• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಗತಿಕ ಭಯೋತ್ಪಾದನೆ ತೊಲಗಿಸಲು ಕೇಂದ್ರ ಸರ್ಕಾರ ಯಾವ ಪ್ರಮುಖ ನಿರ್ಧಾರ ಕೈಗೊಂಡಿದೆ ಗೊತ್ತಾ?

TNN Correspondent Posted On March 27, 2018
0


0
Shares
  • Share On Facebook
  • Tweet It

ಜೈಪುರ: ಭಾರತದ ದಿಟ್ಟ ಪ್ರತ್ಯುತ್ತರದ ನಡುವೆಯೂ ಇತ್ತೀಚೆಗೆ ಗಡಿಯಲ್ಲಿ ಪಾಕಿಸ್ತಾನ ಹಾಗೂ ಚೀನಾ ಉಪಟಳ ಮಾಡುತ್ತಿರುವ ಬೆನ್ನಲ್ಲೇ ದೇಶದಲ್ಲಿ ಶತ್ರುಗಳ ಉಪದ್ವ್ಯಾಪದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿವೆ. ಆದಾಗ್ಯೂ ಇತ್ತೀಚೆಗಷ್ಟೇ ಚೀನಾ, ನಾವು ಶತ್ರುಗಳನ್ನು ಸದೆಬಡಿಯದೇ ಬಿಡುವುದಿಲ್ಲ ಎಂದು ಹೇಳಿರುವುದು ಸಹ ಭಾರತವನ್ನು ಕೆಣಕುವಂತಿದೆ. ಅತ್ತ ಪಾಕಿಸ್ತಾನಿ ಭಯೋತ್ಪಾದಕರಂತೂ ಸ್ವಲ್ಪ ಸಮಯ, ಜಾಗ ಸಿಕ್ಕರೂ ಭಾರತದೊಳಕ್ಕೆ ನುಸುಳಿಬಿಡುತ್ತಾರೆ.

ಆದರೆ ಈ ವೈರಿಗಳ, ಭಯೋತ್ಪಾದಕರ ಉಪಟಳವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಮ್ಮನಿರಬೇಕಲ್ಲ. ಇವರನ್ನು ಮಟ್ಟಹಾಕಲೆಂದೇ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿದೆ. ಹೌದು, ದೇಶದಲ್ಲೇ ಮೊದಲ ಬಾರಿಗೆ ಜಾಗತಿಕ ಭಯೋತ್ಪಾದನೆ ನಿಗ್ರಹ ಕೇಂದ್ರವೊಂದನ್ನು ತೆರೆಯಲು ಕೇಂದ್ರ ಸರ್ಕಾರ ಮುಂದಾಗಿದೆ.

ಜೈಪುರ ಜಿಲ್ಲೆಯ ಬಾಗ್ರು ಎಂಬಲ್ಲಿ ಕೇಂದ್ರ ತೆರೆಯಲು 50 ಎಕರೆ ಜಾಗವನ್ನು ಗುರುತಿಸಿದ್ದು, ಸುಮಾರು 275 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಇದರಲ್ಲಿ ರಾಜ್ಯ ಸರ್ಕಾರ 110 ಕೋಟಿ ರೂ. ನೀಡಲಿದ್ದು, ಕೇಂದ್ರ ಸ್ಥಾಪನೆಯಾದರೆ ಇದು ದೇಶದ ಮೊದಲ ಜಾಗತಿಕ ಭಯೋತ್ಪಾದನೆ ನಿಗ್ರಹ ಹಾಗೂ ಆಘಾತ ನಿಗ್ರಹ ಕೇಂದ್ರ ಎನಿಸಲಿದೆ ಎಂದು ತಿಳಿದುಬಂದಿದೆ.

ಜೈಪುರ ಅಭಿವೃದ್ಧಿ ಪ್ರಾಧಿಕಾರ ಈಗಾಗಲೇ ಜಾಗ ಗುರುತಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರದಲ್ಲಿ ಭಯೋತ್ಪಾದನೆ ಚಟುವಟಿಕೆಗಳನ್ನು ಪ್ರಾಯೋಗಿಕ ಹಾಗೂ ತಾಂತ್ರಿಕವಾಗಿ ಹೇಗೆ ನಿಗ್ರಹಿಸಬೇಕು, ಹೇಗೆ ಎದುರಾಳಿಗಳ ದಾಳಿಗೆ ಪ್ರತಿ ದಾಳಿ ಮಾಡಬೇಕು, ಭಯೋತ್ಪಾದಕರ ಚಲನವಲನಗಳನ್ನು ಹೇಗೆ ಗುರುತಿಸಬೇಕು ಎಂಬುದರ ಕುರಿತು ಸೈನಿಕರಿಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search