• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಾಲ್ವರು ಮಹಿಳಾ ಕೆಂಪು ಉಗ್ರರ ಹೊಡೆದುರುಳಿಸಿದ ಒಡಿಸ್ಸಾ ಪೊಲೀಸರು

TNN Correspondent Posted On March 26, 2018


  • Share On Facebook
  • Tweet It

ಕೋರಾಪತ್: ದೇಶದಲ್ಲಿ ನಕ್ಸಲರ ಅಟ್ಟಹಾಸಕ್ಕೆ ಮಿತಿ ಹೇರುವ ಕೇಂದ್ರ ಸರ್ಕಾರದ ದಿಟ್ಟ ನಡೆಗಳಿಂದ ನಿತ್ಯ ಮಾವೋವಾದಿಗಳ ಹುಟ್ಟಡಿಸುವ ಕಾರ್ಯವನ್ನು ಸೈನಿಕರು, ಆಯಾ ರಾಜ್ಯಗಳ ಪೊಲೀಸರು ಮುಂದುವರಿಸಿದ್ದಾರೆ. ಒಡಿಸ್ಸಾದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಭಾನುವಾರ ರಾತ್ರಿ ನಾಲ್ವರು ಮಹಿಳಾ ನಕ್ಸಲರನ್ನು ಹೊಡೆದುರುಳಿಸಿದ್ದು, ಉಳಿದಂತೆ ಇನ್ನಷ್ಟು ಕೆಂಪು ಉಗ್ರರನ್ನು ಸದೆ ಬಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಹರ್ಯಾಣದ ಕೊರಾಪತ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಭಾರಿ ಕಾರ್ಯಚರಣೆ ನಡೆಸಲಾಗಿದೆ. ಆಂಧ್ರಪ್ರದೇಶ ಒಡಿಸ್ಸಾ ಗಡಿಯಲ್ಲಿರುವ ಡಿಕ್ರಿ ಘಾಟ್ ನಲ್ಲಿ ಜಿಲ್ಲೆಯ ನಕ್ಸಲ ನಿಯಂತ್ರಣ ತಂಡದ ನೇತೃತ್ವದೊಂದಿಗೆ ದಾಳಿ ನಡೆಸಿ, ನಕ್ಸಲರನ್ನು ಸದೆ ಬಡೆಯುವ ಕಾರ್ಯಚರಣೆ ನಡೆಸಲಾಗಿದೆ.

ದಾಳಿ ನಡೆಸುವ ಮುನ್ನ ಕೆಲವೇ ಕ್ಷಣಗಳಲ್ಲಿ ಮಾವೋವಾದಿಗಳು ಆ ಸ್ಥಳದಿಂದ ಬೇರೆಡೆ ಪರಾರಿಯಾಗುವ ಲಕ್ಷಗಳಿತ್ತು. ಸೂಕ್ತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿ, ನಾಲ್ವರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಇನ್ನು ಮುಂದುವರಿದಿದೆ ಎಂದು ಕೊರಾಪತ್ ಐಜಿ ಆರ್ ಪಿ ಕೊಚ್ಚೆ ತಿಳಿಸಿದ್ದಾರೆ.

ಕೆಲವು ದಿನಗಳಿಂದ ಡೊಕ್ರಾ ಘಾಟ್ ನಲ್ಲಿ ಮಾವೋವಾದಿ ಚಟುವಟಿಕೆಗಳು ತೀವ್ರ ಚುರುಕುತನ ಪಡೆದುಕೊಂಡಿದ್ದವು. ಎರಡು ದಿನದ ಹಿಂದೆ ಮಲ್ಕನಗಿರಿ ಜಿಲ್ಲೆಯ ತುಲ್ಸಿ ಡೊಂಗರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸರ ಮಧ್ಯೆ ಗುಂಡಿನ ಚಕಮಕಿ ನಡೆದಿತ್ತು.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search