• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿನ ಹಾಲಿ 30 ಶಾಸಕರು ಚುನಾವಣೆಯಲ್ಲಿ ಸೋಲುತ್ತಾರೆ ಎಂಬ ಭೀತಿ ಕಾಂಗ್ರೆಸ್ಸಿಗೆ ಹೇಗೆ ಕಾಡುತ್ತಿದೆ ಗೊತ್ತಾ?

TNN Correspondent Posted On March 24, 2018
0


0
Shares
  • Share On Facebook
  • Tweet It

ಬೆಂಗಳೂರು: ಕರ್ನಾಟಕದಲ್ಲಿ ಶತಾಯ-ಗತಾಯ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ರಾಹುಲ್ ಗಾಂಧಿಯವರಿಗೆ ಆರಂಭದಲ್ಲೇ ವಿಘ್ನಗಳು ಎದುರಾಗಿವೆ. ರಾಹುಲ್ ಗಾಂಧಿಯವರೇನೋ ಚುನಾವಣೆ ಹಿನ್ನೆಲೆಯಲ್ಲಿ ಹಿಂದುತ್ವದ ವೇಷ ತೊಟ್ಟು ಮಠ ಮಾನ್ಯಗಳಿಗೆ ತೆರಳುತ್ತಿದ್ದಾರೆ. ಇದರ ಭಾಗವಾಗಿ ಶನಿವಾರ ಸಹ ಅವರು ಚಾಮರಾಜನಗರ, ಮಂಡ್ಯದಲ್ಲಿ ಪ್ರವಾಸ ಕೈಗೊಂಡು ಪ್ರಚಾರ ಮಾಡಲಿದ್ದಾರೆ. ಆದರೆ ಇದರ ಬೆನ್ನಲ್ಲೇ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆಯಾಗುವ ಎಲ್ಲ ಲಕ್ಷಣಗಳು ಗೋಚರಿಸಿವೆ.

ಹಾಗಂತ ಯಾವುದೇ ಟಿವಿ ಚಾನೆಲ್ಲಿನ ಅಥವಾ ಪತ್ರಿಕೆ, ಆನ್ ಲೈನ್ ಸಮೀಕ್ಷೆಯ ವರದಿಗಳು ಹೀಗೆ ಹೇಳುತ್ತಿಲ್ಲ. ಸ್ವತಃ ಕಾಂಗ್ರೆಸ್ ಪಕ್ಷವೇ, ಒಂದಲ್ಲ ಎರಡು ಆಂತರಿಕ ಸಮೀಕ್ಷೆಯನ್ನು ಕೈಗೊಂಡಿದ್ದು, ಅದರ ಫಲಿತಾಂಶ ಮಾತ್ರ ಕಾಂಗ್ರೆಸ್ಸಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಹೌದು, ಕಾಂಗ್ರೆಸ್ ರಾಜ್ಯಾದ್ಯಂತ ಚುನಾವಣಾ ಪೂರ್ವವಾಗಿ ಎರಡು ಆಂತರಿಕ ಸಮೀಕ್ಷೆ ನಡೆಸಿದ್ದು, ಇದರಲ್ಲಿ ಬರೋಬ್ಬರಿ 30 ಹಾಲಿ ಶಾಸಕರು ಈ ಬಾರಿಯ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ತಿಳಿದುಬಂದಿದೆ. ಇದರಿಂದ ಧೃತಿಗೆಟ್ಟಿರುವ ಕಾಂಗ್ರೆಸ್ ನಾಯಕರು ಈಗ ಪರಿಹಾರ ಹುಡುಕುವಲ್ಲಿ ಮಗ್ನರಾಗಿದ್ದಾರೆ.

30 ಹಾಲಿ ಶಾಸಕರು ಗೆಲ್ಲುವ ಲಕ್ಷಣಗಳು ತುಂಬ ಕಡಿಮೆ ಇರುವುದರಿಂದ ಇವರಿಗೆ ಟಿಕೆಟ್ ಕೊಡುವುದಾ? ಬೇಡವಾ? ಕೊಟ್ಟ ಬಳಿಕ ಸೋತರೆ ಏನು ಮಾಡುವುದು? ಬೇರೆಯವರಿಗೆ ಕೊಟ್ಟರೆ ಪಕ್ಷದಲ್ಲಿ ಭಿನ್ನಮತ ಭುಗಿಲೇಳುವುದಾ? ಎಂಬ ಚಿಂತೆ ನಾಯಕರನ್ನು ಕಾಡುತ್ತಿದೆ. ಅದಕ್ಕಾಗಿಯೇ ಮಾರ್ಚ್ 28 ಮತ್ತು 29ರಂದು ಸಭೆ ಕರೆದಿದ್ದು, ಇವರ ಭವಿಷ್ಯ ಸಹ ನಿರ್ಧಾರವಾಗಲಿದೆ ಎಂದು ತಿಳಿದುಬಂದಿದೆ.

ಆದರೆ ಕಾಂಗ್ರೆಸ್ಸಿನದ್ದೇ ಆಂತರಿಕ ಸಮೀಕ್ಷೆ ಪ್ರಕಾರ ಈಗಿರುವ 30 ಶಾಸಕರು ಚುನಾವಣೆಯಲ್ಲಿ ಸೋಲುತ್ತಾರೆ ಎಂದು ತಿಳಿದುಬಂದಿರುವುದು ರಾಜ್ಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಎಂತಹ ಅಲೆ ಇರಬಹುದು, ಯೋಚಿಸಿ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search