• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರ ಪ್ರದೇಶದಲ್ಲಿ ರೌಡಿಗಳು ಮಾತ್ರವಲ್ಲ, ಉಗ್ರರ ನಿಗ್ರಹಕ್ಕೂ ಮುಂದಾಗಿದ್ದಾರೆ ಯೋಗಿ ಆದಿತ್ಯನಾಥ! ಈ ಸುದ್ದಿ ಓದಿ.

TNN Correspondent Posted On March 26, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಕಳೆದ ವರ್ಷ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಆ ರಾಜ್ಯದ ಚಹರೆಯೇ ಬದಲಾಗುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನಂತು ಸಂಪೂರ್ಣವಾಗಿ ತಹಬಂದಿಗೆ ತಂದಿದ್ದಾರೆ. ಪೊಲೀಸರಿಗೆ ಸ್ವಾತಂತ್ರ್ಯ ನೀಡಿದ್ದು, ಇದುವರೆಗೆ ಸಾವಿರಾರು ಎನ್ ಕೌಂಟರ್ ಮಾಡಲಾಗಿದೆ. 40ಕ್ಕೂ ಅಧಿಕ ರೌಡಿಗಳನ್ನು ಹತ್ಯೆ ಮಾಡಲಾಗಿದೆ.

ಇದರಿಂದಾಗಿ ರೌಡಿಗಳು ನಮಗೆ ಬೇಲ್ ನೀಡುವುದೇ ಬೇಡ, ನಾವು ಜೈಲಿನಲ್ಲಿಯೇ ಇರುತ್ತೇವೆ ಎನ್ನುವಷ್ಟರಮಟ್ಟರಿಗೆ ಯೋಗಿ ಆದಿತ್ಯನಾಥರು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ.

ಹಾಗಂತ, ರಾಜ್ಯ ಸರ್ಕಾರ ಬರೀ ರೌಡಿಗಳನ್ನು ಮಾತ್ರ ಮಟ್ಟಹಾಕುತ್ತಿಲ್ಲ, ಬದಲಿಗೆ ಉಗ್ರರ ನಿಗ್ರಹಕ್ಕೂ ಮುಂದಾಗಿದೆ. ಇದಕ್ಕೆ ಸಾಕ್ಷಿಯಾಗಿ ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯ ಜತೆ ಸಂಪರ್ಕ ಹೊಂದಿದ ಆರೋಪದಲ್ಲಿ ಭಾನುವಾರ ಬರೋಬ್ಬರಿ ಹತ್ತು ಜನರನ್ನು ಭಯೋತ್ಪಾದಕರ ನಿಗ್ರಹ ದಳ ಬಂಧಿಸಿದೆ.

ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯಿಂದ ಹಣ ಪಡೆದು, ಉಗ್ರ ಚಟುವಟಿಕೆಯಲ್ಲಿ ತೊಡಗಿದ ಆರೋಪದಲ್ಲಿ ಲಖನೌ, ಪ್ರತಾಪ್ ಗಡ, ಮಧ್ಯಪ್ರದೇಶದ ರಿವಾನ್ ಸೇರಿ ಹಲವೆಡೆ ಹತ್ತು ಶಂಕಿತರನ್ನು ಬಂಧಿಸಲಾಗಿದೆ. ಇವರೆಲ್ಲರೂ ಪಾಕಿಸ್ತಾನಿ ಉಗ್ರ ಸಂಘಟನೆಯಿಂದ ಹಣ ಪಡೆದಿದ್ದಾರೆ ಎಂಬ ಶಂಕೆಯಿದೆ ಎಂದು ಭಯೋತ್ಪಾದಕರ ನಿಗ್ರ ದಳದ ಪೊಲೀಸ್ ಮಹಾ ನಿರ್ದೇಶಕ ಆಸಿಮ್ ಅರುಣ್ ಮಾಹಿತಿ ನೀಡಿದ್ದಾರೆ.

ಬಂಧಿತರನ್ನು ನಸೀಮ್ ಅಹ್ಮದ್, ನಹೀಮ್ ಅರ್ಷಾದ್, ಸಂಜಯ್ ಸರೋಜ್, ನೀರಜ್ ಮಿಶ್ರಾ, ಸುಹಿಲ್ ಮಿಸಿಹ್, ಉಮಾ ಪ್ರತಾಪ್ ಸಿಂಗ್, ಮುಕೇಶ್ ಪ್ರಸಾದ್, ಮುಷರ್ರಫ್ ಅನ್ಸಾರಿ, ಅಂಕುರ್ ರೈ ಹಾಗೂ ದಯಾನಂದ್ ಯಾದವ್ ಎಂದು ಗುರುತಿಸಲಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search