• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಾಲ್ವರು ಮಹಿಳಾ ಕೆಂಪು ಉಗ್ರರ ಹೊಡೆದುರುಳಿಸಿದ ಒಡಿಸ್ಸಾ ಪೊಲೀಸರು

TNN Correspondent Posted On March 26, 2018


  • Share On Facebook
  • Tweet It

ಕೋರಾಪತ್: ದೇಶದಲ್ಲಿ ನಕ್ಸಲರ ಅಟ್ಟಹಾಸಕ್ಕೆ ಮಿತಿ ಹೇರುವ ಕೇಂದ್ರ ಸರ್ಕಾರದ ದಿಟ್ಟ ನಡೆಗಳಿಂದ ನಿತ್ಯ ಮಾವೋವಾದಿಗಳ ಹುಟ್ಟಡಿಸುವ ಕಾರ್ಯವನ್ನು ಸೈನಿಕರು, ಆಯಾ ರಾಜ್ಯಗಳ ಪೊಲೀಸರು ಮುಂದುವರಿಸಿದ್ದಾರೆ. ಒಡಿಸ್ಸಾದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಭಾನುವಾರ ರಾತ್ರಿ ನಾಲ್ವರು ಮಹಿಳಾ ನಕ್ಸಲರನ್ನು ಹೊಡೆದುರುಳಿಸಿದ್ದು, ಉಳಿದಂತೆ ಇನ್ನಷ್ಟು ಕೆಂಪು ಉಗ್ರರನ್ನು ಸದೆ ಬಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಹರ್ಯಾಣದ ಕೊರಾಪತ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಭಾರಿ ಕಾರ್ಯಚರಣೆ ನಡೆಸಲಾಗಿದೆ. ಆಂಧ್ರಪ್ರದೇಶ ಒಡಿಸ್ಸಾ ಗಡಿಯಲ್ಲಿರುವ ಡಿಕ್ರಿ ಘಾಟ್ ನಲ್ಲಿ ಜಿಲ್ಲೆಯ ನಕ್ಸಲ ನಿಯಂತ್ರಣ ತಂಡದ ನೇತೃತ್ವದೊಂದಿಗೆ ದಾಳಿ ನಡೆಸಿ, ನಕ್ಸಲರನ್ನು ಸದೆ ಬಡೆಯುವ ಕಾರ್ಯಚರಣೆ ನಡೆಸಲಾಗಿದೆ.

ದಾಳಿ ನಡೆಸುವ ಮುನ್ನ ಕೆಲವೇ ಕ್ಷಣಗಳಲ್ಲಿ ಮಾವೋವಾದಿಗಳು ಆ ಸ್ಥಳದಿಂದ ಬೇರೆಡೆ ಪರಾರಿಯಾಗುವ ಲಕ್ಷಗಳಿತ್ತು. ಸೂಕ್ತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿ, ನಾಲ್ವರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಇನ್ನು ಮುಂದುವರಿದಿದೆ ಎಂದು ಕೊರಾಪತ್ ಐಜಿ ಆರ್ ಪಿ ಕೊಚ್ಚೆ ತಿಳಿಸಿದ್ದಾರೆ.

ಕೆಲವು ದಿನಗಳಿಂದ ಡೊಕ್ರಾ ಘಾಟ್ ನಲ್ಲಿ ಮಾವೋವಾದಿ ಚಟುವಟಿಕೆಗಳು ತೀವ್ರ ಚುರುಕುತನ ಪಡೆದುಕೊಂಡಿದ್ದವು. ಎರಡು ದಿನದ ಹಿಂದೆ ಮಲ್ಕನಗಿರಿ ಜಿಲ್ಲೆಯ ತುಲ್ಸಿ ಡೊಂಗರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸರ ಮಧ್ಯೆ ಗುಂಡಿನ ಚಕಮಕಿ ನಡೆದಿತ್ತು.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search