• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯುಪಿ ಪೊಲೀಸ್ ಭರ್ಜರಿ ಕಾರ್ಯಾಚರಣೆ, ಪಾತಕಿಯ ಎನ್ಕೌಂಟರ್, ಎಕೆ 47 ಗನ್, 1 ಲಕ್ಷ ರೂ. ವಶಕ್ಕೆ

TNN Correspondent Posted On March 25, 2018


  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್  ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕ್ಷಣದಿಂದ ಗುಂಡಾರಾಜ್ಯವಾಗಿದ್ದ ಉತ್ತರ ಪ್ರದೇಶವನ್ನು ಶಾಂತಿ ಸುವ್ಯವಸ್ಥೆಯ ನಾಡನ್ನಾಗಿ ಬದಲಾಯಿಸಲು ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಅಪರಾಧಿಗಳನ್ನು ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅದರ ಮುಂದುವರಿದ ಭಾಗವಾಗಿ ಶನಿವಾರ ಭಾರಿ ಕಾರ್ಯಾಚರಣೆ ನಡೆಸಿದ್ದು, ಪಾತಕಿಯೊಬ್ಬನನ್ನು ಎನ್ ಕೌಂಟರ್ ಮಾಡಿ, ಬಿಸಾಕಿದ್ದು, ಆತನಿಂದ ಎಕೆ 47 ಗನ್ ವಶಕ್ಕೆ ಪಡೆದಿದ್ದಾರೆ.

ಉತ್ತರ ಪ್ರದೇಶದ ನೋಯ್ಡಾ ಬಳಿ ಎನ್ ಕೌಂಟ್ ನಡೆದಿದ್ದು, ಪಾತಕಿ ಶ್ರವಣ್ ಚೌದರಿ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಶ್ರವಣ್ ಚೌದರಿಯ ಒಂದು ಮೋಟಾರ್ ಸೈಕಲ್, ಒಂದು ಲಕ್ಷ ಹಣ ಮತ್ತು ಎಕೆ 47 ಗನ್  ಸೇರಿ ನಾನಾ ಆಯುದ್ಧಗಳನ್ನು ವಶಕ್ಕೆ ಪಡೆಯಲಾಗಿದೆ.

ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ಇದುವರೆಗೆ 1100 ಎನ್ ಕೌಂಟರ್ ಗಳು ನಡೆದಿದ್ದು, 34 ಕ್ರಿಮಿನಲ್ ಗಳು ಎನ್ ಕೌಂಟರ್ ಗೆ ಬಲಿಯಾಗಿದ್ದಾರೆ. 265 ಪಾತಕಿಗಳು ಗಾಯಾಳುಗಳಾಗಿದ್ದಾರೆ. 2774 ರೌಡಿ ಶೀಟರ್ ಗಳು ಬಂಧಿಸಲಾಗಿದೆ. ಯೋದಿ ಆದಿತ್ಯನಾಥ್ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದು, ಇದೀಗ ಇಡೀ ಉತ್ತರ ಪ್ರದೇಶದಲ್ಲಿ ಬದಲಾವಣೆಯ ಪರ್ವ ಬೀಸುತ್ತಿದೆ. ಅಲ್ಲದೇ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಅಪರಾಧ ಲೋಕದಿಂದ ಹೊರ ಬಂದಿರುವ ಕ್ರಿಮಿನಲ್ ಗಳು ಇದೀಗ ಸ್ವಾವಲಂಭಿ ಜೀವನ ಸಾಗಿಸಲು ಯತ್ನಿಸುತ್ತಿದ್ದು, ತರಕಾರಿ, ಹಣ್ಣು ಮಾರಾಟ ಸೇರಿ ನಾನಾ ಉದ್ಯೋಗದಲ್ಲಿ ತೊಡಗಿಸಿದ್ದು ಗಮನಾರ್ಹ.

  • Share On Facebook
  • Tweet It


- Advertisement -


Trending Now
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
Leave A Reply

  • Recent Posts

    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
  • Popular Posts

    • 1
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 2
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 3
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 4
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 5
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search