• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರರರಿಗೆ ಅವರ ಭಾಷೆಯಲ್ಲೇ ಉತ್ತರ: ಕೇಂದ್ರ ಸಚಿವ ಜೀತೇಂದ್ರ ಸಿಂಹ

TNN Correspondent Posted On March 27, 2018
0


0
Shares
  • Share On Facebook
  • Tweet It

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದಕರು ಸೇರಿ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರನ್ನು ಯಶಸ್ವಿಯಾಗಿ ಹತ್ತಿಕ್ಕಿದ್ದು, ಇಡೀ ವಿಶ್ವಕ್ಕೆ ತಿಳಿದಿದೆ. ಅಲ್ಲದೇ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರಗಳು ಭಯೋತ್ಪಾದಕರನ್ನು ಹುಟ್ಟಡಗಿಸಿವೆ. ಅದಕ್ಕೆ ಮೋದಿ ಹಿಂದಿರುವ ಶಕ್ತಿಗಳ ನಿರ್ಧಾರಗಳು, ದೂರದೃಷ್ಟಿಯ, ಕಠೋರ ಮತ್ತು ಸ್ಪಷ್ಟ ಸೂಚನೆಗಳೇ ಕಾರಣ ಎಂಬುದಕ್ಕೆ ಪ್ರಧಾನ ಮಂತ್ರಿ ಕಾರ್ಯಾಲಯದ ರಾಜ್ಯ ಸಚಿವ ಜೀತೇಂದ್ರ ಸಿಂಹ ಅವರ ಭಯೋತ್ಪಾದಕರ ಕುರಿತ ಈ ಹೇಳಿಕೆಯೇ ಸಾಕ್ಷಿ.

‘ಭಯೋತ್ಪಾದಕರಿಗೆ ಅವರ ಮಾದರಿಯಲ್ಲೇ ಉತ್ತರ ನೀಡಬೇಕಾಗುತ್ತದೆ. ಉಗ್ರರೊಂದಿಗೆ ಮೃದುವಾಗಿ ವರ್ತಿಸುವಂತಿಲ್ಲ. ಏಟಿಗೆ ಎದುರೇಟು ನೀಡಿದಾಗ ಮಾತ್ರ ಭಯೋತ್ಪಾದಕರನ್ನು ನಿಯಂತ್ರಿಸಲು ಸಾಧ್ಯ’ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಜೀತೇಂದ್ರ ಸಿಂಹ ಹೇಳಿರುವ ಈ ಮಾತುಗಳೇ ಕೇಂದ್ರ ಸರ್ಕಾರ ಭಯೋತ್ಪಾದಕ ವಿರುದ್ಧ ಯಾವ ರೀತಿ ಪ್ರತಿಕ್ರಿಯಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿ ನಿಂತಿದೆ.

ಕಾಶ್ಮೀರದ ಬಹುತೇಕ ಯುವಕರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಬಗ್ಗೆ ವಿಶ್ವಾಸ ಹೊಂದಿದ್ದಾರೆ. ಭಾರತದ ಐಕತ್ಯೆಯ ಮಂತ್ರದೊಂದಿಗೆ ವಿಕಾಸದ ಪತದತ್ತ ದೇಶವನ್ನು ಮುನ್ನಡೆಸಿಕೊಂಡು ಹೋಗಬೇಕು. ಈ ಯೋಚನಾ ಲಹರಿ ದೇಶಕ್ಕೆ ಹೊಂದಿಕೊಂಡಂತಿದೆ. ಅಲ್ಲದೇ ಕಾಶ್ಮೀರದಲ್ಲಿ ಭಯೋತ್ಪಾದಕ ಮೋಹದ ಪಾಶಕ್ಕೆ ಬೀಳುತ್ತಿರುವವರನ್ನು ಮುಖ್ಯಧಾರೆಗೆ ತರುವ ಪ್ರಯತ್ನವು ನಡೆದಿದೆ ಎಂದು ಸಿಂಹ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search