• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿನ ಹಾಲಿ 30 ಶಾಸಕರು ಚುನಾವಣೆಯಲ್ಲಿ ಸೋಲುತ್ತಾರೆ ಎಂಬ ಭೀತಿ ಕಾಂಗ್ರೆಸ್ಸಿಗೆ ಹೇಗೆ ಕಾಡುತ್ತಿದೆ ಗೊತ್ತಾ?

TNN Correspondent Posted On March 24, 2018
0


0
Shares
  • Share On Facebook
  • Tweet It

ಬೆಂಗಳೂರು: ಕರ್ನಾಟಕದಲ್ಲಿ ಶತಾಯ-ಗತಾಯ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ರಾಹುಲ್ ಗಾಂಧಿಯವರಿಗೆ ಆರಂಭದಲ್ಲೇ ವಿಘ್ನಗಳು ಎದುರಾಗಿವೆ. ರಾಹುಲ್ ಗಾಂಧಿಯವರೇನೋ ಚುನಾವಣೆ ಹಿನ್ನೆಲೆಯಲ್ಲಿ ಹಿಂದುತ್ವದ ವೇಷ ತೊಟ್ಟು ಮಠ ಮಾನ್ಯಗಳಿಗೆ ತೆರಳುತ್ತಿದ್ದಾರೆ. ಇದರ ಭಾಗವಾಗಿ ಶನಿವಾರ ಸಹ ಅವರು ಚಾಮರಾಜನಗರ, ಮಂಡ್ಯದಲ್ಲಿ ಪ್ರವಾಸ ಕೈಗೊಂಡು ಪ್ರಚಾರ ಮಾಡಲಿದ್ದಾರೆ. ಆದರೆ ಇದರ ಬೆನ್ನಲ್ಲೇ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆಯಾಗುವ ಎಲ್ಲ ಲಕ್ಷಣಗಳು ಗೋಚರಿಸಿವೆ.

ಹಾಗಂತ ಯಾವುದೇ ಟಿವಿ ಚಾನೆಲ್ಲಿನ ಅಥವಾ ಪತ್ರಿಕೆ, ಆನ್ ಲೈನ್ ಸಮೀಕ್ಷೆಯ ವರದಿಗಳು ಹೀಗೆ ಹೇಳುತ್ತಿಲ್ಲ. ಸ್ವತಃ ಕಾಂಗ್ರೆಸ್ ಪಕ್ಷವೇ, ಒಂದಲ್ಲ ಎರಡು ಆಂತರಿಕ ಸಮೀಕ್ಷೆಯನ್ನು ಕೈಗೊಂಡಿದ್ದು, ಅದರ ಫಲಿತಾಂಶ ಮಾತ್ರ ಕಾಂಗ್ರೆಸ್ಸಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಹೌದು, ಕಾಂಗ್ರೆಸ್ ರಾಜ್ಯಾದ್ಯಂತ ಚುನಾವಣಾ ಪೂರ್ವವಾಗಿ ಎರಡು ಆಂತರಿಕ ಸಮೀಕ್ಷೆ ನಡೆಸಿದ್ದು, ಇದರಲ್ಲಿ ಬರೋಬ್ಬರಿ 30 ಹಾಲಿ ಶಾಸಕರು ಈ ಬಾರಿಯ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ತಿಳಿದುಬಂದಿದೆ. ಇದರಿಂದ ಧೃತಿಗೆಟ್ಟಿರುವ ಕಾಂಗ್ರೆಸ್ ನಾಯಕರು ಈಗ ಪರಿಹಾರ ಹುಡುಕುವಲ್ಲಿ ಮಗ್ನರಾಗಿದ್ದಾರೆ.

30 ಹಾಲಿ ಶಾಸಕರು ಗೆಲ್ಲುವ ಲಕ್ಷಣಗಳು ತುಂಬ ಕಡಿಮೆ ಇರುವುದರಿಂದ ಇವರಿಗೆ ಟಿಕೆಟ್ ಕೊಡುವುದಾ? ಬೇಡವಾ? ಕೊಟ್ಟ ಬಳಿಕ ಸೋತರೆ ಏನು ಮಾಡುವುದು? ಬೇರೆಯವರಿಗೆ ಕೊಟ್ಟರೆ ಪಕ್ಷದಲ್ಲಿ ಭಿನ್ನಮತ ಭುಗಿಲೇಳುವುದಾ? ಎಂಬ ಚಿಂತೆ ನಾಯಕರನ್ನು ಕಾಡುತ್ತಿದೆ. ಅದಕ್ಕಾಗಿಯೇ ಮಾರ್ಚ್ 28 ಮತ್ತು 29ರಂದು ಸಭೆ ಕರೆದಿದ್ದು, ಇವರ ಭವಿಷ್ಯ ಸಹ ನಿರ್ಧಾರವಾಗಲಿದೆ ಎಂದು ತಿಳಿದುಬಂದಿದೆ.

ಆದರೆ ಕಾಂಗ್ರೆಸ್ಸಿನದ್ದೇ ಆಂತರಿಕ ಸಮೀಕ್ಷೆ ಪ್ರಕಾರ ಈಗಿರುವ 30 ಶಾಸಕರು ಚುನಾವಣೆಯಲ್ಲಿ ಸೋಲುತ್ತಾರೆ ಎಂದು ತಿಳಿದುಬಂದಿರುವುದು ರಾಜ್ಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಎಂತಹ ಅಲೆ ಇರಬಹುದು, ಯೋಚಿಸಿ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search