• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿವಳಿ ತಲಾಖ್ ನಿಷೇಧಿಸಿದೆ, ನಾನ್ಯಾಕೆ ಮತ್ತೆ ನನ್ನ ಗಂಡನನ್ನು ಮದುವೆಯಾಗಬೇಕು? ಕೇಳಿ ಮುಸ್ಲಿಂ ಮಹಿಳೆಯ ಕಣ್ಣೀರ ಕತೆಯಾ…

TNN Correspondent Posted On March 25, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ದೇಶದಲ್ಲಿ ದಿನೇದಿನೆ ಮುಸ್ಲಿಂ ಮಹಿಳೆಯರ ಮೇಲೆ ಅವರ ಪತಿಯರು ನಡೆಸುತ್ತಿರುವ ದೌರ್ಜನ್ಯದಿಂದ ಮುಕ್ತಿಗೊಳಿಸಲು ಕೇಂದ್ರ ಸರ್ಕಾರವೇ ತ್ರಿವಳಿ ತಲಾಖ್ ವಿರುದ್ಧ ಕಾನೂನು ರಚಿಸಲು ಮುಂದಾಗಿದ್ದರೂ, ತ್ರಿವಳಿ ತಲಾಖ್ ಹಾಗೂ ಅದರ ನಂತರದ ಸಮಸ್ಯೆಯಿಂದ ಮಾತ್ರ ಹೊರಬರಲು ಸಾಧ್ಯವಾಗುತ್ತಿಲ್ಲ.

ಇದಕ್ಕೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ನಿದರ್ಶನವೊಂದು ಸಿಕ್ಕಿದ್ದು, ಮಹಿಳೆಯ ಗೋಳನ್ನು ಮುಸ್ಲಿಂ ಗುರುಗಳು ಸಹ ಕೇಳದಂತಾಗಿರುವುದು, ನಮ್ಮ ಸಮಾಜ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದರ ಕುರಿತು ಯೋಚಿಸುವ ಹಾಗೆ ಮಾಡಿದೆ.

ನಸೀಮಾ ಆ ದುರದೃಷ್ಟವಂತೆಯಾಗಿದ್ದು, ಗಂಡನ ಕಿರುಕುಳದಿಂದ ಬೇಸತ್ತು ಹೋಗಿದ್ದಾರೆ. ಈ ಹಿಂದೆ ತಾನು ಮನೆಯಲ್ಲಿ ಇಲ್ಲದಿರುವಾಗ ಗಂಡ ರಬೀವುಲ್ ಮೂರು ಬಾರಿ ತಲಾಖ್ ತಲಾಖ್ ತಲಾಖ್ ಎಂದು ತ್ರಿವಳಿ ತಲಾಖ್ ನೀಡಿದ್ದಾನೆ. ಇದು ನಸೀಮಾಗೆ ಅಕ್ಕಪಕ್ಕದ ಮನೆಯವರಿಂದ ತಿಳಿದುಬಂದಿದೆ.

ತ್ರಿವಳಿ ತಲಾಖ್ ಶೋಷಣೆಗೆ ಬಲಿಯಾದ ಆಕೆ ತನ್ನ ಇಬ್ಬರ ಮಕ್ಕಳೊಂದಿಗೆ ತವರಿಗೆ ತೆರಳಿದ್ದಾಳೆ. ಆದರೆ ಈಗ ಮನಸ್ಸು ಬದಲಿಸಿರುವ ರಬೀವುಲ್ ನನಗೆ ನನ್ನ ಹೆಂಡತಿ ಬೇಕು ಎಂದು ಎನ್ನುತ್ತಿದ್ದಾನೆ.

ಆದರೆ, ಆಕೆ ಮತ್ತೆ ನನ್ನ ಮನೆಗೆ, ಮನಕ್ಕೆ ಬರಬೇಕಾದರೆ ಮತ್ತೆ ನನ್ನ ಜತೆ ಮದುವೆಯಾಗಬೇಕು ಎಂದು ಹಠ ಹಿಡಿದಿದ್ದಾನೆ. ಮುಸ್ಲಿಂ ಮೌಲ್ವಿಗಳ ಮೂಲಕ ಷರತ್ತು ವಿಧಿಸಿದ್ದಾನೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ, ನಸೀಮಾ, “ಸುಪ್ರೀಂ ಕೋರ್ಟೇ ತ್ರಿವಳಿ ತಲಾಖ್ ನಿಷೇಧಿಸಿದೆ. ಅಷ್ಟಕ್ಕೂ ನನ್ನ ಗಂಡ ತಲಾಖ್ ತಲಾಖ್ ತಲಾಖ್ ಎಂದಿದ್ದೇ ನನಗೆ ಕೇಳಿಲ್ಲ. ನಮ್ಮ ವಿಚ್ಛೇದನ ಅಸಾಂವಿಧಾನಿಕವಾಗಿದೆ. ನಾನ್ಯಾಕೆ ನನ್ನ ಗಂಡನನ್ನು ಮರು ಮದುವೆಯಾಗಲಿ” ಎಂದು ಪ್ರಶ್ನಿಸಿದ್ದಾಳೆ.

ನಸೀಮಾ ಹೇಳುವ ಅಂಶಗಳಲ್ಲೂ ಸತ್ಯಾಂಶವಿದೆ. ಆದರೆ ಆಕೆಯ ಮಾತನ್ನು ಧರ್ಮ ಗುರುಗಳು, ಪತಿ ಕೇಳಬೇಕಲ್ಲ. ಯಾವ ಮಹಿಳಾ ಪರ ಹೋರಾಟಗಾರರು, ಬುದ್ಧಿಜೀವಿಗಳು, ಪ್ರಗತಿಪರರು, ಜೀವಪರರು ಈಗ ಎಲ್ಲಿ ಅವಿತು ಕುಳಿತಿದ್ದಾರೋ? ಬುದ್ಧಿಯನ್ನು ಯಾರ ಕೈಗೆ ಕೊಟ್ಟಿದ್ದಾರೋ? ಖಂಡಿಸುವ ತಾಕತ್ತನ್ನು ಯಾರಿಗೆ ಅಡ ಇಟ್ಟಿದ್ದಾರೋ?

0
Shares
  • Share On Facebook
  • Tweet It




Trending Now
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
  • Popular Posts

    • 1
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 2
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 3
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 4
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 5
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

  • Privacy Policy
  • Contact
© Tulunadu Infomedia.

Press enter/return to begin your search