• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರ ಪ್ರದೇಶದಲ್ಲಿ ರೌಡಿಗಳು ಮಾತ್ರವಲ್ಲ, ಉಗ್ರರ ನಿಗ್ರಹಕ್ಕೂ ಮುಂದಾಗಿದ್ದಾರೆ ಯೋಗಿ ಆದಿತ್ಯನಾಥ! ಈ ಸುದ್ದಿ ಓದಿ.

TNN Correspondent Posted On March 26, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಕಳೆದ ವರ್ಷ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಆ ರಾಜ್ಯದ ಚಹರೆಯೇ ಬದಲಾಗುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನಂತು ಸಂಪೂರ್ಣವಾಗಿ ತಹಬಂದಿಗೆ ತಂದಿದ್ದಾರೆ. ಪೊಲೀಸರಿಗೆ ಸ್ವಾತಂತ್ರ್ಯ ನೀಡಿದ್ದು, ಇದುವರೆಗೆ ಸಾವಿರಾರು ಎನ್ ಕೌಂಟರ್ ಮಾಡಲಾಗಿದೆ. 40ಕ್ಕೂ ಅಧಿಕ ರೌಡಿಗಳನ್ನು ಹತ್ಯೆ ಮಾಡಲಾಗಿದೆ.

ಇದರಿಂದಾಗಿ ರೌಡಿಗಳು ನಮಗೆ ಬೇಲ್ ನೀಡುವುದೇ ಬೇಡ, ನಾವು ಜೈಲಿನಲ್ಲಿಯೇ ಇರುತ್ತೇವೆ ಎನ್ನುವಷ್ಟರಮಟ್ಟರಿಗೆ ಯೋಗಿ ಆದಿತ್ಯನಾಥರು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ.

ಹಾಗಂತ, ರಾಜ್ಯ ಸರ್ಕಾರ ಬರೀ ರೌಡಿಗಳನ್ನು ಮಾತ್ರ ಮಟ್ಟಹಾಕುತ್ತಿಲ್ಲ, ಬದಲಿಗೆ ಉಗ್ರರ ನಿಗ್ರಹಕ್ಕೂ ಮುಂದಾಗಿದೆ. ಇದಕ್ಕೆ ಸಾಕ್ಷಿಯಾಗಿ ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯ ಜತೆ ಸಂಪರ್ಕ ಹೊಂದಿದ ಆರೋಪದಲ್ಲಿ ಭಾನುವಾರ ಬರೋಬ್ಬರಿ ಹತ್ತು ಜನರನ್ನು ಭಯೋತ್ಪಾದಕರ ನಿಗ್ರಹ ದಳ ಬಂಧಿಸಿದೆ.

ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯಿಂದ ಹಣ ಪಡೆದು, ಉಗ್ರ ಚಟುವಟಿಕೆಯಲ್ಲಿ ತೊಡಗಿದ ಆರೋಪದಲ್ಲಿ ಲಖನೌ, ಪ್ರತಾಪ್ ಗಡ, ಮಧ್ಯಪ್ರದೇಶದ ರಿವಾನ್ ಸೇರಿ ಹಲವೆಡೆ ಹತ್ತು ಶಂಕಿತರನ್ನು ಬಂಧಿಸಲಾಗಿದೆ. ಇವರೆಲ್ಲರೂ ಪಾಕಿಸ್ತಾನಿ ಉಗ್ರ ಸಂಘಟನೆಯಿಂದ ಹಣ ಪಡೆದಿದ್ದಾರೆ ಎಂಬ ಶಂಕೆಯಿದೆ ಎಂದು ಭಯೋತ್ಪಾದಕರ ನಿಗ್ರ ದಳದ ಪೊಲೀಸ್ ಮಹಾ ನಿರ್ದೇಶಕ ಆಸಿಮ್ ಅರುಣ್ ಮಾಹಿತಿ ನೀಡಿದ್ದಾರೆ.

ಬಂಧಿತರನ್ನು ನಸೀಮ್ ಅಹ್ಮದ್, ನಹೀಮ್ ಅರ್ಷಾದ್, ಸಂಜಯ್ ಸರೋಜ್, ನೀರಜ್ ಮಿಶ್ರಾ, ಸುಹಿಲ್ ಮಿಸಿಹ್, ಉಮಾ ಪ್ರತಾಪ್ ಸಿಂಗ್, ಮುಕೇಶ್ ಪ್ರಸಾದ್, ಮುಷರ್ರಫ್ ಅನ್ಸಾರಿ, ಅಂಕುರ್ ರೈ ಹಾಗೂ ದಯಾನಂದ್ ಯಾದವ್ ಎಂದು ಗುರುತಿಸಲಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search