• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿಪುರಾ ವಿಧಾನಸಭೆಯಲ್ಲಿ ಪ್ರಥಮ ಬಾರಿಗೆ ಮೊಳಗಿತು ರಾಷ್ಟ್ರಗೀತೆ

TNN Correspondent Posted On March 24, 2018
0


0
Shares
  • Share On Facebook
  • Tweet It

ಅಗರ್ತಲಾ: ಸುಮಾರು 25 ವರ್ಷ ಕಮ್ಯುನಿಸ್ಟರ್ ಆಡಳಿತದಿಂದ ಬೇಸತ್ತಿದ್ದ ತ್ರಿಪುರಾ ಜನರು ಬಿಜೆಪಿ ಭರ್ಜರಿ ಗೆಲುವು ದೊರಕಿಸಿಕೊಟ್ಟಿದ್ದಾರೆ. ಬಿಜೆಪಿಯ ವಿಜಯದ ಪರಿಣಾಮ ತ್ರಿಪುರಾದಲ್ಲಿ ಹೊಸ ಅಲೆ ಸೃಷ್ಟಿಯಾಗಿದ್ದು, ದೇಶದ ಐಕ್ಯತೆ, ಭಾವೈಕ್ಯತೆ, ಸಂಸ್ಕೃತಿಯ ಪ್ರತಿಬಿಂಬವಾಗಿರುವ ರಾಷ್ಟ್ರಗೀತೆಯನ್ನು ತ್ರಿಪುರಾದ ವಿಧಾನಸಭೆಯಲ್ಲಿ ಮೊಳಗಿಸುವ ಮೂಲಕ ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಿದೆ.

ಹೊಸದಾಗಿ ಆಯ್ಕೆಯಾಗಿರುವ ಹೊಸ ಸರ್ಕಾರದ ಪ್ರಥಮ ಅಧಿವೇಶನ ಶುಕ್ರವಾರ ಆರಂಭವಾಗಿದ್ದು, ಸಭಾಪತಿ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಗೆ ಮುಂಚೆ ರಾಷ್ಟ್ರಗೀತೆ ಮೊಳಗಿಸಲಾಗಿದೆ. ರಾಷ್ಟ್ರಗೀತೆಗೆ ಸದನದ ಎಲ್ಲ ಸಿಬ್ಬಂದಿ, ಶಾಸಕರು, ಅಧಿಕಾರಿಗಳು, ಪತ್ರಕರ್ತರು ಎದ್ದು ನಿಂತು ಗೌರವ ನೀಡಿದರು.

ಸಭಾಪತಿ ಚುನಾವಣೆ ನಡೆಸಲು ರತನ್ ಚಕ್ರವರ್ತಿ ಆಗಮಿಸುತ್ತಿದ್ದಂತೆ ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಧಾನಸಭೆ ಕಾರ್ಯದರ್ಶಿ ಬಂಬದೇಬ್ ಮುಜುಂದಾರ್ ‘ವಿಧಾನಸಭೆಯಲ್ಲಿ ನಿತ್ಯ ರಾಷ್ಟ್ರಗೀತೆಯನ್ನು ಮೊಳಗಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರಗೀತೆ ಹಾಡುವುದರಲ್ಲೂ ರಾಜಕೀಯ ಬೆರೆಸಿರುವ ಕಮ್ಯುನಿಸ್ಟ್ ಪಾರ್ಟಿ ಮುಖಂಡ ಬಾದಲ್ ಚೌದರಿ ‘ರಾಷ್ಟ್ರಗೀತೆ ಕುರಿತು ವಿಧಾನಸಭೆ ಅಧಿಕಾರಿಗಳು ಪ್ರತಿಪಕ್ಷಗಳ ಅಭಿಪ್ರಾಯ ಪಡೆದಿಲ್ಲ. ಇಂತಹ ಮಹತ್ವದ ತೀರ್ಮಾನ ಕೈಗೊಳ್ಳುವ ಮುನ್ನ ಪ್ರತಿಪಕ್ಷಗಳನ್ನು ಗಮನಕ್ಕೆ ತೆಗೆದುಕೊಳ್ಳಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search