• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯಾಸ್ಮಿನ್ ಮೊಹಮ್ಮದ್ ಗೆ ಶಿಕ್ಷೆ ಪ್ರಕಟ, ಐಸಿಸ್ ಗೂ, ಭಾರತಕ್ಕೂ ನಂಟು ಅಷ್ಟೊಂದು ಬಲವಾಗಿದೆಯಾ?

TNN Correspondent Posted On March 25, 2018
0


0
Shares
  • Share On Facebook
  • Tweet It

ತಿರುವನಂತಪುರ: ಐಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪದಲ್ಲಿ ಯಾಸ್ಮಿನ್ ಮೊಹಮ್ಮದ್ ಜಹೀರ್ ಎಂಬಾಕೆಗೆ ಕೇರಳದ ಕೊಚ್ಚಿ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಭಾರತ ಹಾಗೂ ಐಸಿಸ್ಸಿಗೂ ನಂಟಿದೆಯಾ ಎಂಬ ಅನುಮಾನ ದಟ್ಟವಾಗಿವೆ.

ಅಷ್ಟೇ ಅಲ್ಲ, ಯಾಸ್ಮಿನ್ ಮೊಹಮ್ಮದ್ ಜಹೀರ್ ಐಸಿಸ್ ಜತೆ ನಂಟು ಹೊಂದಿರುವ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಮೊದಲ ವ್ಯಕ್ತಿ ಎಂಬ ಕುಖ್ಯಾತಿಗೂ ಭಾಜನವಾಗಿರುವುದು ಜಾಲದ ಹಿಂದಿನ ಪದರುಗಳ ಕುರಿತು ಭೀತಿ ಹುಟ್ಟಿಸಿದೆ.

ಬಿಹಾರದ ಈಕೆ ಕಾಸರಗೋಡಿನಿಂದ 15 ಜನರನ್ನು ಐಸಿಸ್ ಸಂಘಟನೆಗೆ ನೇಮಕ ಮಾಡಿದ ಆರೋಪದಲ್ಲಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. 2016ರಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಆಫ್ಘಾನಿಸ್ತಾನಕ್ಕೆ ತೆರಳುವಾಗ ತಡೆಹಿಡಿದು ಬಂಧಿಸಲಾಗಿತ್ತು. ವಿಚಾರಣೆ ನಡೆಸಿದ ಬಳಿಕ 15 ಜನರನ್ನು ನೇಮಿಸಿದ್ದಾಳೆ ಎಂಬುದು ತಿಳಿದುಬಂದಿತ್ತು.

ಯಾಸ್ಮಿನ್, ರಷಿ ಅಬ್ದುಲ್ಲಾ ಎಂಬಾತನ ಎರಡನೇ ಪತ್ನಿಯಾಗಿದ್ದು, ಈಕೆಯ ಗಂಡ ಸಹ ಐಸಿಸ್ ಜತೆ ನಂಟು ಹೊಂದಿರುವ ಆರೋಪ ಹೊಂದಿದ್ದಾನೆ. ಕೇರಳದ 20 ಯುವಕರನ್ನು ಐಸಿಸ್ ಸಂಘಟನೆಗೆ ಸೇರಿಸಿ ನಾಪತ್ತೆಯಾಗಿರುವ ಈತನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಪ್ರಸ್ತುತ ಯಾಸ್ಮೀನ್ ಗೆ ಭಾರತೀಯ ದಂಡ ಸಂಹಿತೆ 120, 125 ಬಿ ಹಾಗೂ ಕಾನೂನು ವಿರೋಧಿ ಚಟುವಟಿಕೆಗಳ ತಡೆ ಕಾಯಿದೆ 38, 39 ಹಾಗೂ 40ನೇ ಕಲಂ ಅನ್ವಯ ಏಳು ವರ್ಷ ಜೈಲು ಹಾಗೂ ಇಪ್ಪತ್ತೈದು ಸಾವಿರ ರೂಪಾಯಿ ದಂಡ ವಿಧಿಸಿದೆ.

ಒಟ್ಟಿನಲ್ಲಿ ಉಗ್ರರ ಜತೆ ನಂಟು ಹೊಂದಿರುವ ಪ್ರಕರಣದಲ್ಲಿ ಯಾಸ್ಮಿನ್ ಗೆ ಜೈಲು ಶಿಕ್ಷೆ ವಿಧಿಸಿರುವುದು ಹಾಗೂ ಈಕೆಯ ಗಂಡನೂ ಐಸಿಸ್ ಜತೆ ನಂಟು ಹೊಂದಿರುವ ಕುರಿತು ಪ್ರಕರಣ ಎದುರಿಸುತ್ತಿದ್ದು, ಕೇರಳದಲ್ಲಿ ನಿಧಾನವಾಗಿ ಐಸಿಸ್ ಬೇರುಗಳು ಒಳಹೋಗುತ್ತಿವೆಯಾ ಎಂಬ ಅನುಮಾನ ಹುಟ್ಟುಹಾಕಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search