• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿನ ಹಾಲಿ 30 ಶಾಸಕರು ಚುನಾವಣೆಯಲ್ಲಿ ಸೋಲುತ್ತಾರೆ ಎಂಬ ಭೀತಿ ಕಾಂಗ್ರೆಸ್ಸಿಗೆ ಹೇಗೆ ಕಾಡುತ್ತಿದೆ ಗೊತ್ತಾ?

TNN Correspondent Posted On March 24, 2018
0


0
Shares
  • Share On Facebook
  • Tweet It

ಬೆಂಗಳೂರು: ಕರ್ನಾಟಕದಲ್ಲಿ ಶತಾಯ-ಗತಾಯ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ರಾಹುಲ್ ಗಾಂಧಿಯವರಿಗೆ ಆರಂಭದಲ್ಲೇ ವಿಘ್ನಗಳು ಎದುರಾಗಿವೆ. ರಾಹುಲ್ ಗಾಂಧಿಯವರೇನೋ ಚುನಾವಣೆ ಹಿನ್ನೆಲೆಯಲ್ಲಿ ಹಿಂದುತ್ವದ ವೇಷ ತೊಟ್ಟು ಮಠ ಮಾನ್ಯಗಳಿಗೆ ತೆರಳುತ್ತಿದ್ದಾರೆ. ಇದರ ಭಾಗವಾಗಿ ಶನಿವಾರ ಸಹ ಅವರು ಚಾಮರಾಜನಗರ, ಮಂಡ್ಯದಲ್ಲಿ ಪ್ರವಾಸ ಕೈಗೊಂಡು ಪ್ರಚಾರ ಮಾಡಲಿದ್ದಾರೆ. ಆದರೆ ಇದರ ಬೆನ್ನಲ್ಲೇ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆಯಾಗುವ ಎಲ್ಲ ಲಕ್ಷಣಗಳು ಗೋಚರಿಸಿವೆ.

ಹಾಗಂತ ಯಾವುದೇ ಟಿವಿ ಚಾನೆಲ್ಲಿನ ಅಥವಾ ಪತ್ರಿಕೆ, ಆನ್ ಲೈನ್ ಸಮೀಕ್ಷೆಯ ವರದಿಗಳು ಹೀಗೆ ಹೇಳುತ್ತಿಲ್ಲ. ಸ್ವತಃ ಕಾಂಗ್ರೆಸ್ ಪಕ್ಷವೇ, ಒಂದಲ್ಲ ಎರಡು ಆಂತರಿಕ ಸಮೀಕ್ಷೆಯನ್ನು ಕೈಗೊಂಡಿದ್ದು, ಅದರ ಫಲಿತಾಂಶ ಮಾತ್ರ ಕಾಂಗ್ರೆಸ್ಸಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಹೌದು, ಕಾಂಗ್ರೆಸ್ ರಾಜ್ಯಾದ್ಯಂತ ಚುನಾವಣಾ ಪೂರ್ವವಾಗಿ ಎರಡು ಆಂತರಿಕ ಸಮೀಕ್ಷೆ ನಡೆಸಿದ್ದು, ಇದರಲ್ಲಿ ಬರೋಬ್ಬರಿ 30 ಹಾಲಿ ಶಾಸಕರು ಈ ಬಾರಿಯ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ತಿಳಿದುಬಂದಿದೆ. ಇದರಿಂದ ಧೃತಿಗೆಟ್ಟಿರುವ ಕಾಂಗ್ರೆಸ್ ನಾಯಕರು ಈಗ ಪರಿಹಾರ ಹುಡುಕುವಲ್ಲಿ ಮಗ್ನರಾಗಿದ್ದಾರೆ.

30 ಹಾಲಿ ಶಾಸಕರು ಗೆಲ್ಲುವ ಲಕ್ಷಣಗಳು ತುಂಬ ಕಡಿಮೆ ಇರುವುದರಿಂದ ಇವರಿಗೆ ಟಿಕೆಟ್ ಕೊಡುವುದಾ? ಬೇಡವಾ? ಕೊಟ್ಟ ಬಳಿಕ ಸೋತರೆ ಏನು ಮಾಡುವುದು? ಬೇರೆಯವರಿಗೆ ಕೊಟ್ಟರೆ ಪಕ್ಷದಲ್ಲಿ ಭಿನ್ನಮತ ಭುಗಿಲೇಳುವುದಾ? ಎಂಬ ಚಿಂತೆ ನಾಯಕರನ್ನು ಕಾಡುತ್ತಿದೆ. ಅದಕ್ಕಾಗಿಯೇ ಮಾರ್ಚ್ 28 ಮತ್ತು 29ರಂದು ಸಭೆ ಕರೆದಿದ್ದು, ಇವರ ಭವಿಷ್ಯ ಸಹ ನಿರ್ಧಾರವಾಗಲಿದೆ ಎಂದು ತಿಳಿದುಬಂದಿದೆ.

ಆದರೆ ಕಾಂಗ್ರೆಸ್ಸಿನದ್ದೇ ಆಂತರಿಕ ಸಮೀಕ್ಷೆ ಪ್ರಕಾರ ಈಗಿರುವ 30 ಶಾಸಕರು ಚುನಾವಣೆಯಲ್ಲಿ ಸೋಲುತ್ತಾರೆ ಎಂದು ತಿಳಿದುಬಂದಿರುವುದು ರಾಜ್ಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಎಂತಹ ಅಲೆ ಇರಬಹುದು, ಯೋಚಿಸಿ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search