• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತ್ತೆ ಬಯಲಾಯ್ತು ಹುರ್ರಿಯತ್ ಸಂಘಟನೆ ಬಂಡವಾಳ, ಹಿಜ್ಬುಲ್ ಸೇರಿದನೇ ಸಂಘಟನೆ ಮುಖ್ಯಸ್ಥನ ಮಗ?

TNN Correspondent Posted On March 25, 2018
0


0
Shares
  • Share On Facebook
  • Tweet It

ಶ್ರೀನಗರ: ಆಜಾದ್ ಕಾಶ್ಮೀರ್, ಗೋ ಇಂಡಿಯಾ ಗೋಬ್ಯಾಕ್… ಹೀಗಂತ ಹುರ್ರಿಯತ್ ಸಂಘಟನೆ ಮಾಜಿ ಮುಖ್ಯಸ್ಥ ಸೈಯದ್ ಶಾ ಗೀಲಾನಿ ಹೇಳಿಕೆ ನೀಡಿದಾಗಲೇ, ಗೋಡೆ ಮೇಲೆ ಬರೆದಾಗಲೇ, ಹುರ್ರಿಯತ್ ಸಂಘಟನೆಯ ನಿಷ್ಠೆ, ಬದ್ಧತೆ, ಪ್ರಾಮುಖ್ಯತೆ ಯಾರಿಗೆ ಎಂಬುದು ಗೊತ್ತಾಗಿತ್ತು.

ಈಗ ಈ ಹುರ್ರಿಯತ್ ಸಂಘಟನೆಯ ಮತ್ತೊಂದು ಮುಖವಾಡ ಬಯಲಾಗಿದ್ದು, ಹುರ್ರಿಯತ್ ಮುಖ್ಯಸ್ಥ ಅಶ್ರಾಫ್ ಸೆಹ್ರಾಯಿ ಎಂಬಾತನ ಮಗ ಜುನೈದ್ ಅಶ್ರಫ್ ಖಾನ್ (28) ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಸೇರಿದ್ದಾನೆ ಎಂದು ತಿಳಿದುಬಂದಿದೆ.

ಹೌದು, ಇದೇ ಜುನೈದ್ ಅಶ್ರಫ್ ಖಾನ್ ಎ.ಕೆ.47 ಗನ್ ಹಿಡಿದಿರುವ ಚಿತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಶ್ರಪ್ ಖಾನ್ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯನ್ನೇ ಸೇರಿದ್ದಾನೆ ಎಂದು ಹೇಳಲಾಗುತ್ತಿದೆ.

ಶುಕ್ರವಾರ ಅಶ್ರಫ್ ಖಾನ್ ಕಾಣೆಯಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಶನಿವಾರವಷ್ಟೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದರ ಬೆನ್ನಲ್ಲೇ ಅಶ್ರಫ್ ಹಿಜ್ಬುಲ್ ಮುಜಾಹಿದ್ದೀನ್ ಸೇರಿದ್ದಾನೆ ಎಂದು ತಿಳಿದುಬಂದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕಾಶ್ಮೀರ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪದವಿ ಪಡೆದಿರುವ ಈತ ಶ್ರೀನಗರದ ಭಗತ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ ಈತನ ತಂದೆ ಅಶ್ರಾಫ್ ಸೆಹ್ರಾಯಿ ಹುರ್ರಿಯತ್ ಸಂಘಟನೆಯ ಮುಖ್ಯಸ್ಥನಾಗಿ ಅಧಿಕಾರ ವಹಿಸಿಕೊಂಡಿದ್ದ. ಆದಾಗ್ಯೂ, ಹುರ್ರಿಯತ್ ಮಾಜಿ ಮುಖ್ಯಸ್ಥ ಸೈಯದ್ ಶಾ ಗೀಲಾನಿ ಭಯೋತ್ಪಾದನೆಗೆ ಪ್ರಚೋದನೆ ನೀಡಲು ಪಾಕಿಸ್ತಾನದಿಂದ ಹಣ ಪಡೆದ ಆರೋಪದಲ್ಲಿ ಎನ್ಐಎ ತನಿಖೆ ಎದುರಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search