• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ ಅಭಿಯಾನಕ್ಕಿಲ್ಲ ಕಿಂಚಿತ್ತೂ ಕಿಮ್ಮತ್ತು, ನಮೋ ಆ್ಯಪ್ ಡೌನ್ ಲೋಡ್ ಸಂಖ್ಯೆ ಏರಿಕೆಯಾಯ್ತು!

TNN Correspondent Posted On March 26, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಜನರು ಎಷ್ಟು ನಂಬಿಕೆ ಇಟ್ಟಿದ್ದಾರೆ, ದೇಶಕ್ಕಾಗಿ ಹಗಲಿರುಳೂ ದುಡಿಯುವ ಹೆಮ್ಮೆಯ ಪ್ರಧಾನಿ ಮೇಲೆ ಅದೆಷ್ಟು ವಿಶ್ವಾಸ ಇಟ್ಟಿದ್ದಾರೆ ಎಂದರೆ ಇತ್ತೀಚೆಗೆ ಪ್ರತಿಪಕ್ಷವೂ ಆಗಲು ಲಾಯಕ್ಕಲ್ಲದ ಕಾಂಗ್ರೆಸ್ ಎಷ್ಟೇ ಆರೋಪ ಮಾಡಲಿ, ಕುತಂತ್ರ ಮಾಡಲಿ, ಭಾರತೀಯರು ಮಾತ್ರ ನಂಬೋದು ನರೇಂದ್ರ ಮೋದಿ ಅವರನ್ನೇ.

ಅಷ್ಟಕ್ಕೂ ಒಬ್ಬ ಜನಪರ ನಾಯಕನನ್ನು, ಹಗಲಿರುಳು ದುಡಿಯುವ ರಾಜಕಾರಣಿಯನ್ನು ಇಡೀ ದೇಶದ ಜನ ಒಪ್ಪುವುದು, ಇವ ನಮ್ಮವ ಎಂದು ಅಪ್ಪಿಕೊಳ್ಳುವುದು ಪ್ರಜಾಪ್ರಭುತ್ವದ ಹೆಮ್ಮೆಯೇ ಸರಿ.

ಈಗ, ಇಂತಹ ಮಾತಿಗೆ ಮತ್ತೊಂದು ಉದಾಹರಣೆ ಸಿಕ್ಕಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸುಳ್ಳು ಅಭಿಯಾನ ಆರಂಭಿಸಿದ್ದ ಕಾಂಗ್ರೆಸ್ಸಿಗೆ ಮುಖಭಂಗವಾಗಿದೆ. ಹೀಗನ್ನುವುದಕ್ಕಿಂತ, ದೇಶದ ಜನರೇ ಮುಖಭಂಗ ಮಾಡಿದ್ದಾರೆ ಎಂದರೆ ತಪ್ಪಾಗಲಾರದು.

ಹೌದು, ಪ್ರಧಾನಿ ನರೇಂದ್ರ ಮೋದಿ ಅವರ “ನಮೋ” ಆ್ಯಪ್ ವಿರುದ್ಧ ಸುಖಾಸುಮ್ಮನೆ ಆರೋಪಿಸಿದ್ದ ರಾಹುಲ್ ಗಾಂಧಿ, ಈ ಆ್ಯಪ್ ನಿಂದ ಅಮೆರಿಕದ ಕಂಪನಿಗಳಿಗೆ ಮಾಹಿತಿ ಸೋರಿಕೆಯಾಗುತ್ತಿದೆ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲ, ಕರ್ನಾಟಕದ ರಾಹುಲ್ ಗಾಂಧಿ ಎಂದೇ ಖ್ಯಾತಿಯಾಗಿರುವ ಮಾಜಿ ನಟಿ, ಸಂಸದೆ ರಮ್ಯಾ ಅವರಂತೂ, ಯಾರೂ ನಮೋ ಆ್ಯಪ್ ಡೌನ್ ಲೋಡ್ ಮಾಡಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಫರ್ಮಾನು ಹೊರಡಿಸಿದ್ದರು.

ಆದರೆ, ಜನರಿಗೆ ಮಾತ್ರ ಈ ಕಾಂಗ್ರೆಸ್ಸಿಗರ ಮೇಲೆ ನಂಬಿಕೆಯೇ ಇಲ್ಲ. ಅದಕ್ಕಾಗಿಯೇ ಕಾಂಗ್ರೆಸ್ ಆರಂಭಿಸಿದ್ದ ಡಿಲೀಟ್ ನಮೋ ಆ್ಯಪ್ ಅಭಿಯಾನ ವಿಫಲವಾಗಿದ್ದು, ಕಾಂಗ್ರೆಸ್ ಅಭಿಯಾನ ಆರಂಭಿಸಿದ ಬಳಿಕ ನಮೋ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳುವವರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ ಎಂದು ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು ಗ್ರಾಫ್ ಮೂಲಕವೇ ಪ್ರತ್ಯುತ್ತರ ನೀಡಿದ್ದು, ಕಾಂಗ್ರೆಸ್ ಮಗುಮ್ಮಾಗಿ ಕುಳಿತಿದೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search