• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮತ್ತೆ ಬಯಲಾಯ್ತು ಹುರ್ರಿಯತ್ ಸಂಘಟನೆ ಬಂಡವಾಳ, ಹಿಜ್ಬುಲ್ ಸೇರಿದನೇ ಸಂಘಟನೆ ಮುಖ್ಯಸ್ಥನ ಮಗ?

TNN Correspondent Posted On March 25, 2018


  • Share On Facebook
  • Tweet It

ಶ್ರೀನಗರ: ಆಜಾದ್ ಕಾಶ್ಮೀರ್, ಗೋ ಇಂಡಿಯಾ ಗೋಬ್ಯಾಕ್… ಹೀಗಂತ ಹುರ್ರಿಯತ್ ಸಂಘಟನೆ ಮಾಜಿ ಮುಖ್ಯಸ್ಥ ಸೈಯದ್ ಶಾ ಗೀಲಾನಿ ಹೇಳಿಕೆ ನೀಡಿದಾಗಲೇ, ಗೋಡೆ ಮೇಲೆ ಬರೆದಾಗಲೇ, ಹುರ್ರಿಯತ್ ಸಂಘಟನೆಯ ನಿಷ್ಠೆ, ಬದ್ಧತೆ, ಪ್ರಾಮುಖ್ಯತೆ ಯಾರಿಗೆ ಎಂಬುದು ಗೊತ್ತಾಗಿತ್ತು.

ಈಗ ಈ ಹುರ್ರಿಯತ್ ಸಂಘಟನೆಯ ಮತ್ತೊಂದು ಮುಖವಾಡ ಬಯಲಾಗಿದ್ದು, ಹುರ್ರಿಯತ್ ಮುಖ್ಯಸ್ಥ ಅಶ್ರಾಫ್ ಸೆಹ್ರಾಯಿ ಎಂಬಾತನ ಮಗ ಜುನೈದ್ ಅಶ್ರಫ್ ಖಾನ್ (28) ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಸೇರಿದ್ದಾನೆ ಎಂದು ತಿಳಿದುಬಂದಿದೆ.

ಹೌದು, ಇದೇ ಜುನೈದ್ ಅಶ್ರಫ್ ಖಾನ್ ಎ.ಕೆ.47 ಗನ್ ಹಿಡಿದಿರುವ ಚಿತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಶ್ರಪ್ ಖಾನ್ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯನ್ನೇ ಸೇರಿದ್ದಾನೆ ಎಂದು ಹೇಳಲಾಗುತ್ತಿದೆ.

ಶುಕ್ರವಾರ ಅಶ್ರಫ್ ಖಾನ್ ಕಾಣೆಯಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಶನಿವಾರವಷ್ಟೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದರ ಬೆನ್ನಲ್ಲೇ ಅಶ್ರಫ್ ಹಿಜ್ಬುಲ್ ಮುಜಾಹಿದ್ದೀನ್ ಸೇರಿದ್ದಾನೆ ಎಂದು ತಿಳಿದುಬಂದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕಾಶ್ಮೀರ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪದವಿ ಪಡೆದಿರುವ ಈತ ಶ್ರೀನಗರದ ಭಗತ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ ಈತನ ತಂದೆ ಅಶ್ರಾಫ್ ಸೆಹ್ರಾಯಿ ಹುರ್ರಿಯತ್ ಸಂಘಟನೆಯ ಮುಖ್ಯಸ್ಥನಾಗಿ ಅಧಿಕಾರ ವಹಿಸಿಕೊಂಡಿದ್ದ. ಆದಾಗ್ಯೂ, ಹುರ್ರಿಯತ್ ಮಾಜಿ ಮುಖ್ಯಸ್ಥ ಸೈಯದ್ ಶಾ ಗೀಲಾನಿ ಭಯೋತ್ಪಾದನೆಗೆ ಪ್ರಚೋದನೆ ನೀಡಲು ಪಾಕಿಸ್ತಾನದಿಂದ ಹಣ ಪಡೆದ ಆರೋಪದಲ್ಲಿ ಎನ್ಐಎ ತನಿಖೆ ಎದುರಿಸುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search