• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತ್ತೆ ಬಯಲಾಯ್ತು ಹುರ್ರಿಯತ್ ಸಂಘಟನೆ ಬಂಡವಾಳ, ಹಿಜ್ಬುಲ್ ಸೇರಿದನೇ ಸಂಘಟನೆ ಮುಖ್ಯಸ್ಥನ ಮಗ?

TNN Correspondent Posted On March 25, 2018
0


0
Shares
  • Share On Facebook
  • Tweet It

ಶ್ರೀನಗರ: ಆಜಾದ್ ಕಾಶ್ಮೀರ್, ಗೋ ಇಂಡಿಯಾ ಗೋಬ್ಯಾಕ್… ಹೀಗಂತ ಹುರ್ರಿಯತ್ ಸಂಘಟನೆ ಮಾಜಿ ಮುಖ್ಯಸ್ಥ ಸೈಯದ್ ಶಾ ಗೀಲಾನಿ ಹೇಳಿಕೆ ನೀಡಿದಾಗಲೇ, ಗೋಡೆ ಮೇಲೆ ಬರೆದಾಗಲೇ, ಹುರ್ರಿಯತ್ ಸಂಘಟನೆಯ ನಿಷ್ಠೆ, ಬದ್ಧತೆ, ಪ್ರಾಮುಖ್ಯತೆ ಯಾರಿಗೆ ಎಂಬುದು ಗೊತ್ತಾಗಿತ್ತು.

ಈಗ ಈ ಹುರ್ರಿಯತ್ ಸಂಘಟನೆಯ ಮತ್ತೊಂದು ಮುಖವಾಡ ಬಯಲಾಗಿದ್ದು, ಹುರ್ರಿಯತ್ ಮುಖ್ಯಸ್ಥ ಅಶ್ರಾಫ್ ಸೆಹ್ರಾಯಿ ಎಂಬಾತನ ಮಗ ಜುನೈದ್ ಅಶ್ರಫ್ ಖಾನ್ (28) ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಸೇರಿದ್ದಾನೆ ಎಂದು ತಿಳಿದುಬಂದಿದೆ.

ಹೌದು, ಇದೇ ಜುನೈದ್ ಅಶ್ರಫ್ ಖಾನ್ ಎ.ಕೆ.47 ಗನ್ ಹಿಡಿದಿರುವ ಚಿತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಶ್ರಪ್ ಖಾನ್ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯನ್ನೇ ಸೇರಿದ್ದಾನೆ ಎಂದು ಹೇಳಲಾಗುತ್ತಿದೆ.

ಶುಕ್ರವಾರ ಅಶ್ರಫ್ ಖಾನ್ ಕಾಣೆಯಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಶನಿವಾರವಷ್ಟೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದರ ಬೆನ್ನಲ್ಲೇ ಅಶ್ರಫ್ ಹಿಜ್ಬುಲ್ ಮುಜಾಹಿದ್ದೀನ್ ಸೇರಿದ್ದಾನೆ ಎಂದು ತಿಳಿದುಬಂದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕಾಶ್ಮೀರ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪದವಿ ಪಡೆದಿರುವ ಈತ ಶ್ರೀನಗರದ ಭಗತ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ ಈತನ ತಂದೆ ಅಶ್ರಾಫ್ ಸೆಹ್ರಾಯಿ ಹುರ್ರಿಯತ್ ಸಂಘಟನೆಯ ಮುಖ್ಯಸ್ಥನಾಗಿ ಅಧಿಕಾರ ವಹಿಸಿಕೊಂಡಿದ್ದ. ಆದಾಗ್ಯೂ, ಹುರ್ರಿಯತ್ ಮಾಜಿ ಮುಖ್ಯಸ್ಥ ಸೈಯದ್ ಶಾ ಗೀಲಾನಿ ಭಯೋತ್ಪಾದನೆಗೆ ಪ್ರಚೋದನೆ ನೀಡಲು ಪಾಕಿಸ್ತಾನದಿಂದ ಹಣ ಪಡೆದ ಆರೋಪದಲ್ಲಿ ಎನ್ಐಎ ತನಿಖೆ ಎದುರಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search