• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯಾಸ್ಮಿನ್ ಮೊಹಮ್ಮದ್ ಗೆ ಶಿಕ್ಷೆ ಪ್ರಕಟ, ಐಸಿಸ್ ಗೂ, ಭಾರತಕ್ಕೂ ನಂಟು ಅಷ್ಟೊಂದು ಬಲವಾಗಿದೆಯಾ?

TNN Correspondent Posted On March 25, 2018
0


0
Shares
  • Share On Facebook
  • Tweet It

ತಿರುವನಂತಪುರ: ಐಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪದಲ್ಲಿ ಯಾಸ್ಮಿನ್ ಮೊಹಮ್ಮದ್ ಜಹೀರ್ ಎಂಬಾಕೆಗೆ ಕೇರಳದ ಕೊಚ್ಚಿ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಭಾರತ ಹಾಗೂ ಐಸಿಸ್ಸಿಗೂ ನಂಟಿದೆಯಾ ಎಂಬ ಅನುಮಾನ ದಟ್ಟವಾಗಿವೆ.

ಅಷ್ಟೇ ಅಲ್ಲ, ಯಾಸ್ಮಿನ್ ಮೊಹಮ್ಮದ್ ಜಹೀರ್ ಐಸಿಸ್ ಜತೆ ನಂಟು ಹೊಂದಿರುವ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಮೊದಲ ವ್ಯಕ್ತಿ ಎಂಬ ಕುಖ್ಯಾತಿಗೂ ಭಾಜನವಾಗಿರುವುದು ಜಾಲದ ಹಿಂದಿನ ಪದರುಗಳ ಕುರಿತು ಭೀತಿ ಹುಟ್ಟಿಸಿದೆ.

ಬಿಹಾರದ ಈಕೆ ಕಾಸರಗೋಡಿನಿಂದ 15 ಜನರನ್ನು ಐಸಿಸ್ ಸಂಘಟನೆಗೆ ನೇಮಕ ಮಾಡಿದ ಆರೋಪದಲ್ಲಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. 2016ರಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಆಫ್ಘಾನಿಸ್ತಾನಕ್ಕೆ ತೆರಳುವಾಗ ತಡೆಹಿಡಿದು ಬಂಧಿಸಲಾಗಿತ್ತು. ವಿಚಾರಣೆ ನಡೆಸಿದ ಬಳಿಕ 15 ಜನರನ್ನು ನೇಮಿಸಿದ್ದಾಳೆ ಎಂಬುದು ತಿಳಿದುಬಂದಿತ್ತು.

ಯಾಸ್ಮಿನ್, ರಷಿ ಅಬ್ದುಲ್ಲಾ ಎಂಬಾತನ ಎರಡನೇ ಪತ್ನಿಯಾಗಿದ್ದು, ಈಕೆಯ ಗಂಡ ಸಹ ಐಸಿಸ್ ಜತೆ ನಂಟು ಹೊಂದಿರುವ ಆರೋಪ ಹೊಂದಿದ್ದಾನೆ. ಕೇರಳದ 20 ಯುವಕರನ್ನು ಐಸಿಸ್ ಸಂಘಟನೆಗೆ ಸೇರಿಸಿ ನಾಪತ್ತೆಯಾಗಿರುವ ಈತನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಪ್ರಸ್ತುತ ಯಾಸ್ಮೀನ್ ಗೆ ಭಾರತೀಯ ದಂಡ ಸಂಹಿತೆ 120, 125 ಬಿ ಹಾಗೂ ಕಾನೂನು ವಿರೋಧಿ ಚಟುವಟಿಕೆಗಳ ತಡೆ ಕಾಯಿದೆ 38, 39 ಹಾಗೂ 40ನೇ ಕಲಂ ಅನ್ವಯ ಏಳು ವರ್ಷ ಜೈಲು ಹಾಗೂ ಇಪ್ಪತ್ತೈದು ಸಾವಿರ ರೂಪಾಯಿ ದಂಡ ವಿಧಿಸಿದೆ.

ಒಟ್ಟಿನಲ್ಲಿ ಉಗ್ರರ ಜತೆ ನಂಟು ಹೊಂದಿರುವ ಪ್ರಕರಣದಲ್ಲಿ ಯಾಸ್ಮಿನ್ ಗೆ ಜೈಲು ಶಿಕ್ಷೆ ವಿಧಿಸಿರುವುದು ಹಾಗೂ ಈಕೆಯ ಗಂಡನೂ ಐಸಿಸ್ ಜತೆ ನಂಟು ಹೊಂದಿರುವ ಕುರಿತು ಪ್ರಕರಣ ಎದುರಿಸುತ್ತಿದ್ದು, ಕೇರಳದಲ್ಲಿ ನಿಧಾನವಾಗಿ ಐಸಿಸ್ ಬೇರುಗಳು ಒಳಹೋಗುತ್ತಿವೆಯಾ ಎಂಬ ಅನುಮಾನ ಹುಟ್ಟುಹಾಕಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search