 1000 ಮೀಟರ್​ ರನ್​ ವೇ ಇರುವ ವಿಮಾನ ನಿಲ್ದಾಣವನ್ನು ಹೆಲಿಕ್ಯಾಪ್ಟರ್​ ಇಳಿಸಲು ಮತ್ತು ವಿವಿಐಪಿಗಳ ಓಡಾಡಕ್ಕೆ ಮಾತ್ರ ಬಳಸಲಾಗುತ್ತಿತ್ತು. ಆದ್ದರಿಂದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ ಈ ವಿಮಾನ ನಿಲ್ದಾಣವನ್ನು ವಾಯುನೆಲೆಯಾಗಿ ಅಭಿವೃದ್ಧಿಪಡಿಸುವ ಪ್ರಸ್ತಾವನೆ ಸಲ್ಲಿಸಿದ್ದರು ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ಧಾರೆ.

ಗುಜರಾತ್​ನ ಬನಸ್ಕಾಂತಾ ಜಿಲ್ಲೆಯ ದೀಸಾದಲ್ಲಿರುವ ಚಿಕ್ಕ ವಿಮಾನ ನಿಲ್ದಾಣವನ್ನು ಸುಮಾರು 1000 ಕೋಟಿ ರೂ. ವೆಚ್ಚದಲ್ಲಿ ವಾಯುನೆಲೆಯಾಗಿ ಮಾರ್ಪಡಿಸಲು ಒಪ್ಪಿಗೆ ಸೂಚಿಸಲಾಗಿದೆ. ಬರ್ಮೀರ್​ ಮತ್ತು ಭುಜ್​ ವಾಯು ನೆಲೆಗಳಗಳ ನಡುವೆ ಇರುವ ದೀಸಾ ವಿಮಾನ ನಿಲ್ದಾಣ ಗಡಿ ರಕ್ಷಣೆಯ ದೃಷ್ಟಿಯಿಂದ ಪ್ರಮುಖ ಸ್ಥಾನ ಹೊಂದಿದೆ. ಭಾರತೀಯ ವಾಯುಪಡೆ ಹಲವು ವರ್ಷದಿಂದ ದೀಸಾ ವಾಯುನೆಲೆಗಾಗಿ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ನಿವೃತ್ತ ಏರ್​ ಮಾರ್ಷಲ್​ ವಿನೋದ್ ಪಟ್ನಿ ಸ್ವಾಗತಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search